Donald Trump: ಜಿ-20 ಶೃಂಗಸಭೆ ಬಹಿಷ್ಕರಿಸಲು ಡೊನಾಲ್ಡ್ ಟ್ರಂಪ್ ಆಡಳಿತದ ನಿರ್ಧಾರ!
ಡೊನಾಲ್ಡ್ ಟ್ರಂಪ್ ಅವರು ಅಮೆರಿಕ ಅಧ್ಯಕ್ಷರಾಗಿ ಬಂದ ನಂತರ ಹಲವು ದೇಶಗಳ ಜೊತೆಗೆ ತಿಕ್ಕಾಟ ಮಾಡಿದ್ದರು. ಇದೀಗ ಮತ್ತೆ ಡೊನಾಲ್ಡ್ ಟ್ರಂಪ್ ಅವರು ತಮ್ಮ ಕಿರಿಕ್ ಮುಂದುವರಿಸಿದ್ದು, ಜಾಗತಿಕ ಮಟ್ಟದಲ್ಲಿ ಇನ್ನೊಂದು ತಲ್ಲಣಕ್ಕೆ ಕಾರಣರಾಗುತ್ತಿದ್ದಾರೆ. ಜಿ-20 ಶೃಂಗಸಭೆ ವಿಚಾರವಾಗಿ ಈಗ ಟ್ರಂಪ್ ಅವರ ಕೊಟ್ಟಿರುವ ಹೇಳಿಕೆ ಸಂಚಲನಕ್ಕೆ ಕಾರಣವಾಗಿದ್ದು, ಭವಿಷ್ಯದಲ್ಲಿ ಮತ್ತೊಂದು ಮಹಾ ಬಿರುಕು ಗ್ಯಾರಂಟಿ ಎನ್ನಲಾಗುತ್ತಿದೆ. ಹಾಗಾದರೆ ದಿಢೀರ್ ಡೊನಾಲ್ಡ್ ಟ್ರಂಪ್ ರೊಚ್ಚಿಗೆದ್ದಿದ್ದು ಏಕೆ? ಟ್ರಂಪ್ಗೆ ಇಷ್ಟು ಕೋಪ ಬರಲು ಕಾರಣ ಏನು?
ದಿಢೀರ್ ಅಮೆರಿಕ ಅಧ್ಯಕ್ಷರು ಜಿ-20 ಶೃಂಗಸಭೆ ಬಹಿಷ್ಕರಿಸುವ ನಿರ್ಧಾರ ತಿಳಿಸಿದ್ದಾರೆ. ದಕ್ಷಿಣ ಆಫ್ರಿಕಾದ ನೆಲದಲ್ಲಿ ನವೆಂಬರ್ ಅಂತ್ಯದೊಳಗೆ ಜಿ-20 ಶೃಂಗಸಭೆ ನಡೆಯಲಿದೆ. ಆದರೆ ದಕ್ಷಿಣ ಆಫ್ರಿಕಾದಲ್ಲಿ ಈಗ ನಡೆಯಲಿರುವ ಜಿ-20 ಶೃಂಗಸಭೆಗೆ ಅಮೇರಿಕ ಸರ್ಕಾರದ ಯಾವುದೇ ಅಧಿಕಾರಿ ಹಾಜರಾಗುವುದಿಲ್ಲ, ಎಂದು ಟ್ರಂಪ್ ಆಡಳಿತ ತಿಳಿಸಿದೆ. ಇದು ಆಫ್ರಿಕಾ ಮಾತ್ರವಲ್ಲ ದಿಢೀರ್ ಜಾಗತಿಕ ಮಟ್ಟದಲ್ಲೂ ಭಾರಿ ಚರ್ಚೆಗೆ ವೇದಿಕೆ ಒದಗಿಸಿದೆ.

ಯಾಕಂದ್ರೆ ದಕ್ಷಿಣ ಆಫ್ರಿಕಾದ ನೆಲದಲ್ಲಿ ಬಿಳಿಯರ ಮೇಲೆ ಭಾರಿ ದೌರ್ಜನ್ಯ ನಡೆಯುತ್ತಿದೆ ಎಂಬುದು ಟ್ರಂಪ್ ಅವರ ಆರೋಪ. ಅದರಲ್ಲೂ ರೈತರ ಪೈಕಿ, ಶ್ವೇತ ವರ್ಣ ಹೊಂದಿರುವ ಕಾರಣಕ್ಕಾಗಿ ದಕ್ಷಿಣ ಆಫ್ರಿಕಾದ ಬಿಳಿಯ ರೈತರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಇದೇ ಕಾರಣಕ್ಕೆ ಈಗ ಜಿ-20 ಶೃಂಗಸಭೆ ಬಹಿಷ್ಕರಿಸುವ ನಿರ್ಧಾರ ಕೈಗೊಂಡಿದೆ ಡೊನಾಲ್ಡ್ ಟ್ರಂಪ್ ಆಡಳಿತ.
ಉಪಾಧ್ಯಕ್ಷ ಕೂಡ ಆಫ್ರಿಕಾಗೆ ಹೋಗಲ್ಲ!
ನವೆಂಬರ್ 22 ಹಾಗೂ 23 ಜಿ-20 ಶೃಂಗಸಭೆಯ ಪ್ರಮುಖ ಭಾಗವಾಗಿದೆ, ಏಕೆಂದರೆ ಇದೇ ಸಭೆಯಲ್ಲಿ ಪ್ರಮುಖ ಮತ್ತು ವಿಕಾಸೋನ್ಮುಖ ಆರ್ಥಿಕ ರಾಷ್ಟ್ರಗಳ ನಾಯಕರ ಜೊತೆಗೆ ಮೀಟಿಂಗ್ ಆಗಲಿದೆ. ಆದರೆ ಈ ಸಭೆಗೂ ತಾವು ಹಾಜರಾಗುವುದಿಲ್ಲ ಎಂಬುದನ್ನು ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಇಷ್ಟೆಲ್ಲಾ ಗೊಂದಲದ ನಡುವೆಯೂ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರನ್ನ ಟ್ರಂಪ್ ಸ್ಥಾನದಲ್ಲಿ ಕಳುಹಿಸಲಾಗುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ ಅದು ಕೂಡ ಈಗ ಕೈಗೂಡುತ್ತಿಲ್ಲ ಎನ್ನಲಾಗಿದ್ದು, ಭಾರಿ ದೊಡ್ಡದಾದ ಸಂಚಲನ ಸೃಷ್ಟಿಯಾಗಿದೆ. ಈ ಮೂಲಕ ಜಿ-20 ಶೃಂಗಸಭೆಯನ್ನೇ ಅಮೆರಿಕ ಬಹಿಷ್ಕಾರ ಮಾಡುತ್ತಿದೆ.
ತೆರಿಗೆ ವಾರ್ ನಡೆಸಿದ್ದರು ಟ್ರಂಪ್!
ಒಟ್ನಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಕೈಗೊಳ್ಳುತ್ತಿರುವ ವಿಚಿತ್ರ ವಿಚಿತ್ರ ನಿರ್ಧಾರಗಳ ಪರಿಣಾಮ ಭಾರಿ ದೊಡ್ಡ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಈಗಾಗಲೇ ಹಲವು ದೇಶಗಳ ವಿರುದ್ಧ ತೆರಿಗೆ ಯುದ್ಧ ಸಾರಿದ್ದ ಟ್ರಂಪ್ ಅವರು ಇದೀಗ ಮತ್ತೊಂದು ರೀತಿಯ ಕಿರಿಕ್ ಮಾಡುತ್ತಿದ್ದಾರೆ ಎಂಬ ಆರೋಪ ಕೂಡ ಕೇಳಿ ಬರುತ್ತಿದೆ. ಹೀಗಾಗಿ ಮುಂದೆ ಏನಾಗಲಿದೆ? ಎಂಬುದನ್ನ ಕಾದು ನೋಡಬೇಕಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications