ಜು.18 : ದೇಶ, ವಿದೇಶಗಳ ಹೆಡ್ ಲೈನ್ ನ್ಯೂಸ್
ಬೆಂಗಳೂರು, ಜು.18: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
5.25: ಮುಂಬೈ ಉಪನಗರದ ಪಶ್ಚಿಮ ಭಾಗದಲ್ಲಿರುವ ವಾಣಿಜ್ಯ ಕಟ್ಟಡವೊಂದಕ್ಕೆ ಬೆಂಕಿ ಬಿದ್ದಿದ್ದು, ಪ್ರಮುಖ ನಟ ನಟಿಯರ ಕಚೇರಿಗಳು ಇದೇ ಕಾಂಪ್ಲೆಕ್ಸ್ ನಲ್ಲಿದೆ.
5.15: ಅಂಧೇರಿಯ ಲೋಟಸ್ ಬಿಸಿನೆಸ್ ಪಾರ್ಕಿನ 22 ಅಂತಸ್ತಿನ 21ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
4.30: ಮುಂಬೈ ಕಟ್ಟಡದಲ್ಲಿ ಸಿಲುಕಿದ್ದ ಮಹಿಳೆಯೊಬ್ಬರನ್ನು ರಕ್ಷಿಸಲು ತೆರಳಿದ ಅಗ್ನಿಶಾಮಕದಳದ ಸಿಬ್ಬಂದಿಯೊಬ್ಬರು ಪ್ರಾಣಾಪಾಯಕ್ಕೆ ಸಿಕ್ಕಿ ಹಾಕಿಕೊಂಡಿದ್ದರು. ವಾಯುಸೇನೆ ಹೆಲಿಕಾಪ್ಟರ್ ಬಳಸಿ ಅವರನ್ನು ರಕ್ಷಿಸಲಾಗಿದೆ.

3.30: ಮಲೇಷಿಯನ್ ವಿಮಾನ ದುರಂತದಲ್ಲಿ ಅನಿವಾಸಿ ಭಾರತೀಯರೊಬ್ಬರು ಬಿಟ್ಟರೆ ಮಿಕ್ಕಂತೆ ಭಾರತೀಯರು ಸಾವನ್ನಪ್ಪಿಲ್ಲ ಎಂದು ನಾಗರಿಕ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು ಹೇಳಿದ್ದಾರೆ.
2.30: ಬಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅನಾರೋಗ್ಯದ ಕಾರಣ ಕಾಮನ್ ವೆಲ್ತ್ ಗೇಮ್ಸ್ 2015 ನಿಂದ ಹೊರಗುಳಿಯುತ್ತಿದ್ದಾರೆ.
1.15 : ಒಡಿಶಾದ ಮೋಸ್ಟ್ ವಾಂಟೆಡ್ ನಕ್ಸಲರ ಪ್ರಮುಖ ನಾಯಕ ಸಬ್ಯಸಾಚಿ ಪಾಂಡಾನನ್ನು ಒಡಿಶಾ ಪೊಲೀಸರು ಬಂಧಿಸುವಲ್ಲಿ ಶುಕ್ರವಾರ ಯಶಸ್ವಿಯಾಗಿದ್ದಾರೆ.
10.50 : ರಷ್ಯಾ ಹಾಗೂ ಉಕ್ರೇನ್ ಗಡಿಯ ಮೇಲೆ ಭಾರತದ ವಿಮಾನ ಹಾರಾಟ ನಿಲ್ಲಿಸಲಾಗಿದೆ. ಭಾರತ, ಫ್ರಾನ್ಸ್ ಸೇರಿದಂತೆ ಅನೇಕ ರಾಷ್ಟ್ರಗಳು ವಿಮಾನ ಹಾರಾಟ ನಡೆಸುವುದಿಲ್ಲ ಎಂದು ಹೇಳಿವೆ
10.45: ಉಕ್ರೇನ್ ಪ್ರತ್ಯೇಕತಾವಾದಿಗಳ ದಾಳಿಗೆ ತುತ್ತಾಗಿ ರಷ್ಯಾದ ಗಡಿಯಲ್ಲಿ ಮಲೇಷಿಯಾ ವಿಮಾನ ಪತನವಾದ ಸಂದರ್ಭದಲ್ಲೇ ರಷ್ಯಾ ಮೇಲೆ ಅಮೆರಿಕ ನಿರ್ಬಂಧ ಹೇರಿದೆ.

10.35 : ಉಕ್ರೇನ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ರಷ್ಯಾ ಮೇಲೆ ಅಮೆರಿಕ ನಿರ್ಬಂಧ ಹೇರಿದ್ದು, ಆರ್ಥಿಕ, ಸೇನಾ ಮತ್ತು ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಿರ್ಬಂಧ ಜಾರಿಯಲ್ಲಿದೆ.
10.30 : ರಮ್ಮಸನ್ ಚಂಡಮಾರುತದ ಅಬ್ಬರಕ್ಕೆ ಫಿಲಿಪ್ಪೀನ್ಸ್ ತತ್ತರಿಸಿದ್ದು, ಇಲ್ಲಿವರೆಗೂ 38 ಜನ ಮೃತಪಟ್ಟಿದ್ದಾರೆ. ಸುಮಾರು 4 ಲಕ್ಷಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
10.25 : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಗೆ ಊಟದ ಜೊತೆ ಐಸ್ ಕ್ರೀಂ ಕೊಡದೇ ಇದ್ದ ಕಾರಣ ಔರಂಗಾಬಾದ್ ನ ಗೆಸ್ಟ್ ಹೌಸ್ ನ ಇಬ್ಬರು ಇಂಜಿನಿಯರ್ ಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications