ಅ.12: ದೇಶ, ವಿದೇಶ ಸುದ್ದಿಗಳ ಹೆಡ್ ಲೈನ್ಸ್
ಬೆಂಗಳೂರು, ಅ.12: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
15.05: ಹುಡ್ ಹುಡ್ ಚಂಡಮಾರುತ ದಾಳಿಗೆ ಸಿಲುಕಿರುವ ವಿಶಾಖಪಟ್ಟಣಂನಲ್ಲಿ ಇನ್ನೆರಡು ದಿನಗಳ ಮಳೆ ಸುರಿಯುವ ಮುನ್ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೂರನೇ ಏಕದಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಮುಂದಿನ ಬದಲಾವಣೆ ಬಗ್ಗೆ ತಿಳಿಸಲಾಗುವುದು ಎಂದು ಬಿಸಿಸಿಐ ಹೇಳಿದೆ.
12.20:ಆಂಧ್ರ ಕರಾವಳಿಯಲ್ಲಿ ಹುಡ್ ಹುಡ್ ಚಂಡ ಮಾರುತದ ಬೀಸುತ್ತಿರುವ ಪರಿಣಾಮ ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಕ್ರಿಕೆಟ್ ಪಂದ್ಯ ನಡೆಯುವುದು ಅನುಮಾನ ಎಂಬ ಸುದ್ದಿ ಬಂದಿದೆ. ಅದರೆ. ವಿಶಾಖಪಟ್ಟಣಂನಲ್ಲಿ ಅ.14 ರಂದು ನಿಗದಿಯಂತೆಯೇ ಪಂದ್ಯ ನಡೆಯಲಿದೆ.
ಪಂದ್ಯವನ್ನು ಬೇರೆಡೆಗೆ ವರ್ಗಾಯಿಸುವುದು ಅಷ್ಟೊಂದು ಸುಲಭದ ಮಾತಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಸಂಜಯ್ ಪಟೇಲ್ ಪಿಟಿಐಗೆ ತಿಳಿಸಿದ್ದಾರೆ. [ಚಂಡಮಾರುತ ಅಪ್ಡೇಟ್ಸ್]
12.10: ಸ್ವಾತಂತ್ರ ಹೋರಾಟಗಾರ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ನೇತೃತ್ವದ ಇಂಡಿಯನ್ ನ್ಯಾಷನಲ್ ಆರ್ಮಿಯ ಯೋಧ ಕ್ಯಾಪ್ಟನ್ ಅಬ್ಬಾಸ್ ಅಲಿ ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆಲಿಘಡ್ ನ ಜವಾಹರಲಾಲ್ ನೆಹರೂ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿಭಾನುವಾರ ನಿಧನರಾದ ಅಲಿ ಅವರಿಗೆ 92 ವರ್ಷ ವಯಸ್ಸಾಗಿತ್ತು.

12.00: ವಿರಾಟ್ ಕೊಹ್ಲಿ ಮತ್ತು ಸುರೇಶ್ ರೈನಾ ನಾಲ್ಕನೇ ವಿಕೆಟ್ಗೆ ದಾಖಲಿಸಿದ ಶತಕದ ಜೊತೆಯಾಟ, ಧೋನಿ ಅರ್ಧಶತಕ, ಮಹಮ್ಮದ್ ಶಮಿ 4 ವಿಕೆಟ್ ನೆರವಿನಲ್ಲಿ ಟೀಮ್ ಇಂಡಿಯಾ ದೆಹಲಿಯಲ್ಲಿ ನಿನ್ನೆ ನಡೆದ ಪ್ರವಾಸಿ ವಿಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಸುಲಭ ಜಯ ದಾಖಲಿಸಿದೆ.
11.45: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟಿಡ್(RIL) ಬೋರ್ಡ್ ಗೆ ಮುಖೇಶ್ ಅಂಬಾನಿ ಅವರ ಮಕ್ಕಳಾದ ಅಕಾಶ್ ಹಾಗೂ ಇಶಾ ಅವರು ಸೇರ್ಪಡೆಗೊಂಡಿದ್ದಾರೆ. ರಿಯಲನ್ಸ್ ರೀಟೈಲ್ ಹಾಗೂ ರಿಲಿಯನ್ಸ್ ಜಿಯೋ ಇನ್ಫೋಕಾಮ್ ನಲ್ಲಿ ಇಬ್ಬರು ನಿರ್ದೇಶಕರಾಗಿದ್ದಾರೆ.
11.30: ಬಹುನಿರೀಕ್ಷಿತ ಫುಟ್ಬಾಲ್ ಲೀಗ್ ಇಂಡಿಯನ್ ಸೂಪರ್ ಲೀಗ್ ಭಾನುವಾರ(ಅ.12) ಸಂಜೆ 7 ಗಂಟೆಗೆ ಕೋಲ್ಕತ್ತಾದ ಸಾಲ್ಟ್ ಲೇಕ್ ಸಿಟಿ ಸ್ಟೇಡಿಯಂನಲ್ಲಿ ಆರಂಭಗೊಳ್ಳಲಿದೆ. ಸ್ಟಾರ್ ಸ್ಪೋರ್ಟ್ ಅಲ್ಲದೆ, ಸುವರ್ಣ ಪ್ಲಸ್ ವಾಹಿನಿಯಲ್ಲೂ ಪಂದ್ಯಗಳ ನೇರ ಪ್ರಸಾರವಿರುತ್ತದೆ.[ಲೀಗ್ ವೇಳಾಪಟ್ಟಿ ಇಲ್ಲಿದೆ]
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications