ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ರಷ್ಯಾ ಅಮಾನತು!
ಕೀವ್, ಏಪ್ರಿಲ್ 7: ಉಕ್ರೇನ್ ಮೇಲಿನ ನಿರಂತರ ಆಕ್ರಮಣದಿಂದ ರಷ್ಯಾ ಜಗತ್ತಿನ ಬಹುಪಾಲು ರಾಷ್ಟ್ರಗಳ ವಿರೋಧ ಕಟ್ಟಿಕೊಂಡಿದೆ. ಜಾಗತಿಕ ಮಟ್ಟದಲ್ಲಿ ತೀವ್ರ ಕೆಂಗಣ್ಣಿಗೆ ಗುರಿ ಆಗಿರುವ ರಷ್ಯಾವನ್ನು ವಿಶ್ವಸಂಸ್ಥೆ ಮಾನವ ಹಕ್ಕುಗಳ ಮಂಡಳಿಯಿಂದ ಗುರುವಾರ ಅಮಾನತುಗೊಳಿಸಲಾಗಿದೆ.
ವಿಶ್ವಸಂಸ್ಥೆಯ 197 ಸದಸ್ಯರಲ್ಲಿ ಮಾನವ ಹಕ್ಕುಗಳ ಮಂಡಳಿಯಿಂದ ರಷ್ಯಾವನ್ನು ಅಮಾನತುಗೊಳಿಸುವ ನಿರ್ಣಯದ ಮೇಲೆ ಮತ ಚಲಾಯಿಸಿತು. ಈ ನಿರ್ಣಯದ ಪರವಾಗಿ 93 ಮತಗಳು ಚಲಾವಣೆಯಾದರೆ, ವಿರುದ್ಧವಾಗಿ 24 ಮತಗಳು ಚಲಾವಣೆಯಾದವು. ಇದರ ಹೊರತಾಗಿ ಭಾರತ ಸೇರಿದಂತೆ 58 ರಾಷ್ಟ್ರಗಳು ಗೈರು ಹಾಜರಾಗಿದ್ದವು.
ಯಾವುದೇ ವಿಷಯದ ಕುರಿತು ಮತದಾನಕ್ಕೆ ಹಾಕಿದಾಗ ಸಾಮಾನ್ಯ ಸಭೆಯ ಮೂರನೇ ಎರಡರಷ್ಟು ಬಹುಮತವನ್ನು ಪಡೆದುಕೊಳ್ಳುವ ಅಗತ್ಯವಿರುತ್ತದೆ. ಅಂದರೆ 197 ಸದಸ್ಯರಲ್ಲಿ 99 ಮತಗಳು ಬೇಕಾಗಿರುತ್ತದೆ. ಆದರೆ ಇಲ್ಲಿ 58 ರಾಷ್ಟ್ರಗಳು ಮತದಾನದಿಂದ ಅಂತರ ಕಾಯ್ದುಕೊಂಡಿರುವ ಹಿನ್ನಲೆ ಈ ರಾಷ್ಟ್ರಗಳನ್ನು ಮತದಾನ ಪ್ರಕ್ರಿಯೆಯಲ್ಲಿ ಲೆಕ್ಕಕ್ಕೆ ತೆಗೆದುಕೊೊಳ್ಳುವುದಿಲ್ಲ.

ರಷ್ಯಾ ಯುದ್ಧಪರಾಧಿ ಎಂದ ಉಕ್ರೇನ್ ರಾಯಭಾರಿ:
ಉಕ್ರೇನ್ನ ವಿಶ್ವಸಂಸ್ಥೆಯ ರಾಯಭಾರಿ ಆಗಿರುವ ಸೆರ್ಗಿ ಕಿಸ್ಲಿಟ್ಯಾ, 193 ಸದಸ್ಯರ ಸಾಮಾನ್ಯ ಸಭೆಯಲ್ಲಿ ಮತದಾನದ ಮೊದಲು ಯುನೈಟೆಡ್ ಸ್ಟೇಟ್ಸ್ ಪ್ರಾರಂಭಿಸಿದ ನಿರ್ಣಯ ಪರಿಚಯಿಸಿದರು. ರಷ್ಯಾವು "ಭೀಕರ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ದುರುಪಯೋಗ ಮಾಡಿದೆ, ಅದು ಯುದ್ಧ ಅಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳಿಗೆ ಸಮನಾಗಿರುತ್ತದೆ," ಎಂದು ಅವರು ಹೇಳಿದರು.

ಶಾಂತಿ ಮತ್ತು ಭದ್ರತೆಯ ತಳಹದಿಗೆ ಧಕ್ಕೆ:
ರಷ್ಯಾದ ಕ್ರಮಗಳು ಮಸುಕಾಗಿವೆ. ರಷ್ಯಾ ಕೇವಲ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಮಾಡುತ್ತಿಲ್ಲ, ಅದು ಅಂತರಾಷ್ಟ್ರೀಯ ಶಾಂತಿ ಮತ್ತು ಭದ್ರತೆಯ ತಳಹದಿಯನ್ನು ಅಲುಗಾಡಿಸುತ್ತಿದೆ," ಎಂದು ದೂಷಿಸಿದರು.
ನಿರ್ಣಯದ ವಿರುದ್ಧ ಮತ ಚಲಾವಣೆಗೆ ರಷ್ಯಾ ಮನವಿ:
ರಷ್ಯಾದ ಉಪ ರಾಯಭಾರಿ ಗೆನ್ನಡಿ ಕುಜ್ಮಿನ್ ಅವರು ನಿರ್ಣಯದ ವಿರುದ್ಧ ಮತ ಚಲಾಯಿಸುವಂತೆ ಸದಸ್ಯರನ್ನು ಒತ್ತಾಯಿಸಿದರು. "ನಾವು ಇಂದು ನೋಡುತ್ತಿರುವುದು ಯುನೈಟೆಡ್ ಸ್ಟೇಟ್ಸ್ ತನ್ನ ಪ್ರಬಲ ಸ್ಥಾನ ಮತ್ತು ಸಂಪೂರ್ಣ ನಿಯಂತ್ರಣವನ್ನು ಉಳಿಸಿಕೊಳ್ಳುವ ಪ್ರಯತ್ನವಾಗಿದೆ. ನಮ್ಮ ವಿರುದ್ಧ ಪ್ರದರ್ಶಿಸಿದ ಘಟನೆಗಳು ಮತ್ತು ವ್ಯಾಪಕವಾಗಿ ಪ್ರಸಾರವಾದ ನಕಲಿ ಆಧಾರದ ಮೇಲಿನ ಸುಳ್ಳು ಆರೋಪಗಳನ್ನು ನಾವು ತಿರಸ್ಕರಿಸುತ್ತೇವೆ," ಎಂದು ಅವರು ಹೇಳಿದರು.

ಸದಸ್ಯತ್ವ ಕಳೆದುಕೊಂಡ 2ನೇ ರಾಷ್ಟ್ರ ರಷ್ಯಾ:
2006 ರಲ್ಲಿ ಸ್ಥಾಪಿಸಲಾದ ಮಾನವ ಹಕ್ಕುಗಳ ಕೌನ್ಸಿಲ್ನಲ್ಲಿ ಸದಸ್ಯತ್ವದ ಹಕ್ಕುಗಳನ್ನು ಕಳೆದುಕೊಂಡ ಎರಡನೇ ದೇಶ ರಷ್ಯಾ ಆಗಿದೆ. ಉತ್ತರ ಆಫ್ರಿಕಾದ ದೇಶದಲ್ಲಿ ದಂಗೆಯು ದೀರ್ಘಕಾಲದ ನಾಯಕ ಮೊಮ್ಮರ್ ಗಡಾಫಿ ಅವರನ್ನು ಕೆಳಗಿಳಿಸಿದಾಗ 2011ರಲ್ಲಿ ಲಿಬಿಯಾವನ್ನು ಅಮಾನತುಗೊಳಿಸಲಾಗಿತ್ತು. ಮಾನವ ಹಕ್ಕುಗಳ ಮಂಡಳಿಯು ಜಿನೀವಾದಲ್ಲಿದ್ದು, ಅದರ ಸದಸ್ಯರನ್ನು 193-ರಾಷ್ಟ್ರಗಳ ಸಾಮಾನ್ಯ ಸಭೆಯಿಂದ ಮೂರು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗುತ್ತದೆ.
ಮಾನವ ಹಕ್ಕುಗಳ ಮಂಡಳಿಯನ್ನು ಸ್ಥಾಪಿಸಿದ ಮಾರ್ಚ್ 2006ರ ನಿರ್ಣಯವು "ಮಾನವ ಹಕ್ಕುಗಳ ಸಮಗ್ರ ಮತ್ತು ವ್ಯವಸ್ಥಿತ ಉಲ್ಲಂಘನೆಗಳನ್ನು ಮಾಡುವ" ದೇಶದ ಸದಸ್ಯತ್ವ ಹಕ್ಕುಗಳನ್ನು ಸಾಮಾನ್ಯ ಸಭೆಯಲ್ಲಿ ಅಮಾನತುಗೊಳಿಸಬಹುದು ಎಂದು ಹೇಳುತ್ತದೆ.

ರಷ್ಯಾ ಆಕ್ರಮಣದ ಕುರಿತು ತೀವ್ರ ಕಳವಳ:
"ಉಕ್ರೇನ್ನಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳು ಮತ್ತು ಮಾನವೀಯ ಬಿಕ್ಕಟ್ಟಿನ ಬಗ್ಗೆ ಗುರುವಾರದ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ವಿಶೇಷವಾಗಿ ಉಕ್ರೇನ್ ಮೇಲೆ ನಡೆಸುತ್ತಿರುವ ಯುದ್ಧದಿಂದಾಗಿ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ದುರುಪಯೋಗಗಳ ವರದಿಗಳ ಬಗ್ಗೆ ಹಾಗೂ ಅಂತರರಾಷ್ಟ್ರೀಯ ಮಾನವೀಯ ಕಾನೂನಿನ ಉಲ್ಲಂಘನೆಗಳ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದೆ. ಇದರಲ್ಲಿ ಮಾನವ ಹಕ್ಕುಗಳ ಸಮಗ್ರ ಮತ್ತು ವ್ಯವಸ್ಥಿತ ಉಲ್ಲಂಘನೆ ಮತ್ತು ದುರುಪಯೋಗವೂ ಸೇರಿದೆ."
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications