ಮೋದಿಗೆ ನ್ಯೂಯಾರ್ಕ್ ಕೋರ್ಟಿನಿಂದ ಸಮನ್ಸ್
ನ್ಯೂಯಾರ್ಕ್, ಸೆ.26: ಅಮೆರಿಕ ಪ್ರವಾಸ ಕೈಗೊಂಡಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕಿನ ವಿಮಾನ ನಿಲ್ದಾಣಕ್ಕೆ ಕಾಲಿಡುವ ಮೊದಲೇ ಅವರಿಗೆ ಇಲ್ಲಿನ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. 2002ರ ಗುಜರಾತ್ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಮಾಡಿದೆ.
2002ರಲ್ಲಿ ಮೋದಿ ಅವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ನಡೆದಿದ್ದ ಗಲಭೆಯಲ್ಲಿ ನರೇಂದ್ರ ಮೋದಿ ಪಾತ್ರದ ಕುರಿತು ಅಮೆರಿಕನ್ ಜೆಸ್ಟಿಸ್ ಸೆಂಟರ್(ಎಜೆಸಿ) ಎಂಬ ಮಾನವ ಹಕ್ಕು ಸಂಘಟನೆ ನ್ಯೂಯಾರ್ಕ್ ಕೋರ್ಟಿಗೆ ದೂರು ನೀಡಿತ್ತು.
ಈ ಸಂಬಂಧ ಅರ್ಜಿ ಕೈಗೆತ್ತಿಕೊಂಡಿರುವ ನ್ಯೂಯಾರ್ಕ್ ನ್ಯಾಯಾಲಯ (Federal Court of Southern District of New York), ಪ್ರಧಾನಿ ಮೋದಿ ಅವರಿಗೆ ಸಮನ್ಸ್ ಜಾರಿ ಮಾಡಿ, 21 ದಿನಗಳೊಳಗೆ ಉತ್ತರ ನೀಡುವಂತೆ ಸೂಚಿಸಿದೆ. [ಯುಎಸ್ ಪ್ರವಾಸದ ವೇಳಾಪಟ್ಟಿ]

ಒಂದು ವೇಳೆ ನಿಗದಿತ 21 ದಿನಗಳಲ್ಲಿ ಮೋದಿ ಅವರು ಉತ್ತರಿಸಲು ವಿಫಲರಾದ ಹಿನ್ನೆಲೆಯಲ್ಲಿ ದೂರುದಾರರು ತಮ್ಮ ಅರ್ಜಿಯಲ್ಲಿ ಕೋರಿರುವ ಪರಿಹಾರವನ್ನು ನೀಡುವಂತೆ ನ್ಯಾಯಾಧೀಶರು ಆದೇಶಿಸುವ ಸಾಧ್ಯತೆಯಿದೆ.
ಮೋದಿ ಅವರು ಫ್ರಾಂಕ್ ಫರ್ಟ್ ನಲ್ಲಿ ಉಳಿದು ನ್ಯೂಯಾರ್ಕ್ ತಲುಪಲಿದ್ದಾರೆ. ನಂತರ ಸೆ.29ರಂದು ವಾಷಿಂಗ್ಟನ್ ಸೇರಲಿದ್ದಾರೆ. ಅಮೆರಿಕ ಪ್ರವಾಸದ ವೇಳೆ ಉಭಯ ನಾಯಕರು ಆರ್ಥಿಕ ಪ್ರಗತಿ, ರಕ್ಷಣೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಸಿರಿಯಾ, ಅಫ್ಘಾನಿಸ್ತಾನ, ಇರಾಕ್ನಲ್ಲಿನ ಪ್ರಸ್ತುತ ಬೆಳವಣಿಗೆಗಳ ಕುರಿತು ಅವರು ಮೋದಿ ಮತ್ತು ಒಬಾಮಾ ಮಾತುಕತೆ ನಡೆಸುವ ಸಾಧ್ಯತೆ ಇದೆ.
ಸೆ.29ರಂದು ಸುಮಾರು 11 ಟಾಪ್ ಕಾರ್ಪೊರೇಟ್ ದಿಗ್ಗಜರನ್ನು ಮೋದಿ ಉಪಹಾರ ಸಮಯದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ನಂತರ ನ್ಯೂಯಾರ್ಕ್ ನಲ್ಲಿ ಐದಾರು ಪ್ರಮುಖ ಕಂಪನಿಗಳ ಪ್ರತಿನಿಧಿಗಳ ಜೊತೆ ಮುಖಾಮುಖಿ ಚರ್ಚೆ ನಡೆಸಲಿದ್ದಾರೆ. [ಮೋದಿಗಾಗಿ ಕಾದಿರುವ ಯುಎಸ್ ನ ಟಾಪ್ ಸಿಇಒ]
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications