India Vs Pakistan: ಭಾರತ & ಪಾಕಿಸ್ತಾನಕ್ಕೆ ಶಾಂತಿಯ ಪಾಠ ಮಾಡಿದ ವಿಶ್ವಸಂಸ್ಥೆ
ಭಾರತ ಮತ್ತು ಪಾಕಿಸ್ತಾನದ ನಡುವೆ ಮತ್ತೊಂದು ಯುದ್ಧ ನಡೆಯುವ ಎಲ್ಲಾ ಲಕ್ಷಣ ಈಗ ಗೋಚರಿಸುತ್ತಿದೆ. ಕಾಶ್ಮೀರದ ಪಹಲ್ಗಾಮ್ ಮೇಲೆ ಉಗ್ರರು ದಾಳಿ ನಡೆಸಿದ ನಂತರ ಪರಿಸ್ಥಿತಿ ಕೈಮೀರಿ ಹೋಗಿದ್ದು, ಎರಡೂ ದೇಶಗಳು ಯಾವುದೇ ಕ್ಷಣದಲ್ಲಿ ಯುದ್ಧ ಆರಂಭಿಸುವ ಭೀತಿ ಆವರಿಸಿದೆ. ಇಂತಹ ಸಮಯದಲ್ಲಿ ಜಾಗತಿಕ ಸಮುದಾಯ ಭಾರತದ ಪರವಾಗಿ ನಿಲ್ಲುತ್ತಿದ್ದು, ಉಗ್ರರಿಗೆ ತಕ್ಕ ಪಾಠ ಕಲಿಸಲು ಆಗ್ರಹಿಸುತ್ತಿದೆ. ಆದರೆ ವಿಶ್ವಸಂಸ್ಥೆ ಮಾತ್ರ ಭಾರತ & ಪಾಕಿಸ್ತಾನಕ್ಕೆ ಶಾಂತಿಯ ಪಾಠ ಮಾಡಿದೆ.
ಜಾಗತಿಕ ಮಟ್ಟದಲ್ಲಿ 2 ದೊಡ್ಡ ಯುದ್ಧಗಳು ನಡೆಯುತ್ತಿದ್ದು, ಒಂದು ಕಡೆ ಇಸ್ರೇಲ್ & ಗಾಜಾ ನಡುವೆ ತಿಕ್ಕಾಟ ನಡೆಯುತ್ತಿದ್ದರೆ ಇನ್ನೊಂದು ಕಡೆ ರಷ್ಯಾ & ಉಕ್ರೇನ್ ಕೂಡ ಬಡಿದಾಡ್ತಿವೆ. ಇದರ ನಡುವೆ ಮತ್ತೊಂದು ಯುದ್ಧ ಕೂಡ ಶುರುವಾದರೆ ಜಾಗತಿಕ ಸಮುದಾಯ ನಲುಗಿ, ಬೆಚ್ಚಿ ಬೀಳುವುದು ಗ್ಯಾರಂಟಿ. ಇಂತಹ ಸಮಯದಲ್ಲಿ ವಿಶ್ವಸಂಸ್ಥೆ ಮಧ್ಯಪ್ರವೇಶ ಮಾಡಿದ್ದು ಭಾರತ & ಪಾಕಿಸ್ತಾನ ನಡುವಿನ ತಿಕ್ಕಾಟವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಇದರ ಜೊತೆಗೆ ಶಾಂತಿಯ ಪಾಠವನ್ನೂ ಮಾಡಿದೆ ವಿಶ್ವಸಂಸ್ಥೆ.

ಉಗ್ರರ ಕಾರ್ಖಾನೆ ಆಗಿದೆ ಪಾಕಿಸ್ತಾನ!
ಪಾಪಿ ಪಾಕಿಸ್ತಾನ ಉದ್ಧಾರ ಆಗುವ ಕೆಲಸಕ್ಕಿಂತ ಹಾಳು ಮಾಡುವ ಕೆಲಸವನ್ನೇ ಹೆಚ್ಚಿಸಿದೆ. ಪಾಕಿಸ್ತಾನ ಉಗ್ರರ ಕಾರ್ಖಾನೆ ಆಗಿದ್ದು, ಪದೇ ಪದೇ ಅಲ್ಲಿಂದಲೇ ಉಗ್ರರು ನುಸುಳಿ ಬರ್ತಾ ಇದ್ದಾರೆ. ಈಗಲೂ ಪಾಕಿಸ್ತಾನದ ಮೂಲಕ ನುಗ್ಗಿ ಬಂದಿದ್ದ ಉಗ್ರರು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ದಾಳಿ ನಡೆಸಿ 26 ಜನರನ್ನ ಕೊಲೆ ಮಾಡಿದ್ದಾರೆ.
ಪ್ರವಾಸಕ್ಕೆ ಎಂದು ಪಹಲ್ಗಾಮ್ ಪ್ರದೇಶಕ್ಕೆ ಹೋಗಿದ್ದ ಕರ್ನಾಟಕ ಸೇರಿದಂತೆ ಭಾರತದ ಹಲವು ರಾಜ್ಯಗಳ ಪ್ರಜೆಗಳು, ಕಾಶ್ಮೀರದ ಸುಂದರ ವಾತಾವರಣದಲ್ಲಿ ಸುತ್ತಾಡುವ ಸಮಯದಲ್ಲೇ ಪಾಪಿ ಉಗ್ರರು ದಿಢೀರ್ ಗನ್ ಹಿಡಿದು ನುಗ್ಗಿ ಅಮಾಯಕರ ಮೇಲೆ ಶೂಟ್ ಮಾಡಿ ಹತ್ಯೆ ಮಾಡಿದ್ದರು. ಹೀಗಿದ್ದಾಗ ವಿಶ್ವಸಂಸ್ಥೆ ಕೂಡ ಉಗ್ರರ ದಾಳಿಯನ್ನ ಖಂಡಿಸಿದ್ದು, ಪರಿಸ್ಥಿತಿಯನ್ನು ಭಾರತ & ಪಾಕಿಸ್ತಾನ ಸೂಕ್ತವಾಗಿ ನಿಭಾಯಿಸಲಿ ಎಂಬ ಸಲಹೆ ನೀಡಿದೆ.
-
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು -
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ












Click it and Unblock the Notifications