ಬೇಡ.. ಬೇಡ.. ಅಂದ್ರೂ ಅದನ್ನೇ ಮಾಡುತ್ತಿದ್ದಾರಾ ಉಕ್ರೇನ್ ಅಧ್ಯಕ್ಷ?
ಉಕ್ರೇನ್ & ರಷ್ಯಾ ಯುದ್ಧ ನಿಲ್ಲಿಸಲು ಇಡೀ ಜಗತ್ತು ಇದೀಗ ಒಂದಾಗುತ್ತಿದೆ. ಅದ್ರಲ್ಲೂ ಈ ಜಂಜಾಟದ ಪರಿಣಾಮ ಬೇಸತ್ತಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಜಗತ್ತಿನ ಎದುರು ಬೇಡಿಕೊಂಡಿದ್ದರು. ಪ್ರಪಂಚವೇ ಒಂದಾಗಿ, ಉಕ್ರೇನ್ & ರಷ್ಯಾ ಯುದ್ಧ ನಿಲ್ಲಿಸಿ ದಯವಿಟ್ಟು ಎಂದು ವಿಶ್ವಸಂಸ್ಥೆಯಲ್ಲಿ ಬೇಡಿಕೆಯನ್ನ ಸಲ್ಲಿಸಿದ್ದರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ. ಇಷ್ಟೆಲ್ಲದರ ನಡುವೆ ದೊಡ್ಡಣ್ಣ ಅಮೆರಿಕ ಕೂಡ ಈ ವಿಷಯಕ್ಕೆ ಎಂಟ್ರಿಯಾಗಿದ್ದು, ರಷ್ಯಾ ಆಕ್ರೋಶ ಮತ್ತಷ್ಟು ಹೆಚ್ಚಾಗುತ್ತಾ? ಬನ್ನಿ ಈ ಬಗ್ಗೆ ಮಾಹಿತಿಯನ್ನು ಸಂಪೂರ್ಣ ತಿಳಿಯೋಣ.
ಉಕ್ರೇನ್ & ರಷ್ಯಾ ಯುದ್ಧ ಹಲವು ರೀತಿಯಲ್ಲಿ ಜಗತ್ತನ್ನು ಕಾಡುತ್ತಿದ್ದು, ಜನರು ಕೂಡ ಈ ವಿಚಾರದಲ್ಲಿ ಭಯಗೊಂಡಿದ್ದಾರೆ. 2020 ರಲ್ಲಿ 'ಕೊರೊನಾ' ಕಂಟಕ ಅಂಟಿದ ನಂತರ ಇಡೀ ಜಗತ್ತು ನರಳಿ ಹೋಗಿದ್ದು, ಆರ್ಥಿಕವಾಗಿ ಕೂಡ ಸಂಕಷ್ಟ ಎದುರಾಗಿದೆ. ಪರಿಸ್ಥಿತಿ ಕೈಮೀರಿ ಬಡ ದೇಶಗಳು ತುತ್ತು ಅನ್ನಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂಕಷ್ಟ ಇದ್ದಾಗಲೇ 2022 ರಲ್ಲಿ ಶುರುವಾಗಿದ್ದ ಉಕ್ರೇನ್ & ರಷ್ಯಾ ಯುದ್ಧ ಸಾಕಷ್ಟು ಅಲ್ಲೋಲ & ಕಲ್ಲೋಲ ಸೃಷ್ಟಿ ಮಾಡುತ್ತಿದೆ. ಈ ಯುದ್ಧದ ಪರಿಣಾಮ ಈಗಾಗಲೇ ಹಲವು ಕಡೆ ತಿಕ್ಕಾಟ ಕೂಡ ಶುರುವಾಗಿದೆ. ಹೀಗಾಗಿ ಉಕ್ರೇನ್ & ರಷ್ಯಾ ಯುದ್ಧ ನಿಲ್ಲಿಸಲು ಮಹತ್ವದ ಯೋಜನೆ ರೂಪಿಸಿದಂತೆ ಕಾಣುತ್ತಿದೆ.

ಬೈಡನ್ + ಝೆಲೆನ್ಸ್ಕಿ = ಯುದ್ಧಕ್ಕೆ ಬ್ರೇಕ್?
ಅಂದಹಾಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ವಿಶ್ವಸಂಸ್ಥೆ ಮಹಾ ಅಧಿವೇಶನ ಉದ್ದೇಶಿಸಿ ಮಾತನಾಡಿದ ನಂತರ, ಅಮೆರಿಕ ಅಧ್ಯಕ್ಷ ಜೋ ಬೈಡನ್ ಜೊತೆಗೆ ಮಾತುಕತೆಯನ್ನ ನಡೆಸಿದ್ದಾರೆ. ವೊಲೊಡಿಮಿರ್ ಝೆಲೆನ್ಸ್ಕಿ & ಜೋ ಬೈಡನ್ ನಡುವೆ ನಡೆದಿರುವ ಮಹತ್ವದ ದ್ವಿಪಕ್ಷೀಯ ಮಾತುಕತೆಯಲ್ಲಿ, ಯುದ್ಧಕ್ಕೆ ಬ್ರೇಕ್ ಹಾಕುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಮತ್ತೊಂದು ಕಡೆ ಜೋ ಬೈಡನ್ ಅವರ ಜೊತೆಗಿನ ಮಾತುಕತೆ ಬಗ್ಗೆ ಉಕ್ರೇನ್ ಅಧ್ಯಕ್ಷರಾದ ವೊಲೊಡಿಮಿರ್ ಝೆಲೆನ್ಸ್ಕಿ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಅಮೆರಿಕ ನೆರವು ಸ್ಮರಿಸಿದ ಉಕ್ರೇನ್
ರಷ್ಯಾ ವಿರುದ್ಧ ಉಕ್ರೇನ್ಗೆ ನೆರವು ನೀಡುತ್ತಿರುವ ಅಮೆರಿಕದ ಸಹಾಯವನ್ನು ಈಗ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ಮತ್ತೊಮ್ಮೆ ಮೆಲುಕು ಹಾಕಿಕೊಂಡಿದ್ದಾರೆ. ಅಲ್ಲದೆ, ಅಮೆರಿಕದ ನೆರವಿನ ಕಾರಣಕ್ಕೆ ಉಕ್ರೇನ್ಗೆ ತನ್ನ ಸ್ವಾತಂತ್ರ್ಯ ಉಳಿಸಿಕೊಳ್ಳಲು ಸಾಧ್ಯವಾಗಿದೆ. ಹಾಗೇ ಅಮೆರಿಕ ನೀಡುತ್ತಿರುವ ನೆರವಿನ ಪರಿಣಾಮ ಉಕ್ರೇನ್ ನೆಲದಲ್ಲಿ ಜೀವ ರಕ್ಷಣೆ ಕೂಡ ಸಾಧ್ಯವಾಗಿದೆ ಎಂದು ಬರೆದುಕೊಂಡಿದ್ದಾರೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ.
ಹಾಗೇ ಇದೇ ಸಮಯದಲ್ಲಿ ಯುದ್ಧ ಮುಗಿದ ನಂತರ ಕೂಡ ಜಿ7 ಒಕ್ಕೂಟ ಉಕ್ರೇನ್ ದೇಶಕ್ಕೆ ನೆರವು ನೀಡಲಿದೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ ವೊಲೊಡಿಮಿರ್ ಝೆಲೆನ್ಸ್ಕಿ. ಆದರೆ, ಈ ಬೆಳವಣಿಗೆ ರಷ್ಯಾಗೆ ಕೋಪ ತರಿಸುತ್ತಾ? ಯುದ್ಧ ನಿಲ್ಲಿಸಲು ಜಗತ್ತು ಪಡುತ್ತಿರುವ ಯತ್ನ ಫಲ ನೀಡುತ್ತಾ? ಮುಂದಿನ ದಿನಗಳಲ್ಲಿ ಮತ್ತೆ ಜಗತ್ತು ಶಾಂತವಾಗುತ್ತಾ? ಅನ್ನೋದನ್ನ ಕಾದು ನೋಡಬೇಕಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications