ಕಡಿಮೆ ಇಂಗಾಲ ಹೊರಸೂಸುವ ಸಾರಿಗೆ ವ್ಯವಸ್ಥೆ ಅಗತ್ಯ: ಡೇವಿಡ್ ಹಡ್ಸನ್
ಲಂಡನ್, ಜೂನ್ 21: ಎರಡನೇ ದಿನದ 5ನೇ ಯುಕೆ-ಇಂಡಿಯಾ ಲೀಡರ್ ಶಿಪ್ ಕಾನ್ಕ್ಲೇವ್ ಇಲ್ಲಿನ ಬಕಿಂಗ್ ಹ್ಯಾಮ್ ಶೈರ್ ನಲ್ಲಿ ನಡೆಯುತ್ತಿದೆ.
ಇಂದು ನಡೆದ 'ಬಿಲ್ಡಿಂಗ್ ಮಾಡರ್ನ್ ಎಕಾನಾಮೀಸ್ - ಸ್ಮಾರ್ಟ್ ಸಿಟೀಸ್ ಆ್ಯಂಡ್ ಸ್ಮಾರ್ಟ್ ಪೀಪಲ್' ಎಂಬ ವಿಷಯದ ಮೇಲಿನ ಪ್ಯಾನಲ್ ಚರ್ಚೆಯಲ್ಲಿ ಗಣ್ಯಾತಿಗಣ್ಯರು ಭಾಗವಹಿಸಿದ್ದರು.
ಇದರಲ್ಲಿ ಮಾತನಾಡಿದ ಓಲಾ ಕಂಪನಿಯ 'ಸ್ಟ್ರಾಟೆಜಿಕ್ ಇನಿಶಿಯೇಟಿವ್' ಮುಖ್ಯಸ್ಥ ಆನಂದ್ ಶಾ, "ನಾವು ವಾಹನಗಳ ಜೊತೆಗಿನ ನಮ್ಮ ಸಂಬಂಧವನ್ನು ಪುನರ್ ವಿಮರ್ಶೆ ಮಾಡಬೇಕಾಗಿದೆ," ಎಂದರು.

"ವೈಯಕ್ತಿಕವಾಗಿ ವಾಹನಗಳ ಒಡೆತನ ಕನಿಷ್ಠ ಇರುವ ದೇಶ ಭಾರತ. ಭಾರತದಲ್ಲಿ, ಕ್ಯಾಬ್ ಹಂಚಿಕೊಳ್ಳುವ ಪರಿಪಾಠ ಮೊದಲಿನಿಂದ ಅಸ್ತಿತ್ವದಲ್ಲಿದೆ. ಈ ಕ್ಷೇತ್ರದಲ್ಲಿ ಸಹಭಾಗಿಯಾಗಲು ಬ್ರಿಟನ್ ಗೆ ದೊಡ್ಡ ಅವಕಾಶ," ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಟೆಕ್ ಮಹೀಂದ್ರದ ಉಪೇಂದ್ರ ಧರ್ಮಾಧಿಕಾರಿ, "ರೈತರಿಂದ ಚಮದವರೆಗಿನ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಭಾರತ ಮತ್ತು ಬ್ರಿಟನ್ ಹೇಗೆ ಉಜ್ವಲ ಉದಾಹರಣೆಗಳಾಗಿವೆ ಎಂಬುದನ್ನು ನಾವು ಅನ್ವೇಷಿಸಬೇಕು," ಎಂದರು.
ಇನ್ಫೋಸಿಸ್ ನ ಮೊಹಮ್ಮದ್ ಅನಿಸ್ ಮಾತನಾಡಿ, "ವಿದ್ಯುತ್ ದಿನದಿಂದ ದಿನಕ್ಕೆ ಅಗ್ಗವಾಗುತ್ತಿದೆ. ಇದರ ಜೊತೆಗೆ ಶೇಖರಣಾ ದರವು ಕಡಿಮೆಯಾಗುತ್ತಿದೆ. ಮೇಲ್ವಿಚಾರಣೆಯಿಲ್ಲದ ಯಂತ್ರ ಕಲಿಕೆಯ ಮೂಲಕ ಆನ್ಲೈನ್ ನಲ್ಲಿ ಮಾಹಿತಿಯ ತಾರತಮ್ಯವನ್ನು ತೆಗೆದು ಹಾಕಬಹುದು," ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ ಮಾತನಾಡಿದ ಟಾಟಾ ಮೋಟರ್ಸ್ ನ ಡೇವಿಡ್ ಹಡ್ಸನ್, ಭಾರತ ಮತ್ತು ಬ್ರಿಟನ್ ಗೆ ಕಡಿಮೆ ಇಂಗಾಲು ಹೊರಸೂಸುವ ಸಾರಿಗೆ ವ್ಯವಸ್ಥೆ ಅಗತ್ಯವಾಗಿದೆ ಎಂದು ವಿಶ್ಲೇಷಿಸಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications