ಇರಾನ್ ವಿರುದ್ಧ ಯಾವುದೇ ಕ್ಷಣದಲ್ಲಿ ಅಮೆರಿಕ ಸೇನೆಯಿಂದ ದಿಢೀರ್ ದಾಳಿ ಸಾಧ್ಯತೆ | US Military
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಖಡಕ್ ನಿರ್ಧಾರ ಕೈಗೊಂಡು, ತಮ್ಮ ಶತ್ರು ವಿರುದ್ಧ ಘೋರ ಕಾರ್ಯಾಚರಣೆಗೆ ಪ್ಲಾನ್ ಮಾಡಿಕೊಂಡಿದ್ದಾರೆ. ಹೇಗಾದರೂ ಮಾಡಿ ಇರಾನ್ ದಾರಿಗೆ ಬಂದು ಅಮೆರಿಕ ಜೊತೆಗೆ ಪರಮಾಣು ಒಪ್ಪಂದಕ್ಕೆ ಸಹಿ ಹಾಕಬೇಕು ಎಂಬುದು ಡೊನಾಲ್ಡ್ ಟ್ರಂಪ್ ಅವರ ಪ್ಲಾನ್. ಆದರೆ ಪರಮಾಣು ಒಪ್ಪಂದಕ್ಕೆ ಇರಾನ್ ಒಪ್ಪಿಕೊಳ್ಳದೆ ಕಿರಿಕ್ ಮಾಡುತ್ತಿದೆ ಎಂಬ ಕಾರಣಕ್ಕೆ ಇದೀಗ ಮತ್ತಷ್ಟು ಫೈಟಿಂಗ್ ಶುರುವಾಗಿದ್ದು, ಅಮೆರಿಕ ಹಾಗೂ ಇರಾನ್ ನಡುವೆ ಯುದ್ಧ ಬಹುತೇಕ ಫಿಕ್ಸ್ ಆಗುತ್ತಿದೆ. ಇಂತಹ ಸಮಯದಲ್ಲೇ ಇರಾನ್ ಬಳಿ ಈಗಾಗಲೇ ತಲುಪಿರುವ ಯುದ್ಧ ನೌಕೆಗಳು & ಯುದ್ಧ ವಿಮಾನಗಳು ಟ್ರಂಪ್ ಅವರ ಆದೇಶಕ್ಕೆ ಕಾಯುತ್ತಿವೆ.
ಅಮೆರಿಕದ ಬೃಹತ್ ಯುದ್ಧ ನೌಕೆ ಹಾಗೂ ಯುದ್ಧ ವಿಮಾನ ಹೊತ್ತೊಯ್ಯುವ ಸಾಮರ್ಥ್ಯ ಇರುವ ಯುಎಸ್ಎಸ್ ಅಬ್ರಹಾಂ ಲಿಂಕನ್ ಕಳೆದ ಹಲವು ದಿನಗಳಿಂದ ಇರಾನ್ ಗಡಿಯಲ್ಲಿ ಬೀಡು ಬಿಟ್ಟಿದೆ. ವಾಷಿಂಗ್ಟನ್ ಇದೀಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟು ಇರಾನ್ಗೆ ವಾರ್ನಿಂಗ್ ಕೊಡಲು ಸಜ್ಜಾಗಿದೆ. ಈ ಪೈಕಿ ಅಮೆರಿಕ ಸೇನೆಯ ಬಳಿ ಇರುವ ಜಗತ್ತಿನ ಅತಿದೊಡ್ಡ ವಿಮಾನವಾಹಕ ನೌಕೆ ಯುಎಸ್ಎಸ್ ಜೆರಾಲ್ಡ್ ಆರ್. ಫೋರ್ಡ್ ಕೂಡ ಇದೀಗ ಮಧ್ಯಪ್ರಾಚ್ಯ ಭಾಗದಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಈ ನೌಕೆ, ಯುಎಸ್ಎಸ್ ಅಬ್ರಹಾಂ ಲಿಂಕನ್ ರೀತಿಯಲ್ಲೇ ಅತ್ಯಂತ ಪ್ರಬಲ ಹಾಗೂ ಹಲವು ಆಧುನಿಕ ತಂತ್ರಜ್ಞಾನ ಒಳಗೊಂಡಿದೆ. ಜೆರಾಲ್ಡ್ ಆರ್. ಫೋರ್ಡ್ ಇನ್ನೇನು ಕೆಲವೇ ಗಂಟೆಗಳಲ್ಲಿ ಇರಾನ್ ಬಳಿ ಬರುವ ನಿರೀಕ್ಷೆ ಇದ್ದು, ಯುದ್ಧ ಜೋರಾಗುವ ಭೀತಿ ಮಧ್ಯಪ್ರಾಚ್ಯ ಭಾಗದಲ್ಲಿ ಆವರಿಸಿದೆ.

ಇರಾನ್ ಕಡೆಯಿಂದಲೂ ಪ್ರತಿದಾಳಿ ಸಾಧ್ಯತೆ
ಈಗಾಗಲೇ ಹಲವು ಬಾರಿ ಇರಾನ್ ನೀಡಿರುವ ಎಚ್ಚರಿಕೆ ಪ್ರಕಾರ, ಅಕಸ್ಮಾತ್ ಅಮೆರಿಕ ದಾಳಿ ಮಾಡಿದರೆ ಆ ತಕ್ಷಣ ತಾನು ಕೂಡ ಪ್ರತಿದಾಳಿ ನಡೆಸುವ ಸಾಧ್ಯತೆ ಇದೆ. ಮತ್ತೊಂದು ಕಡೆ, ಹೀಗೆಲ್ಲಾ ಎರಡೂ ದೇಶಗಳ ನಡುವೆ ವೈರತ್ವ ಬೆಳೆದಿರುವುದು ಜಾಗತಿಕವಾಗಿ ಕೂಡ ಭಯ ಹುಟ್ಟುಹಾಕಿದೆ. ಇಬ್ಬರ ಮಧ್ಯೆ ಯುದ್ಧ ಜೋರಾಗಿ ವಿನಾಶಕಾರಿ ಅಸ್ತ್ರಗಳನ್ನು ಬಳಸಿದರೆ ಅದರ ಪರಿಣಾಮ ಏನು? ಎಂಬ ಚಿಂತೆಯು ಕೂಡ ಶುರುವಾಗಿದ್ದು, ಮಧ್ಯಪ್ರಾಚ್ಯ ಭಾಗದ ದೇಶಗಳು ಈಗಾಗಲೇ ಶಾಂತಿ ಒಪ್ಪಂದಕ್ಕೆ ಬೇಕಾಗಿರುವ ಎಲ್ಲಾ ಪ್ರಯತ್ನ ಮಾಡಿವೆ. ಆದರೂ ಅದು ಫಲಕಾರಿಯಾಗದೆ ಮತ್ತೊಮ್ಮೆ ಯುದ್ಧ ನಡೆಯುವ ಭೀತಿ ಇದೀಗ ಆವರಿಸಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications