ಕಾಲ್ ಸೆಂಟರ್ ಹಗರಣ: ನಾಲ್ವರು ಭಾರತೀಯರು ದೋಷಿ
ಭಾರತೀಯ ಮೂಲದ ಕಾಲ್ ಸೆಂಟರ್ ಗಳಿಂದ ಹಲವಾರು ಅಮೆರಿಕನ್ನರನ್ನು ವಂಚಿಸಿದ ಹಗರಣಕ್ಕೆ ಸಂಬಂಧಿಸಿದಂತೆ ನಾಲ್ವರು ಭಾರತೀಯರು ಹಾಗೂ ಓರ್ವ ಪಾಕಿಸ್ತಾನಿಯನ್ನು ದೋಷಿ ಎಂದು ಘೋಷಿಸಲಾಗಿದೆ.
ಟೆಕ್ಸಾಸ್, ಜೂನ್ 06: ಭಾರತೀಯ ಮೂಲದ ಕಾಲ್ ಸೆಂಟರ್ ಗಳಿಂದ ಅಮೆರಿಕನ್ನರನ್ನು ವಂಚಿಸಿರುವ ಹಗರಣಕ್ಕೆ ಸಂಬಂಧಿಸಿದಂತೆ ನಾಲ್ವರು ಭಾರತೀಯರು ಮತ್ತು ಪಾಕಿಸ್ತಾನದ ಪ್ರಜೆಯೊಬ್ಬನನ್ನು ನ್ಯಾಯಾಲಯವೊಂದು ದೋಷಿಯನ್ನಾಗಿ ಪರಿಗಣಿಸಿದೆ.
ಭಾರತೀಯ ಮೂಲದ ರಾಜುಭಾಯ್ ಪಟೇಲ್ (32), ವಿರಾಜ್ ಪಟೇಲ್ (33), ದಿಲೀಪ್ ಕುಮಾರ್ ಅಂಬಾಲ್ ಪಟೇಲ್ (53) ಮತ್ತು ಹಾರ್ದಿಕ್ ಪಟೇಲ್ (31) ಹಾಗೂ ಪಾಕಿಸ್ತಾನದ ಫಹಾದ್ ಅಲಿ (25) ಅವರು ತಪ್ಪಿತಸ್ಥರು ಎಂದು ಟೆಕ್ಸಾಸ್ ಕೋರ್ಟ್ ಘೋಷಿಸಿದೆ.

ಟೆಕ್ಸಾಸ್ಸಿನ ಸದರನ್ ಡಿಸ್ಟ್ರಿಕ್ಸ್ ನ ಜಿಲ್ಲಾ ನ್ಯಾಯಾಧೀಶರಾದ ಡೇವಿಡ್ ಹಿಟ್ನರ್ ಅವರ ಮುಂದೆ ನಾಲ್ವರು ಆರೋಪಿಗಳು ಹಣ ದುರ್ಬಳಕೆ ಆರೋಪಗಳನ್ನು ಒಪ್ಪಿಕೊಂಡಿದ್ದಾರೆ.[ನಕಲಿ ಕಾಲ್ ಸೆಂಟರಿನಿಂದ 500 ಕೋಟಿ ರು ವಂಚನೆ]
ಕಾಲ್ ಸೆಂಟರ್ ಗಳ ಮೂಲಕ ಅಮೆರಿಕನ್ನರಿಗೆ ದೂರವಾಣಿ ಕರೆ ಮಾಡಿ ನಕಲಿ ಯೋಜನೆಗಳ ಮೂಲಕ ದೊಡ್ಡ ಮಟ್ಟದ ವಂಚನೆ ಪ್ರಕರಣಗಳಲ್ಲಿ ಇವರು ಶಾಮೀಲಾಗಿದ್ದಾರೆ. ಈ ದೋಷಿಗಳಿಗೆ ಜೈಲು ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಶೀಘ್ರದಲ್ಲೇ ಘೋಷಿಸಲಿದೆ.
ಅಮೆರಿಕದ ಪ್ರಜೆಗಳಿಗೆ ಕಾಲ್ ಮಾಡಿ, ತೆರಿಗೆ ಅವ್ಯವಹಾರದಲ್ಲಿ ಸಿಲುಕಿದ್ದೀರಿ. ತೆರಿಗೆ ಸಮಸ್ಯೆಯಿಂದ ಪಾರಾಗಬೇಕಾದರೆ 500 ರಿಂದ 3000 ಡಾಲರ್ ವರೆಗೆ ದಂಡ ಪಾವತಿಸಬೇಕು ಎಂದು ಕಂದಾಯ ಅಧಿಕಾರಿಗಳ ಹೆಸರಿನಲ್ಲಿ ಹೆದರಿಸುತ್ತಿದ್ದರು. ಅನೇಕರಿಂದ ಹಣ ವಸೂಲಿ ಮಾಡಿಕೊಂಡಿದ್ದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications