ಮೋದಿಗೆ ನ್ಯೂಯಾರ್ಕ್ ಕೋರ್ಟಿನಿಂದ ಸಮನ್ಸ್
ನ್ಯೂಯಾರ್ಕ್, ಸೆ.26: ಅಮೆರಿಕ ಪ್ರವಾಸ ಕೈಗೊಂಡಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕಿನ ವಿಮಾನ ನಿಲ್ದಾಣಕ್ಕೆ ಕಾಲಿಡುವ ಮೊದಲೇ ಅವರಿಗೆ ಇಲ್ಲಿನ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. 2002ರ ಗುಜರಾತ್ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಮಾಡಿದೆ.
2002ರಲ್ಲಿ ಮೋದಿ ಅವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ನಡೆದಿದ್ದ ಗಲಭೆಯಲ್ಲಿ ನರೇಂದ್ರ ಮೋದಿ ಪಾತ್ರದ ಕುರಿತು ಅಮೆರಿಕನ್ ಜೆಸ್ಟಿಸ್ ಸೆಂಟರ್(ಎಜೆಸಿ) ಎಂಬ ಮಾನವ ಹಕ್ಕು ಸಂಘಟನೆ ನ್ಯೂಯಾರ್ಕ್ ಕೋರ್ಟಿಗೆ ದೂರು ನೀಡಿತ್ತು.
ಈ ಸಂಬಂಧ ಅರ್ಜಿ ಕೈಗೆತ್ತಿಕೊಂಡಿರುವ ನ್ಯೂಯಾರ್ಕ್ ನ್ಯಾಯಾಲಯ (Federal Court of Southern District of New York), ಪ್ರಧಾನಿ ಮೋದಿ ಅವರಿಗೆ ಸಮನ್ಸ್ ಜಾರಿ ಮಾಡಿ, 21 ದಿನಗಳೊಳಗೆ ಉತ್ತರ ನೀಡುವಂತೆ ಸೂಚಿಸಿದೆ. [ಯುಎಸ್ ಪ್ರವಾಸದ ವೇಳಾಪಟ್ಟಿ]

ಒಂದು ವೇಳೆ ನಿಗದಿತ 21 ದಿನಗಳಲ್ಲಿ ಮೋದಿ ಅವರು ಉತ್ತರಿಸಲು ವಿಫಲರಾದ ಹಿನ್ನೆಲೆಯಲ್ಲಿ ದೂರುದಾರರು ತಮ್ಮ ಅರ್ಜಿಯಲ್ಲಿ ಕೋರಿರುವ ಪರಿಹಾರವನ್ನು ನೀಡುವಂತೆ ನ್ಯಾಯಾಧೀಶರು ಆದೇಶಿಸುವ ಸಾಧ್ಯತೆಯಿದೆ.
ಮೋದಿ ಅವರು ಫ್ರಾಂಕ್ ಫರ್ಟ್ ನಲ್ಲಿ ಉಳಿದು ನ್ಯೂಯಾರ್ಕ್ ತಲುಪಲಿದ್ದಾರೆ. ನಂತರ ಸೆ.29ರಂದು ವಾಷಿಂಗ್ಟನ್ ಸೇರಲಿದ್ದಾರೆ. ಅಮೆರಿಕ ಪ್ರವಾಸದ ವೇಳೆ ಉಭಯ ನಾಯಕರು ಆರ್ಥಿಕ ಪ್ರಗತಿ, ರಕ್ಷಣೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಸಿರಿಯಾ, ಅಫ್ಘಾನಿಸ್ತಾನ, ಇರಾಕ್ನಲ್ಲಿನ ಪ್ರಸ್ತುತ ಬೆಳವಣಿಗೆಗಳ ಕುರಿತು ಅವರು ಮೋದಿ ಮತ್ತು ಒಬಾಮಾ ಮಾತುಕತೆ ನಡೆಸುವ ಸಾಧ್ಯತೆ ಇದೆ.
ಸೆ.29ರಂದು ಸುಮಾರು 11 ಟಾಪ್ ಕಾರ್ಪೊರೇಟ್ ದಿಗ್ಗಜರನ್ನು ಮೋದಿ ಉಪಹಾರ ಸಮಯದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ನಂತರ ನ್ಯೂಯಾರ್ಕ್ ನಲ್ಲಿ ಐದಾರು ಪ್ರಮುಖ ಕಂಪನಿಗಳ ಪ್ರತಿನಿಧಿಗಳ ಜೊತೆ ಮುಖಾಮುಖಿ ಚರ್ಚೆ ನಡೆಸಲಿದ್ದಾರೆ. [ಮೋದಿಗಾಗಿ ಕಾದಿರುವ ಯುಎಸ್ ನ ಟಾಪ್ ಸಿಇಒ]
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications