ಸೆ.21: ದೇಶ, ವಿದೇಶ ಸುದ್ದಿಗಳ ಹೆಡ್ ಲೈನ್ಸ್
ಬೆಂಗಳೂರು, ಸೆ.21: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
13.15: ಭಾರತದೊಳಗೆ ನುಗ್ಗಲು ಉಗ್ರ ಸಂಘಟನೆ ಅಲ್ ಖೈದಾದಿಂದ ಹೊಸ ಮಾರ್ಗ ಕಂಡುಕೊಂಡಿದೆ. ದಸರಾ ಸಂದರ್ಭದಲ್ಲಿ ಅಸ್ಸಾಂನ ಗಡಿಭಾಗದಿಂದ ಭಾರತಕ್ಕೆ ನುಸುಳಲು ಯತ್ನಿಸುತ್ತಿದ್ದಾರೆ ಎಂದು ಅಸ್ಸಾಂನ ಮುಖ್ಯಮಂತ್ರಿ ತರುಣ್ ಗೋಗಾಯ್ ಎಚ್ಚರಿಸಿದ್ದಾರೆ.
12.45: ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಅವರ ಪತ್ನಿ ನಳಿನಿ ಅವರನ್ನು ಸಿಬಿಐ ವಿಚಾರಣೆಗೊಳಪಡಿಲಾಗಿದೆ ಎಂದು ಟಿವಿ ಮಾಧ್ಯಮಗಳಲ್ಲಿ ವರದಿಯಾಗಿದೆ.

10.20: ಆಗುಂತಕನೊಬ್ಬ ಶ್ವೇತಭವನಕ್ಕೆ ಅತಿಕ್ರಮ ಪ್ರವೇಶ ಮಾಡಲು ಯತ್ನಿಸಿದ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ಶ್ವೇತಭವನದಲ್ಲಿರಲಿಲ್ಲ ಎಂದು ತಿಳಿದು ಬಂದಿದೆ.
10.15: ಶಸ್ತ್ರಗಳೊಂದಿಗೆ ಅಮೆರಿಕದ ಶ್ವೇತ ಭವನಕ್ಕೆ ನುಗ್ಗಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತನನ್ನು 42 ವರ್ಷ ವಯಸ್ಸಿನ ಉಮರ್ ಗೊನ್ಜಾಲೆಜ್ ಎಂದು ಗುರುತಿಸಲಾಗಿದೆ.

10.00: ದೆಹಲಿ ಪೊಲೀಸ್ ಠಾಣೆ ಬಳಿ ಅಕಸ್ಮಾತ್ ಆಗಿ ಗುಂಡು ಹಾರಿದ ಘಟನೆ ನಡೆದಿದ್ದು, ಒಬ್ಬ ಸಬ್ ಇನ್ಸ್ ಪೆಕ್ಟರ್ ಗೆ ಗಾಯಗಳಾಗಿವೆ.
9.45: ಟೀಮ್ಸ್ ನಿಯತಕಾಲಿಕೆಯಲ್ಲಿ ಬೆಂಗಳೂರಿನ ಆರ್ಕಿಟೆಕ್ಟ್ ಅಲೋಕ್ ಶೆಟ್ಟಿ ಅವರು ಸ್ಥಾನ ಪಡೆದಿದ್ದಾರೆ. ಭವಿಷ್ಯದ ಯುವ ನಾಯಕ ಎಂದು ಗುರುತಿಸಲಾಗಿದೆ.
9.30: ಏಷ್ಯನ್ ಗೇಮ್ಸ್ ನಿಂದ ಹಿಂದೆ ಸರಿದ ಸಾನಿಯಾ ಮಿರ್ಜಾ ಅವರು ಡಬ್ಲ್ಯೂಟಿಎ ಪ್ಯಾನ್ ಫೆಸಿಫಿಕ್ ಓಪನ್ ಡಬಲ್ಸ್ ಗೆದ್ದಿದ್ದಾರೆ. ಟೋಕಿಯೋದಲ್ಲಿ ಜಿಂಬಾಬ್ವೆಯ ಕಾರಾ ಬ್ಲಾಕ್ ಹಾಗೂ ಸಾನಿಯಾ ಜಯಭೇರಿ ಬಾರಿಸಿದ್ದಾರೆ.
9.15: ಮಹಾರಾಷ್ಟ್ರದಲ್ಲಿ ಬಿಜೆಪಿ ನೀಡಿದ ಸೀಟು ಹಂಚಿಕೆ ಆಫರ್ ಮತ್ತೊಮ್ಮೆ ರಿಜೆಕ್ಟ್ ಮಾಡಿದ ಶಿವಸೇನಾ
9.00: ಎನ್ ಸಿಪಿ ಹಾಗೂ ಕಾಂಗ್ರೆಸ್ ನಡುವೆ ಕೂಡಾ ಸೀಟು ಹಂಚಿಕೆ ವಿವಾದ ಮುಂದುವರೆದಿದ್ದು, ಒಮ್ಮತ ಮೂಡಿಲ್ಲ.
8.45:ಏಷ್ಯನ್ ಗೇಮ್ಸ್ 2014: ನಿನ್ನೆ ಚಿನ್ನ ಗೆದ್ದಿದ್ದ ಜೀತೂ ರೈ ಅವರು 10 ಮೀ ಪಿಸ್ತೂಲ್ ವೈಯಕ್ತಿಕ ಶೂಟಿಂಗ್ ಸ್ಪರ್ಧೆಯಲ್ಲಿ ಐದನೇ ಸ್ಥಾನ ಗಳಿಸಿದ್ದಾರೆ.
8.30: ಏಷ್ಯನ್ ಗೇಮ್ಸ್ 2014: 10 ಮೀ ಪಿಸ್ತೂಲ್ ಶೂಟಿಂಗ್ ಟೀಂ ಸ್ಪರ್ಧೆಯಲ್ಲಿ ಭಾರತ ತಂಡ ಕಂಚಿನ ಪದಕ ಗೆದ್ದಿದೆ. [ವರದಿ ಇಲ್ಲಿ ಓದಿ]
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications