ಸಿಖ್ ದಂಗೆ: ಸೋನಿಯಾ ವಿರುದ್ಧದ ಪ್ರಕರಣ ವಜಾ
ನ್ಯೂಯಾರ್ಕ್, ಜೂ.11: 1984ರಲ್ಲಿ ಭಾರತದಲ್ಲಿ ನಡೆದ ಸಿಖ್ ದಂಗೆ ಸಂಬಂಧಿಸಿದಂತೆ ಆರೋಪ ಹೊತ್ತಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಿಲೀಫ್ ಸಿಕ್ಕಿದೆ. ಬ್ರೂಕ್ಲೀನ್ ನ ನ್ಯಾಯಾಲಯವೊಂದು ಸೋನಿಯಾ ವಿರುದ್ಧದ ಪ್ರಕರಣವನ್ನು ವಜಾಗೊಳಿಸಿದೆ.
ಸಿಖ್ ಫಾರ್ ಜಸ್ಟೀಸ್ ಎಂಬ ಸಂಸ್ಥೆ ಸಲ್ಲಿಸಿದ್ದ ದೂರಿನ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬ್ರಿಯಾನ್ ಕೋಗನ್ ಅವರು ಸರಿಯಾದ ಸಾಕ್ಷಿ ಆಧಾರಗಳಿಲ್ಲದ ಕಾರಣ ಸೋನಿಯಾ ಗಾಂಧಿ ಅವರ ಮೇಲಿನ ಆರೋಪವನ್ನು ಕೈಬಿಡಲಾಗಿದೆ ಎಂದು ತಮ್ಮ 13 ಪುಟಗಳ ತೀರ್ಪಿನಲ್ಲಿ ಹೇಳಿದ್ದಾರೆ.
ಆದರೆ, ಅರ್ಜಿದಾರರು ಸೂಕ್ತ ಸಾಕ್ಷಿ ಸಿಕ್ಕರೆ ಮತ್ತೊಮ್ಮೆ ದೂರು ಸಲ್ಲಿಸುವ ಅವಕಾಶವಿದೆ. ಸಿಖ್ ಫಾರ್ ಜಸ್ಟೀಸ್ ಇನ್ಮುಂದೆ ಇಂಥ ಪ್ರಕರಣ ದಾಖಲಿಸದಂತೆ ದೂರಿನ ವಿರುದ್ಧ ತಡೆ ನೀಡಬೇಕು ಎಂದು ಸೋನಿಯಾ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳು ತಳ್ಳಿ ಹಾಕಿದ್ದಾರೆ.

ವೀಸಾ ನಿರಾಕರಣೆಗೆ ಕೋರಲಾಗಿತ್ತು: 2002ರ ಗುಜರಾತ್ ಹತ್ಯಾಕಾಂಡದ ಹಿನ್ನೆಲೆಯಲ್ಲಿ ಗುಜರಾತ್ ಸಿಎಂ ನರೇಂದ್ರ ಮೋದಿ ಅವರಿಗೆ ವೀಸಾ ನಿರಾಕರಿಸುವುದಾದರೆ, ಸೋನಿಯಾ ಗಾಂಧಿ ಅವರಿಗೂ ವೀಸಾ ನಿರಾಕರಿಸಬೇಕು. ಸಿಖ್ ಸಮುದಾಯದ ಹತ್ಯಾಕಾಂಡ ಪ್ರಕರಣದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿಗೂ ವೀಸಾ ನಿಯಮಗಳು ಅನ್ವಯವಾಗಬೇಕು ಎಂದು ಸಿಖ್ ಸಮುದಾಯ ಒತ್ತಾಯಿಸಿತ್ತು.
ಸಿಖ್ ವಿರೋಧಿ ದಂಗೆಯಲ್ಲಿ ಭಾಗಿಯಾದ ಪಕ್ಷದ ನಾಯಕರನ್ನು ರಕ್ಷಿಸಿದ ಆರೋಪದ ಮೇಲೆ ನ್ಯೂಯಾರ್ಕ್ ಫೆಡರಲ್ ಕೋರ್ಟ್ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಸಮನ್ಸ್ ಜಾರಿಗೊಳಿಸಿತ್ತು.
1984ರ ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ದಿಲ್ಲಿ ಕಂಟೋನ್ಮೆಂಟ್ ಪ್ರದೇಶ ದಲ್ಲಿ ನಡೆದ ಹತ್ಯಾಕಾಂಡ ಪ್ರಕರಣದ ಬಗ್ಗೆ ಸಿಬಿಐ ನೀಡಿರುವ ಹೇಳಿಕೆಯಂತೆ ಈ ಹಿಂಸಾಚಾರವು ವ್ಯವಸ್ಥಿತವಾಗಿ ರೂಪಿಸಿದ್ದು ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ನಾಯಕರನ್ನು ಸೋನಿಯಾ ಗಾಂಧಿ ರಕ್ಷಿಸುತ್ತಿದ್ದಾರೆ ಎಂದು ಸಿಖ್ ಸಮುದಾಯ ಆರೋಪಿಸಿ ತ್ತು Alien Tort Claims Act (ATCA) and Torture Victim Protection Act (TVPA) ಅನ್ವಯ ಎಸ್ ಎಫ್ ಜೆ ದೂರು ದಾಖಲಿಸಿತ್ತು.(ಪಿಟಿಐ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications