ಅಮೆರಿಕ ಸೇನೆಗೆ ಇರಾನ್ ಬಳಿ ದಿನದಿಂದ ದಿನಕ್ಕೆ ಮತ್ತಷ್ಟು ಬಲ, 3ನೇ ಮಹಾಯುದ್ಧದ ಆತಂಕ ಶುರು | US Military
ಡೊನಾಲ್ಡ್ ಟ್ರಂಪ್ ಅವರು & ಇರಾನ್ ನಡುವೆ ನಡೆಯುತ್ತಿರುವ ಮಾತಿನ ಯುದ್ಧ ನಿಂತಿಲ್ಲ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೆ ಮತ್ತೆ ಇರಾನ್ ವಿರುದ್ಧ ಸೇನಾ ಕಾರ್ಯಾಚರಣೆ ಬಗ್ಗೆ ಪ್ರಸ್ತಾಪ ಮಾಡುತ್ತಿದ್ದಾರೆ. ಈ ಬೆಳವಣಿಗೆ ನಂತರ ಇರಾನ್ ಬಳಿ ಅಮೆರಿಕದ ಸೇನಾ ಜಮಾವಣೆ ಕೂಡ ಹೆಚ್ಚಾಗಿ ಸಾಗಿದ್ದು, ಇರಾನ್ ಪರವಾಗಿ ರಷ್ಯಾ & ಚೀನಾ ನಿಲ್ಲುವ ಮುನ್ಸೂಚನೆ ದಟ್ಟವಾಗಿದೆ. ಇದೆಲ್ಲಾ ಅತ್ತ ಮಧ್ಯಪ್ರಾಚ್ಯ ಭಾಗದ ನೆಮ್ಮದಿ ಹಾಳು ಮಾಡುವ ಜೊತೆಗೆ ಜಾಗತಿಕ ಮಟ್ಟದಲ್ಲಿ ಕೂಡ ಭೀತಿಯನ್ನು ಹುಟ್ಟುಹಾಕಿದೆ. ಮತ್ತೊಂದು ಕಡೆ 3ನೇ ಮಹಾಯುದ್ಧದ ಆತಂಕ ಕೂಡ ಇದೀಗ ಶುರುವಾಗಿದ್ದು, ಈ ಸಮಯದಲ್ಲಿ ಪರಮಾಣು ಅಸ್ತ್ರಗಳ ಬಗ್ಗೆ ಕೂಡ ಟೆನ್ಷನ್ ಹೆಚ್ಚಾಗಿದೆ.
ಇರಾನ್ ಮಾತ್ರವಲ್ಲ ಮಧ್ಯಪ್ರಾಚ್ಯದ ಗಾಜಾ ಹಾಗೂ ಲೆಬನಾನ್ ಭಾಗದಲ್ಲೂ ನೆಮ್ಮದಿ ಇಲ್ಲ ಈಗ. ಹೀಗಾಗಿ ಮಧ್ಯಪ್ರಾಚ್ಯದ ಹಣೆಬರಹ ಸರಿ ಇಲ್ಲ ಅಂತಾ ಕಾಣುತ್ತೆ, ಯಾಕಂದ್ರೆ ಪದೇ ಪದೇ ಈ ಭಾಗದಲ್ಲೇ ಯುದ್ಧ ಆರಂಭ ಆಗುತ್ತಿವೆ. ಒಂದೆಡೆ ಇರಾನ್ ಮತ್ತು ಅಮೆರಿಕ ಯಾವುದೇ ಕ್ಷಣದಲ್ಲಿ ಭಾರಿ ರಣಕಾಳಗ ಶುರು ಮಾಡಬಹುದು ಎಂಬ ಆತಂಕ ಆವರಿಸಿದ ಸಮಯದಲ್ಲೇ ಒಂದೊಂದೇ ದೇಶಗಳು ಇರಾನ್ ಬೆನ್ನಿಗೆ ನಿಲ್ಲುತ್ತಿವೆ. ರಷ್ಯಾ ಮತ್ತು ಚೀನಾ ಈ ವಿಚಾರದಲ್ಲಿ ಗಟ್ಟಿ ನಿರ್ಧಾರ ಮಾಡಿರುವುದು ಅಮೆರಿಕ ಸೇನೆ ಚಿಂತೆ ಮಾಡುವಂತೆ ಆಗಿದೆ. ಇದೆಲ್ಲವನ್ನೂ ಮೀರಿ ಇದೀಗ 3ನೇ ಮಹಾಯುದ್ಧದ ಆತಂಕ ಕೂಡ ಶುರು ಆಗಿದೆ. ಇದೇ ರೀತಿಯಾಗಿ ಜಗತ್ತು ಇರಾನ್ ವಿಚಾರದಲ್ಲಿ ವಿಭಜನೆ ಆಗುತ್ತಾ ಹೋದರೆ ಮುಂದೆ ಅದು ಘೋರ ಕಾಳಗಕ್ಕೆ ದಾರಿ ಮಾಡಿಕೊಡಬಹುದು ಎಂಬ ಆತಂಕ ಆವರಿಸಿದೆ.

ಟ್ರಂಪ್ ಕೊಟ್ಟಿದ್ದರು 10 ದಿನಗಳ ಗಡುವು
ಅಮೆರಿಕ ಮತ್ತು ಇರಾನ್ ನಡುವಿನ ಬಿಕ್ಕಟ್ಟು ಸ್ವಲ್ಪ ಕೂಡ ಕಡಿಮೆ ಆಗುತ್ತಿಲ್ಲ, ಬದಲಾಗಿ ತಿಕ್ಕಾಟವು ಇನ್ನಷ್ಟು ತೀವ್ರಗೊಂಡಿದೆ. ಇರಾನ್ ವಿಶ್ವಸಂಸ್ಥೆ ಮುಖ್ಯಸ್ಥರು & ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ವಿಶೇಷ ಪತ್ರ ಬರೆದಿದ್ದು, ಪತ್ರದಲ್ಲಿ ಬಲವಾದ ಪ್ರತೀಕಾರದ ಎಚ್ಚರಿಕೆ ನೀಡಿದೆ. ಈ ಮೂಲಕ ಆತಂಕ ಇನ್ನಷ್ಟು ಹೆಚ್ಚಾಗಿದ್ದು, ಮತ್ತೊಂದು ಮಹಾಯುದ್ಧ ಎಂದರೆ 3ನೇ ಮಹಾಯುದ್ಧದ ಆತಂಕ ಇದೀಗ ಭುಗಿಲೆದ್ದಿದೆ. ಹೊಸ ಪರಮಾಣು ಒಪ್ಪಂದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇದೀಗ 10 ದಿನಗಳ ಗಡುವು ನೀಡಿದ್ದು, ಆ ಗಡುವು ಸಮೀಪಕ್ಕೆ ಬರುತ್ತಿರುವ ಸಮಯದಲ್ಲೇ ಇರಾನ್ ಪತ್ರವು ಭಾರಿ ಗಮನ ಸೆಳೆದಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications