India Vs Pakistan: ಭಾರತ & ಪಾಕಿಸ್ತಾನಕ್ಕೆ ಶಾಂತಿಯ ಪಾಠ ಮಾಡಿದ ವಿಶ್ವಸಂಸ್ಥೆ
ಭಾರತ ಮತ್ತು ಪಾಕಿಸ್ತಾನದ ನಡುವೆ ಮತ್ತೊಂದು ಯುದ್ಧ ನಡೆಯುವ ಎಲ್ಲಾ ಲಕ್ಷಣ ಈಗ ಗೋಚರಿಸುತ್ತಿದೆ. ಕಾಶ್ಮೀರದ ಪಹಲ್ಗಾಮ್ ಮೇಲೆ ಉಗ್ರರು ದಾಳಿ ನಡೆಸಿದ ನಂತರ ಪರಿಸ್ಥಿತಿ ಕೈಮೀರಿ ಹೋಗಿದ್ದು, ಎರಡೂ ದೇಶಗಳು ಯಾವುದೇ ಕ್ಷಣದಲ್ಲಿ ಯುದ್ಧ ಆರಂಭಿಸುವ ಭೀತಿ ಆವರಿಸಿದೆ. ಇಂತಹ ಸಮಯದಲ್ಲಿ ಜಾಗತಿಕ ಸಮುದಾಯ ಭಾರತದ ಪರವಾಗಿ ನಿಲ್ಲುತ್ತಿದ್ದು, ಉಗ್ರರಿಗೆ ತಕ್ಕ ಪಾಠ ಕಲಿಸಲು ಆಗ್ರಹಿಸುತ್ತಿದೆ. ಆದರೆ ವಿಶ್ವಸಂಸ್ಥೆ ಮಾತ್ರ ಭಾರತ & ಪಾಕಿಸ್ತಾನಕ್ಕೆ ಶಾಂತಿಯ ಪಾಠ ಮಾಡಿದೆ.
ಜಾಗತಿಕ ಮಟ್ಟದಲ್ಲಿ 2 ದೊಡ್ಡ ಯುದ್ಧಗಳು ನಡೆಯುತ್ತಿದ್ದು, ಒಂದು ಕಡೆ ಇಸ್ರೇಲ್ & ಗಾಜಾ ನಡುವೆ ತಿಕ್ಕಾಟ ನಡೆಯುತ್ತಿದ್ದರೆ ಇನ್ನೊಂದು ಕಡೆ ರಷ್ಯಾ & ಉಕ್ರೇನ್ ಕೂಡ ಬಡಿದಾಡ್ತಿವೆ. ಇದರ ನಡುವೆ ಮತ್ತೊಂದು ಯುದ್ಧ ಕೂಡ ಶುರುವಾದರೆ ಜಾಗತಿಕ ಸಮುದಾಯ ನಲುಗಿ, ಬೆಚ್ಚಿ ಬೀಳುವುದು ಗ್ಯಾರಂಟಿ. ಇಂತಹ ಸಮಯದಲ್ಲಿ ವಿಶ್ವಸಂಸ್ಥೆ ಮಧ್ಯಪ್ರವೇಶ ಮಾಡಿದ್ದು ಭಾರತ & ಪಾಕಿಸ್ತಾನ ನಡುವಿನ ತಿಕ್ಕಾಟವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಇದರ ಜೊತೆಗೆ ಶಾಂತಿಯ ಪಾಠವನ್ನೂ ಮಾಡಿದೆ ವಿಶ್ವಸಂಸ್ಥೆ.

ಉಗ್ರರ ಕಾರ್ಖಾನೆ ಆಗಿದೆ ಪಾಕಿಸ್ತಾನ!
ಪಾಪಿ ಪಾಕಿಸ್ತಾನ ಉದ್ಧಾರ ಆಗುವ ಕೆಲಸಕ್ಕಿಂತ ಹಾಳು ಮಾಡುವ ಕೆಲಸವನ್ನೇ ಹೆಚ್ಚಿಸಿದೆ. ಪಾಕಿಸ್ತಾನ ಉಗ್ರರ ಕಾರ್ಖಾನೆ ಆಗಿದ್ದು, ಪದೇ ಪದೇ ಅಲ್ಲಿಂದಲೇ ಉಗ್ರರು ನುಸುಳಿ ಬರ್ತಾ ಇದ್ದಾರೆ. ಈಗಲೂ ಪಾಕಿಸ್ತಾನದ ಮೂಲಕ ನುಗ್ಗಿ ಬಂದಿದ್ದ ಉಗ್ರರು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ದಾಳಿ ನಡೆಸಿ 26 ಜನರನ್ನ ಕೊಲೆ ಮಾಡಿದ್ದಾರೆ.
ಪ್ರವಾಸಕ್ಕೆ ಎಂದು ಪಹಲ್ಗಾಮ್ ಪ್ರದೇಶಕ್ಕೆ ಹೋಗಿದ್ದ ಕರ್ನಾಟಕ ಸೇರಿದಂತೆ ಭಾರತದ ಹಲವು ರಾಜ್ಯಗಳ ಪ್ರಜೆಗಳು, ಕಾಶ್ಮೀರದ ಸುಂದರ ವಾತಾವರಣದಲ್ಲಿ ಸುತ್ತಾಡುವ ಸಮಯದಲ್ಲೇ ಪಾಪಿ ಉಗ್ರರು ದಿಢೀರ್ ಗನ್ ಹಿಡಿದು ನುಗ್ಗಿ ಅಮಾಯಕರ ಮೇಲೆ ಶೂಟ್ ಮಾಡಿ ಹತ್ಯೆ ಮಾಡಿದ್ದರು. ಹೀಗಿದ್ದಾಗ ವಿಶ್ವಸಂಸ್ಥೆ ಕೂಡ ಉಗ್ರರ ದಾಳಿಯನ್ನ ಖಂಡಿಸಿದ್ದು, ಪರಿಸ್ಥಿತಿಯನ್ನು ಭಾರತ & ಪಾಕಿಸ್ತಾನ ಸೂಕ್ತವಾಗಿ ನಿಭಾಯಿಸಲಿ ಎಂಬ ಸಲಹೆ ನೀಡಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications