ಹೆಡ್ ಲೈನ್ಸ್: ದೇಶ, ವಿದೇಶಗಳ ಚುಟುಕು ಸುದ್ದಿ
ಬೆಂಗಳೂರು, ಮೇ.23: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
12.20: ಭಾರತ ರತ್ನ ಲತಾ ಮಂಗೇಷ್ಕರ್, ರಜನಿಕಾಂತ್, ಬಿಗ್ ಬಿ ಅಮಿತಾಬ್ ರಿಗೆ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಅಹ್ವಾನ ಕಳಿಸಲಾಗಿದೆ.
12.15: ಕಪ್ಪು ಹಣ ಪ್ರಕರಣ ವಿಶೇಷ ತನಿಖಾ ತಂಡ ರಚಿಸುವಂತೆ ಸುಪ್ರೀಂಕೋರ್ಟ್ ಆದೇಶ.
12.00: ಎಂಡಿಎಂಕೆ ನಾಯಕರು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆಗೆ ನೀಡಿರುವ ಅಹ್ವಾನ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.
11.00: ದಕ್ಷಿಣ ಏಷ್ಯಾ ನಾಯಕರಿಗೆ ಮೋದಿ ಅವರು ನೀಡಿರುವ ಅಹ್ವಾನ ಉತ್ತಮ ಬೆಳವಣಿಗೆ ಎಂದು ಅಮೆರಿಕ ಹೇಳಿದೆ.

10.35: ಭಾರತದ ಮಾವುಗಳಿಗೆ ಹೇರಲಾಗಿರುವ ನಿಷೇಧ ಹಿಂಪಡೆಯುವ ಬಗ್ಗೆ ಬ್ರಿಟನ್ ಸರ್ಕಾರ ದುಂಡುಮೇಜಿನ ಸಭೆ ನಡೆಸಿದೆ. ಡಿ. 2015ರೊಳಗೆ ನಿಷೇಧ ವಾಪಸ್ ಪಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ.
10.15: ಅಫ್ಘಾನಿಸ್ತಾನದಲ್ಲಿರುವ ಭಾರತೀಯ ರಾಯಭಾರ ಕಚೇರಿ ಮೇಲಿನ ಬಾಂಬ್ ದಾಳಿ ಹಿಂದೆ ತಾಲಿಬಾನ್ ಇದೆ ಎಂದು ಅಫ್ಘಾನ್ ಮಾಧ್ಯಮಗಳು ವರದಿ ಮಾಡಿವೆ.

10.00: ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ಕೋರ್ಟಿಗೆ ಕರೆದೊಯ್ಯಲಾಗಿದೆ.
9.45: ನವದೆಹಲಿಯಲ್ಲಿರುವ ಸಂಸತ್ ಭವನದಲ್ಲಿ ಬೆಂಕಿ ಕಾಣಿಸಿಕೊಂಡು, ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ.
9.30 : ನವದೆಹಲಿಗೆ ಹಿಂತಿರುಗಿರುವ ಮೋದಿ ಅವರು ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.
9.15: ಎಎಪಿ ಕಾರ್ಯಕರ್ತರು ತಿಹಾರ್ ಜೈಲಿನ ಮುಂದೆ ನಡೆಸಿದ ಪ್ರತಿಭಟನೆ ಹಾಗೂ ಅರವಿಂದ್ ಅವರ ನಡೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications