ಪಾಕ್ ಉಗ್ರವಾದಿ ರಾಷ್ಟ್ರ ಎಂದು ಘೋಷಿಸಿದ ಅಮೆರಿಕ
ಪಾಕಿಸ್ತಾನವನ್ನು ಉಗ್ರವಾದಿಗಳ ಸ್ವರ್ಗವೆಂದು ಘೋಷಿಸಿದ ಅಮೆರಿಕ. ಅಲ್ಲಿನ ಸಂಸತ್ತಿನಲ್ಲಿ ಮಂಡನೆಯಾಗುವ ವಾರ್ಷಿಕ ಉಗ್ರವಾದದ ವರದಿಯಲ್ಲಿ ಉಲ್ಲೇಖ.
ವಾಷಿಂಗ್ಟನ್, ಜುಲೈ 20: ಬಹುದಿನಗಳಿಂದ ಭಾರತದ ಒತ್ತಾಯಕ್ಕೆ ಅಮೆರಿಕ ಸರ್ಕಾರ ಕೊನೆಗೂ ಕಿವಿಗೊಟ್ಟಿದೆ. ಪಾಕಿಸ್ತಾನವನ್ನು ಭಯೋತ್ಪಾದಕ ನೆಲೆ ಎಂದು ಘೋಷಿಸಿದೆ. ಪಠಾಣ್ ಕೋಟ್ ದಾಳಿಯ ಮುಖ್ಯ ರೂವಾರಿ ಅಜರ್ ಮಸೂದ್ ಅವರನ್ನು ಇತ್ತೀಚೆಗೆ ಅಮೆರಿಕ ಜಾಗತಿಕ ಉಗ್ರನೆಂದು ಘೋಷಣೆ ಮಾಡಿತ್ತು. ಇದಾದ ನಂತರ, ಪಾಕಿಸ್ತಾನಕ್ಕೆ ಅಮೆರಿಕದಿಂದ ಸಿಗುತ್ತಿರುವ ಮತ್ತೊಂದು ಪೆಟ್ಟು ಇದಾಗಿದೆ.
ಪಾಕಿಸ್ತಾನವನ್ನು ಉಗ್ರ ಪೋಷಕ ರಾಷ್ಟ್ರವೆಂದು ಘೋಷಿಸಿರುವುದು ರಾಜತಾಂತ್ರಿಕ ಮಟ್ಟದಲ್ಲಿ ಇದು ಭಾರತಕ್ಕೆ ದೊಡ್ಡ ಸಂಭ್ರಮವನ್ನು ತಂದುಕೊಟ್ಟಿದ್ದರೆ, ಪಾಕಿಸ್ತಾನಕ್ಕೆ ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಅಪಮಾನ ತಂದಿದೆ.

ವಾರ್ಷಿಕವಾಗಿ, ಅಮೆರಿಕದ ಸಂಸತ್ತಿನಲ್ಲಿ ಮಂಡನೆಯಾಗುವ 'ಕಂಟ್ರಿ ರಿಪೋರ್ಟ್ ಆನ್ ಟೆರರಿಸಂ' ಎಂಬ ವರದಿಯಲ್ಲಿ ಈ ವಿಚಾರವನ್ನು ಉಲ್ಲೇಖಿಸಲಾಗಿದೆ. ಲಷ್ಕರ್-ಎ-ತೊಯ್ಬಾ, ಜೈಷ್-ಎ-ಮೊಹಮ್ಮದ್ ನಂಥ ಉಗ್ರ ಸಂಘಟನೆಗಳಿಗೆ ಆಶ್ರಯ ನೀಡುವ ಮೂಲಕ, ಉಗ್ರ ಸಂಘಟನೆಗಳ ಸ್ವರ್ಗ ಎನ್ನುವಂಥ ಪರಿಸ್ಥಿತಿ ಪಾಕಿಸ್ತಾನದಲ್ಲಿದೆ. ಹೀಗಾಗಿ, ಆ ದೇಶವನ್ನು ಉಗ್ರವಾದ ಬೆಂಬಲಿಸುವ ರಾಷ್ಟ್ರವೆಂದು ಕರೆಯಲು ಅಡ್ಡಿಯಿಲ್ಲ ಎಂದು ಅಮೆರಿಕ ಸರ್ಕಾರ ಅಭಿಪ್ರಾಯಪಟ್ಟಿದೆ.
ಇದಲ್ಲದೆ, ಈ ವರದಿಯಲ್ಲಿ ಒಟ್ಟು 8 ರಾಷ್ಟ್ರಗಳನ್ನು ಉಗ್ರವಾದಿ ಪೋಷಕ ರಾಷ್ಟ್ರಗಳೆಂದು ಅಮೆರಿಕ ಹೆಸರಿಸಿದೆ. ಪಾಕಿಸ್ತಾನ, ಆಫ್ಘಾನಿಸ್ತಾನ, ಸೊಮಾಲಿಯಾ, ಟ್ರಾನ್ಸ್ ಸಹಾರಾ, ಸುಲು/ಸುಲಾವೆಸಿ ಲಿಟೋರಲ್, ಸದರನ್ ಫಿಲಿಪ್ಪೀನ್ಸ್, ಈಜಿಪ್ಟ್, ಇರಾಕ್, ಲಿಬಿಯಾ, ಯೆಮೆನ್, ಲೆಬನಾನ್, ಲಿಬಿಯಾ, ಯೆಮೆನ್, ಕೊಲಂಬಿಯಾ ಹಾಗೂ ವೆನೆಜುವೆಲಾ ರಾಷ್ಟ್ರಗಳು ಈ ಪಟ್ಟಿಯಲ್ಲಿವೆ.
ಅಲ್ಲದೆ, ಪಾಕಿಸ್ತಾನದ ಬೆಂಬಲದಿಂದಲೇ ಈ ದೇಶದ ಉಗ್ರರು ಭಾರತದ ಮೇಲೆ ಸತತವಾಗಿ ದಾಳಿ ಮಾಡಲು ಸಾಧ್ಯವಾಗುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಇದಕ್ಕೆ ನಾನಾ ಉದಾಹರಣೆಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಪ್ರಮುಖವಾಗಿ ಕಳೆದ ವರ್ಷ ನಡೆದಿದ್ದ ಪಠಾಣ್ ಕೋಟ್ ಮೇಲಿನ ಉಗ್ರರ ದಾಳಿಯನ್ನು ಒತ್ತಿ ಹೇಳಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications