ಸೆ.29: ದೇಶ, ವಿದೇಶ ಸುದ್ದಿಗಳ ಹೆಡ್ ಲೈನ್ಸ್
ಬೆಂಗಳೂರು, ಸೆ.29: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
19.30: ಏಷ್ಯನ್ ಗೇಮ್ಸ್ ನ ಟೆನಿಸ್ ಮಿಶ್ರ ಡಬಲ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಸಾನಿಯಾ ಹಾಗೂ ಸಾಕೇತ್ ಜೋಡಿ. ಚೈನೀಸ್ ತೈಪೆಯ ಯುನ್ ಹೂ ಚಿಂಗ್ ಜೋಡಿಯನ್ನು 6-4, 6-3 ರ ನೇರ ಸೆಟ್ ಗಳಲ್ಲಿ ಸೋಲಿಸಿದರು.

14.10: ಅಮೆರಿಕದ 15ಕ್ಕೂ ಅಧಿಕ ಟಾಪ್ ಕಂಪನಿಗಳ ಸಿಇಒಗಳು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ನಂತರ ಮೋದಿ ಅವರು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಲಾಗಿದೆ. [ಸಿಇಒಗಳ ಪಟ್ಟಿ]
13.20: ತಮಿಳುನಾಡಿನ ನೂತನ ಸಿಎಂ ಆಗಿ ಓ ಪನ್ನೀರ್ ಸೆಲ್ವಂ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

13.00: ಸ್ಯಾಮ್ ಸಂಗ್ ಗ್ಯಾಲಕ್ಸಿ ಆಲ್ಫಾ ಸ್ಮಾರ್ಟ್ ಫೋನ್ ಭಾರತದಲ್ಲಿ ಬಿಡುಗಡೆಯಾಗಿದ್ದು, ಬೆಲೆ ಸುಮಾರು 39,990 ರು ಎಂದು ನಿಗದಿಪಡಿಸಲಾಗಿದೆ.
12.45: ವಿಶ್ವ ಯೋಗ ದಿನಾಚರಣೆ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಹೇಳಿಕೆಗೆ ನೇಪಾಳ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.
12.30: ಜನರಲ್ ಮೋಟರ್ಸ್ ಸಂಸ್ಥೆ ಭಾರತದಿಂದ ತನ್ನ ಕಾರುಗಳನ್ನು ಇದೇ ಪ್ರಥಮ ಬಾರಿಗೆ ಸೋಮವಾರದಿಂದ ರಫ್ತು ಮಾಡಲು ಆರಂಭಿಸಿದೆ.
11.30: ಆಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ತಮ್ಮ ವಿರುದ್ಧ ನೀಡಿರುವ
ತೀರ್ಪನ್ನು ಪ್ರಶ್ನಿಸಿ ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಅವರು ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದಾರೆ.
10.00: ದಕ್ಷಿಣ ಕೊರಿಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನ ಒಂಬತ್ತನೆ ದಿನ ಭಾರತ ಭರ್ಜರಿ ಪದಕಗಳ ಬೆಳೆ ತೆಗೆದಿದೆ. ಕುಸ್ತಿಪಟು ಯೋಗೀಶ್ವರ್ ದತ್ ಚಿನ್ನ ಗೆದ್ದರೆ, ರೇಸ್ ವಾಕ್ನಲ್ಲಿ ಖುಶ್ಬೀರ್ ಕೌರ್ ಬೆಳ್ಳಿ , ಅಥ್ಲೆಟಿಕ್ಸ್ ನಲ್ಲಿ ಮಂಗಳೂರಿನ ಎಂ.ಆರ್ ಪೂವಮ್ಮಗೆ ಕಂಚು ಸೇರಿದಂತೆ ಒಟ್ಟು 8 ಪದಕಗಳು ಭಾರತಕ್ಕೆ ಸಿಕ್ಕಿದೆ.
9.45: ಒಟ್ಟಾರೆ ಭಾರತ 4 ಚಿನ್ನ, 5 ಬೆಳ್ಳಿ, 26 ಕಂಚು ಸೇರಿದಂತೆ ಒಟ್ಟು 35 ಪದಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

9.30: ಮೈಕಲ್ ಜಾಕ್ಸನ್, ಎಲ್ವಿಸ್ ಪ್ರೆಸ್ಲೆ, ಲೆಡ್ ಜೆಪ್ಪೆಲಿನ್, ಮಡೋನ್ನಾ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮ್ಯಾಡಿಸನ್ ಸ್ಕ್ವೇರ್ ನಲ್ಲಿ ಸಂಚಲನ ಮೂಡಿಸಿದ್ದಾರೆ.
9.15: ಜೆ. ಜಯಲಲಿತಾ ಅವರು ಜೈಲು ಸೇರಿರುವ ಹಿನ್ನೆಲೆಯಲ್ಲಿ ಮನನೊಂದು ಸುಮಾರು 25ಕ್ಕೂ ಅಧಿಕ ಅಭಿಮಾನಿಗಳು ಸಾವನ್ನಪ್ಪಿರುವ ಸುದ್ದಿ ಬಂದಿದೆ.
9.00: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪನ್ನೀರ್ ಸೆಲ್ವಂ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications