ದಾವೂದ್ ಮನೆ ವಿಳಾಸ: 9 ರಲ್ಲಿ 6 ಮಾತ್ರ ಸರಿಯಿದೆ : ಯುಎನ್
ಬೆಂಗಳೂರು, ಆಗಸ್ಟ್ 23: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅಡಗಿಕೊಂಡಿರುವ ಪಾಕಿಸ್ತಾನದ ವಿಳಾಸದ ಪಟ್ಟಿಯನ್ನು ವಿಶ್ವಸಂಸ್ಥೆಗೆ ಪರಿಶೀಲನೆಗಾಗಿ ಭಾರತ ಸಲ್ಲಿಸಿತ್ತು. ಈ ಪೈಕಿ 9 ವಿಳಾಸಗಳಲ್ಲಿ 3 ವಿಳಾಸಗಳು ತಪ್ಪು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಮಿತಿ ತಿಳಿಸಿದೆ. ಹಾಗೂ ಆ ಮೂರು ವಿಳಾಸಗಳನ್ನು ಪಟ್ಟಿಯಿಂದ ಕೈ ಬಿಡಲಾಗಿದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಮಿತಿಯು ನಡೆಸಿದ ಪರಿಶೀಲನೆಗೆ ಕಳಿಸಲಾದ ವಿಳಾಸಗಳ ಪೈಕಿ ಕೈ ಬಿಟ್ಟಿರುವ ಒಂದು ವಿಳಾಸ ವಿಶ್ವಸಂಸ್ಥೆಯ ಪಾಕಿಸ್ತಾನದ ರಾಯಭಾರಿ ಮಲೇಹಾ ಲೋಧಿ ಅವರಿಗೆ ಸೇರಿದ್ದು ಎಂದು ಸಮಿತಿ ತಿಳಿಸಿದೆ. ಆದರೆ ಉಳಿದ 6 ವಿಳಾಸಗಳನ್ನು ಯಾವುದೇ ತಿದ್ದುಪಡಿ ಮಾಡಿ ಪಟ್ಟಿಯಲ್ಲಿ ಉಳಿಸಲಾಗಿದೆ. [ಕರಾಚಿಯ ಕ್ಲಿಫ್ಟನ್ ಉಪನಗರದಲ್ಲೇ ದಾವೂದ್ ನೆಲೆ]

ಯಾವ ವಿಳಾಸ ತಪ್ಪು: ಕರಾಚಿಯ ಮಾರ್ಗಲ್ಲಾ ರೋಡ್ನ ಎಫ್-6/2, 22ನೇ ರಸ್ತೆ, ಮನೆ ನಂ 07 ವಿಳಾಸವು ಮಲೇಹಾ ಲೋಧಿ ಅವರಿಗೆ ಸೇರಿದೆ. ಜತೆಗೆ ಕರಾಚಿಯ ಕ್ಲಿಫ್ಟನ್ನ ತಲ್ವಾರ್ ಪ್ರದೇಶದ ಪರದೇಸಿ ಮನೆ ನಂ. 3, ಮೆಹ್ರಾನ್ ಚೌಕ, 8ನೇ ಮಹಡಿಯ ಮನೆ ಮತ್ತು 6/ಎ, ಜೌಬಮ್ ತಾಂಜೀಮ್ 5 ನೇ ಹಂತ, ರಕ್ಷಣಾ ವಸತಿ ಸಂಕೀರ್ಣ, ಕರಾಚಿ ಈ ವಿಳಾಸಗಳೂ ಸಹ ತಪ್ಪು ಎಂದು ವಿಶ್ವಸಂಸ್ಥೆ ತಿಳಿಸಿದೆ. [ದಾವೂದ್ ಕರೆ ಸ್ವೀಕರಿಸಿದ ಮಹಾರಾಷ್ಟ್ರದ ರಾಜಕಾರಣಿಗೆ ಯಾರು?]
ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿದ್ದಾನೆ ಎಂಬುದಕ್ಕೆ ಸಾಕ್ಷಿರೂಪವಾಗಿ ಮನೆ ವಿಳಾಸವನ್ನು ಕಳೆದ ವರ್ಷ ಆಗಸ್ಟ್ನಲ್ಲಿ ವಿಶ್ವಸಂಸ್ಥೆಗೆ ಭಾರತವು ಸಲ್ಲಿಸಿತ್ತು. ಅದರಲ್ಲಿ 9 ವಿಳಾಸಗಳನ್ನು ಪಟ್ಟಿ ಮಾಡಿ ದಾವೂದ್ ಇಬ್ರಾಹಿಂ ಈ ವಿಳಾಸಗಳಲ್ಲಿ ನಿರಂತರವಾಗಿ ತನ್ನ ವಾಸ್ತವ್ಯವನ್ನು ಬದಲಿಸುತ್ತಿರುತ್ತಾನೆ ಎಂದು ತಿಳಿಸಲಾಗಿತ್ತು. ಆದರೆ, ಪಾಕಿಸ್ತಾನ ಮಾತ್ರ ದಾವೂದ್ ಇಬ್ರಾಹಿಂ ತನ್ನ ದೇಶದಲ್ಲಿ ಇಲ್ಲ ಎಂದು ವಿಶ್ವಸಂಸ್ಥೆಯಲ್ಲಿ ನಿರಂತರವಾಗಿ ವಾದಿಸುತ್ತಾ ಬಂದಿದೆ. (ಪಿಟಿಐ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications