Get Updates
Get notified of breaking news, exclusive insights, and must-see stories!

ಕಾನೂನು, ನ್ಯಾಯಾಂಗದ ಸ್ವಾತಂತ್ರ್ಯ ಗೌರವಿಸುವುದು ಪ್ರಜಾಪ್ರಭುತ್ವದ ಮೂಲಾಧಾರ: ರಾಹುಲ್ ಪ್ರಕರಣಕ್ಕೆ ಅಮೆರಿಕಾ ಪ್ರತಿಕ್ರಿಯೆ

ವಾಷಿಂಗ್ಟನ್, ಮಾರ್ಚ್. 28: ಕಾನೂನು ಮತ್ತು ನ್ಯಾಯಾಂಗದ ಸ್ವಾತಂತ್ರ್ಯವನ್ನು ಗೌರವಿಸುವುದು ಯಾವುದೇ ಪ್ರಜಾಪ್ರಭುತ್ವದ ಮೂಲಾಧಾರವಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್ ಮಂಗಳವಾರ ಹೇಳಿದೆ. ಭಾರತದ ನ್ಯಾಯಾಲಯಗಳಲ್ಲಿ ನಡೆಯುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪ್ರಕರಣವನ್ನು ಅಮೆರಿಕಾ ವೀಕ್ಷಿಸುತ್ತಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಭಾರತದ ನ್ಯಾಯಾಲಯಗಳಲ್ಲಿ ರಾಹುಲ್ ಗಾಂಧಿ ಅವರ ಪ್ರಕರಣವನ್ನು ಯುನೈಟೆಡ್ ಸ್ಟೇಟ್ಸ್ ವೀಕ್ಷಿಸುತ್ತಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್ ಅವರು ಮಂಗಳವಾರ ಹೇಳಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಹಂಚಿಕೆಯ ಬದ್ಧತೆಯ ಮೇಲೆ ಭಾರತ ಸರ್ಕಾರದೊಂದಿಗೆ ಅಮೆರಿಕ ತೊಡಗಿಸಿಕೊಂಡಿದೆ ಎಂದು ಸೇರಿಸಿದ್ದಾರೆ.

United States Reaction on Rahul Gandhi Disqualified as a member of parliament

"ಕಾನೂನಿನ ಆಳ್ವಿಕೆ ಮತ್ತು ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಗೌರವವು ಯಾವುದೇ ಪ್ರಜಾಪ್ರಭುತ್ವದ ಮೂಲಾಧಾರವಾಗಿದೆ. ನಾವು ಭಾರತೀಯ ನ್ಯಾಯಾಲಯಗಳಲ್ಲಿ ನಡೆಯುತ್ತಿರುವ ರಾಹುಲ್ ಗಾಂಧಿ ಪ್ರಕರಣವನ್ನು ಗಮನಿಸುತ್ತಿದ್ದೇವೆ" ಎಂದು ಭಾರತೀಯ ಸಂಸತ್ತಿನಲ್ಲಿ ರಾಹುಲ್ ಗಾಂಧಿ ಅವರನ್ನು ಉಚ್ಚಾಟನೆಗೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತಮ್ಮ 'ಮೋದಿ ಉಪನಾಮ' ಟೀಕೆಗಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೊಳಗಾದ ಒಂದು ದಿನದ ನಂತರ ಲೋಕಸಭೆಯ ಸದಸ್ಯತ್ವದಿಂದ ಶುಕ್ರವಾರ ಅನರ್ಹಗೊಂಡಿದ್ದಾರೆ. ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದಿಂದ ಸಂಸದರಾಗಿದ್ದರು.

"ನಮ್ಮ ಸಂಬಂಧಗಳು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಒಳಗೊಂಡಂತೆ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ನಮ್ಮ ಹಂಚಿಕೆಯ ಬದ್ಧತೆಯ ಮೇಲೆ ಭಾರತ ಸರ್ಕಾರದೊಂದಿಗೆ ತೊಡಗಿಸಿಕೊಂಡಿದೆ. ನಾವು ಪ್ರಜಾಪ್ರಭುತ್ವದ ತತ್ವಗಳ ಪ್ರಾಮುಖ್ಯತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಮಾನವ ಹಕ್ಕುಗಳ ರಕ್ಷಣೆಯನ್ನು ನಮ್ಮ ಎರಡೂ ಪ್ರಜಾಪ್ರಭುತ್ವಗಳನ್ನು ಬಲಪಡಿಸುವ ಕೀಲಿಯಾಗಿ ಎತ್ತಿ ತೋರಿಸುವುದನ್ನು ಮುಂದುವರಿಸುತ್ತೇವೆ" ಎಂದು ವೇದಾಂತ್ ಪಟೇಲ್ ಹೇಳಿದ್ದಾರೆ.

United States Reaction on Rahul Gandhi Disqualified as a member of parliament

2019 ರಲ್ಲಿ ಕರ್ನಾಟಕದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾಡಿದ 'ಮೋದಿ ಉಪನಾಮ' ಹೇಳಿಕೆಗಾಗಿ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಈ ಬೆಳವಣಿಗೆ ನಡೆದಿದೆ.

2019 ರ ಏಪ್ರಿಲ್‌ನಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಲೋಕಸಭಾ ಚುನಾವಣಾ ಚುನಾವಣಾ ಮೆರವಣಿಗೆಯಲ್ಲಿ ರಾಹುಲ್ ಗಾಂಧಿಯವರು "ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಮಾಡಿಕೊಂಡಿರುವುದು ಹೇಗೆ" ಎಂದು ಹೇಳಿಕೆ ನೀಡಿದರು. ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಸೂರತ್ ಪಶ್ಚಿಮದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ದಾಖಲಿಸಿದ್ದಾರೆ.

ಸೂರತ್ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಶುಕ್ರವಾರ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಗಿತ್ತು. ಸೋಮವಾರ ಅವರಿಗೆ ದೆಹಲಿಯಲ್ಲಿರುವ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಅಧಿಕೃತ ನೋಟಿಸ್ ಕಳುಹಿಸಲಾಗಿದೆ. ಸೂಚನೆ ಪ್ರಕಾರ, ಸಂಸದರಾದ ರಾಹುಲ್‌ ಗಾಂಧಿ ಅವರು ಏಪ್ರಿಲ್ 22 ರೊಳಗೆ ಲುಟ್ಯೆನ್ಸ್ ದೆಹಲಿಯ 12 ತುಘಲಕ್ ಲೇನ್‌ನಲ್ಲಿರುವ 5 ಕೋಣೆಗಳ ಟೈಪ್ 8 ಬಂಗಲೆಯನ್ನು ಖಾಲಿ ಮಾಡಬೇಕಾಗುತ್ತದೆ.

ಇನ್ನು, ಅದಾನಿ ವಿವಾದ ಮತ್ತು ಲೋಕಸಭೆಯಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಹಲವು ವಿರೋಧ ಪಕ್ಷದ ಸಂಸದರು ಸೋಮವಾರ ಕಪ್ಪು ಬಟ್ಟೆ ಧರಿಸಿ ಸಂಸತ್ತಿನಿಂದ ವಿಜಯ್ ಚೌಕ್‌ಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+