ರಷ್ಯಾ ಜೊತೆ ಭಾರತ S-400 ಕ್ಷಿಪಣಿ ಒಪ್ಪಂದ: ನಿರ್ಬಂಧಗಳನ್ನು ಮನ್ನಾ ಮಾಡಿದ ಅಮೆರಿಕಾ
ಚೀನಾದಂತಹ ಆಕ್ರಮಣಕಾರರನ್ನು ತಡೆಯಲು ನೆರವಾಗಲು ರಷ್ಯಾದಿಂದ ಭಾರತ ಖರೀದಿಸುತ್ತಿರುವ ಎಸ್-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಗೆ ಸಿಎಎಟಿಎಸ್ ಎಸ್ (ಕಾಟ್ಸಾ) ಕಾಯ್ದೆಯಿಂದ ವಿನಾಯಿತಿ ನೀಡುವ ತಿದ್ದುಪಡಿ ಮಸೂದೆಗೆ ಅಮೆರಿಕದ ಪ್ರಜಾ ಪ್ರತಿನಿಧಿ ಸಭೆಯಲ್ಲಿ ಗುರುವಾರ ಧ್ವನಿಮತದ ಅಂಗೀಕಾರ ದೊರೆತಿದೆ.
ಅಕ್ಟೋಬರ್ 2018ರಲ್ಲಿ, S-400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಗಳ ಐದು ಘಟಕಗಳನ್ನು ಖರೀದಿಸಲು ಭಾರತವು ರಷ್ಯಾದೊಂದಿಗೆ USD 5 ಶತಕೋಟಿ ಒಪ್ಪಂದಕ್ಕೆ ಸಹಿ ಹಾಕಿತ್ತು. S-400 ಕ್ಷಿಪಣಿ ವ್ಯವಸ್ಥೆಗಳನ್ನು ಖರೀದಿಸಲು ಅಮೆರಿಕದ ವಿರೋಧಿಗಳ ಮೂಲಕ ನಿರ್ಬಂಧಗಳ ಕಾಯ್ದೆ (CAATSA) ಯ ನಿಬಂಧನೆಗಳ ಅಡಿಯಲ್ಲಿ ಭಾರತದ ಮೇಲೆ ನಿರ್ಬಂಧಗಳನ್ನು ವಿಧಿಸುತ್ತದೆಯೇ ಎಂದು ಜೋ ಬೈಡನ್ ಆಡಳಿತವು ಸ್ಪಷ್ಟಪಡಿಸಿರಲಿಲ್ಲ. ಸದ್ಯ ಸಿಎಎಟಿಎಸ್ ಎಸ್ (ಕಾಟ್ಸಾ) ಕಾಯ್ದೆಯಿಂದ ವಿನಾಯಿತಿ ನೀಡುವ ತಿದ್ದುಪಡಿ ಮಸೂದೆಗೆ ಅಮೆರಿಕದ ಪ್ರಜಾ ಪ್ರತಿನಿಧಿ ಸಭೆಯಲ್ಲಿ ಗುರುವಾರ ಧ್ವನಿಮತದ ಅಂಗೀಕಾರ ದೊರೆತಿದೆ.
2017ರಲ್ಲಿ ಜಾರಿಗೆ ತರಲಾದ CAATSA, ರಷ್ಯಾದ ರಕ್ಷಣಾ ಮತ್ತು ಗುಪ್ತಚರ ಕ್ಷೇತ್ರಗಳೊಂದಿಗೆ ವಹಿವಾಟುಗಳಲ್ಲಿ ತೊಡಗಿರುವ ಯಾವುದೇ ದೇಶದ ವಿರುದ್ಧ ದಂಡನಾತ್ಮಕ ಕ್ರಮಗಳಿಗೆ ಅವಕಾಶ ಒದಗಿಸುತ್ತದೆ. ರಷ್ಯಾದಿಂದ S-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳ ಬ್ಯಾಚ್ ಖರೀದಿಸಿದ್ದಕ್ಕಾಗಿ CAATSA ಅಡಿಯಲ್ಲಿ ಅಮೆರಿಕವು ಈಗಾಗಲೇ ಟರ್ಕಿಯ ಮೇಲೆ ನಿರ್ಬಂಧಗಳನ್ನು ವಿಧಿಸಿದೆ ಮತ್ತು ಅಂತಹ ಭೀತಿಯ ಕಾರ್ಮೋಡ ಭಾರತದ ಮೇಲೂ ಬೃಹತ್ತಾಗಿ ಆವರಿಸಿತ್ತು. ಆದರೀಗ ಇದರಿಂದ ತಿದ್ದುಪಡಿ ಮಸೂದೆಗೆ ಅಮೆರಿಕ ಅಂಗೀಕರಿಸಿದೆ.

ಭಾರತೀಯ-ಅಮೆರಿಕನ್ ಕಾಂಗ್ರೆಸ್ ಸದಸ್ಯ ರೋ ಖನ್ನಾ ಅವರು ತಿದ್ದುಪಡಿ ಮಸೂದೆ ಮಂಡಿಸಿದರು. ಈ ತಿದ್ದುಪಡಿ ಕಾಯ್ದೆಯು ಚೀನಾದಂತಹ ಆಕ್ರಮಣಕಾರರನ್ನು ತಡೆಯಲು ಸಹಾಯ ಮಾಡುವ ನಿಟ್ಟಿನಲ್ಲಿ ವಿನಾಯಿತಿಯನ್ನು ಭಾರತಕ್ಕೆ ಒದಗಿಸಲು ಬೈಡನ್ ಆಡಳಿತ ಅನುವು ಮಾಡಿಕೊಟ್ಟಿದೆ.
S-400 ಟ್ರಯಂಫ್ ಮಾಸ್ಕೋ ಮೂಲದ ಅಲ್ಮಾಜ್ ಸೆಂಟ್ರಲ್ ಡಿಸೈನ್ ಬ್ಯೂರೋದಿಂದ ತಯಾರಾದ SA-21ನ ನ್ಯಾಟೋ ಪದನಾಮವನ್ನು ಹೊಂದಿದೆ. ರಫ್ತಿಗೆ ಉದ್ದೇಶಿಸಲಾದ ರಷ್ಯಾದ ಆರ್ಸೆನಲ್ನಲ್ಲಿ ಅತ್ಯಂತ ಆಧುನಿಕ ವಾಯು ರಕ್ಷಣಾ ವ್ಯವಸ್ಥೆಯನ್ನು ಹೊಂದಿದೆ. ಒಳಬರುವ ಶತ್ರು ವಿಮಾನಗಳು, ಕ್ಷಿಪಣಿಗಳು ಮತ್ತು ಡ್ರೋನ್ಗಳನ್ನು 400 ಕಿ.ಮೀ. ವ್ಯಾಪ್ತಿಯೊಳಗೆ ನಾಶಪಡಿಸುವ ಸಾಮರ್ಥ್ಯವನ್ನು ಇದು ಹೊಂದಿದೆ. ಇದು ಸುಮಾರು 600 ಕಿ.ಮೀ. ಟ್ರ್ಯಾಕಿಂಗ್ ಸಾಮರ್ಥ್ಯವನ್ನು ಹೊಂದಿದೆ.
ಸುಮಾರು 400 ಕಿ.ಮೀ. ದೂರದಲ್ಲಿರುವ ಸ್ಟೆಲ್ತ್ ತಂತ್ರಜ್ಞಾನಗಳನ್ನು ಒಳಗೊಂಡಂತೆ ಹಾರುವ ಗುರಿಗಳನ್ನು ಹೊಡೆದುರುಳಿಸಲು ವ್ಯವಸ್ಥೆಯನ್ನು ವಿನ್ಯಾಸಗೊಳಿಸಲಾಗಿದೆ. ಇದು ಸಿಡಿತಲೆ ಕ್ಷಿಪಣಿಗಳು ಮತ್ತು ಶಬ್ದಾತೀತ ಗುರಿಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ಹಿಂದಿನ ಆವೃತ್ತಿಯಾದ S-300ಗೆ ಹೋಲಿಸಿದರೆ S-400 ಸುಮಾರು 2.5 ಪಟ್ಟು ಹೆಚ್ಚು ವೇಗದ ಫೈರಿಂಗ್ ದರವನ್ನು ಹೊಂದಿದೆ.
-
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications