ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸ್ಥಾನ?
ನವದೆಹಲಿ, ಸೆಪ್ಟೆಂಬರ್. 15: ಭಾರತ ವಿಶ್ವದ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದು ಎಂದು ಈಗಾಗಲೇ ಗುರುತಿಸಿಕೊಂಡಿದ್ದು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿಯೂ ಸದ್ಯವೇ ಕಾಯಂ ಸದಸ್ಯತ್ವ ಪಡೆಯಲಿದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ಪುನಾರಚಿಸುವ ಕುರಿತ ಕರಡು ಪ್ರಸ್ತಾವನೆಗೆ ಎಲ್ಲ 193 ಸದಸ್ಯ ರಾಷ್ಟ್ರಗಳು ಒಪ್ಪಿಗೆ ಸೂಚಿಸಿವೆ. ಸದಸ್ಯ ರಾಷ್ಟ್ರಗಳ ಈ ತೀರ್ಮಾನವನ್ನು ಭಾರತ ಸ್ವಾಗತಿಸಿದೆ.[ವಿಶ್ವಸಂಸ್ಥೆಯಲ್ಲಿ ಮೋದಿ ಭಾಷಣ ಬಾಂಧವ್ಯ ಬೆಸುಗೆ]

15 ಸದಸ್ಯ ಬಲದ ಭದ್ರತಾ ಮಂಡಳಿಯಲ್ಲಿ ಅಮೆರಿಕ, ಚೀನಾ, ರಷ್ಯಾ ಸೇರಿ 5 ರಾಷ್ಟ್ರಗಳು ಕಾಯಂ ಸದಸ್ಯತ್ವ ಹೊಂದಿವೆ. ಭಾರತವನ್ನೂ ಕಾಯಂ ಸದಸ್ಯ ರಾಷ್ಟ್ರವನ್ನಾಗಿ ಪರಿಗಣಿಸಲು ಪೂರಕವಾಗಿ ಭದ್ರತಾ ಮಂಡಳಿಯ ಪುನರ್ ರಚನೆಗೆ ಸಂಬಂಧಿಸಿ ಅಭಿಪ್ರಾಯ ಮಂಡಿಸಲು ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳು ಸಮ್ಮತಿ ನೀಡಿವೆ.
ಆದರೆ ಭಾರತಕ್ಕೆ ಕಾಯಂ ಸದಸ್ಯತ್ವ ನೀಡಲು ಹಾಗೂ ಅದಕ್ಕೆ ಪೂರಕವಾಗಿ ಭದ್ರತಾ ಮಂಡಳಿ ಪುನರ್ ರಚನೆಗೆ ಅಮೆರಿಕ, ರಷ್ಯಾ ಮತ್ತು ಚೀನಾ ಸಮ್ಮತಿ ಸೂಚಿಸಿಲ್ಲ. ಮಂಡಳಿ ವಿಸ್ತರಣೆ ವಿರೋಧಿಸಿರುವ ಚೀನಾ, ಅಗತ್ಯಬಿದ್ದರೆ ಈ ಸಂಬಂಧ ಸದಸ್ಯ ರಾಷ್ಟ್ರಗಳ ಅಭಿಪ್ರಾಯ ಸಂಗ್ರಹಿಸಲು ಮತಕ್ಕೆ ಹಾಕಬೇಕು ಎಂದು ಹೇಳಿದೆ.[ವಿಶ್ವಸಂಸ್ಥೆಯಲ್ಲಿ ಕನ್ನಡ ಕಂಪು ಹರಿಸಿದ ಅನಂತ್ ಕುಮಾರ್]
ವಿಶ್ವಸಂಸ್ಥೆಯ 69ನೇ ಅವಧಿ ಮುಕ್ತಾಯವಾಗುತ್ತಿದ್ದು 70ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಕಳೆದ ಎರಡು ದಶಕದಿಂದ ವಿಶ್ವಸಂಸ್ಥೆಯಲ್ಲಿ ಕಾಯಂ ಸದಸ್ಯತ್ವ ಬೇಕು ಎಂದು ಭಾರತ ಹೇಳಿಕೊಳ್ಳುತ್ತಲೇ ಬಂದಿತ್ತು. ಭದ್ರತಾ ಮಂಡಳಿಯನ್ನು ಪುನಾರಚನೆ ಮಾಡಿದ್ದೇ ಆದಲ್ಲಿ ಭಾರತಕ್ಕೆ ಕಾಯಂ ಸದಸ್ಯತ್ವ ಸಿಗುವುದರಲ್ಲಿ ಅನುಮಾನವಿಲ್ಲ ಎಂದು ಹೇಳಲಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications