ಡೊನಾಲ್ಡ್ ಟ್ರಂಪ್ ಮಹತ್ವದ ಚಿಂತನೆ, ಇರಾನ್ ವಿರುದ್ಧ ವಾರಾಂತ್ಯದಲ್ಲಿ ಮಹತ್ವದ ಕ್ರಮ ಸಾಧ್ಯತೆ | US Military
ಮಧ್ಯಪ್ರಾಚ್ಯ ಭಾಗದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಹೊತ್ತಿಕೊಂಡ ಬೆಂಕಿ ಸೇನಾ ಕಾರ್ಯಾಚರಣೆ ರೂಪ ಪಡೆಯುತ್ತಿದ್ದು, ಈ ವಾರಾಂತ್ಯಕ್ಕೆ ಇರಾನ್ ವಿರುದ್ಧ ದಾಳಿ ನಡೆಸಲು ಅಮೆರಿಕ ಸೇನೆ ಸಿದ್ಧವಾಗಿದೆ ಎಂಬ ಸುದ್ದಿ ಸಂಚಲನ ಸೃಷ್ಟಿಸಿದೆ. ಆದರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇನ್ನೂ ಈ ಬಗ್ಗೆ ಅಂತಿಮ ಆದೇಶ ನೀಡಿಲ್ಲ, ಹೀಗಾಗಿ ಅಮೆರಿಕ ಅಧ್ಯಕ್ಷರ ಆದೇಶಕ್ಕಾಗಿ ಅಮೆರಿಕದ ಶಕ್ತಿಶಾಲಿ ಸೇನೆಯು ಇದೀಗ ಕಾದು ಕುಳಿತಿದೆ. ಈ ಮೂಲಕ ಬೂದಿ ಮುಚ್ಚಿದ ಕೆಂಡವಾಗಿರುವ ಮಧ್ಯಪ್ರಾಚ್ಯ ಭಾಗದಲ್ಲಿ ದಿಢೀರ್ ಹೊಗೆ ಜೋರಾಗಿದೆ. ಸಿಎನ್ಎನ್ & ಸಿಎನ್ಬಿಸಿ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಮಟ್ಟದ ಮಾಧ್ಯಮಗಳು ಅಮೆರಿಕದ ಈ ದಿಢೀರ್ ಸೇನಾ ಕಾರ್ಯಾಚರಣೆ ಬಗ್ಗೆ ವರದಿ ಮಾಡಿವೆ.
2003 ಸಮಯದಲ್ಲಿ ಅಮೆರಿಕ ದಿಢೀರ್ ಇರಾಕ್ ಮೇಲೆ ಸೇನಾ ದಾಳಿ ಮಾಡಿದ ನಂತರ ಈಗ ಮಧ್ಯಪ್ರಾಚ್ಯ ಭಾಗದ ದೊಡ್ಡ ದೇಶದ ಮೇಲೆ ಮತ್ತೆ ಸೇನಾ ಕಾರ್ಯಾಚರಣೆಗೆ ಸಜ್ಜಾಗಿದೆ. ಹೀಗಾಗಿ ಜಗತ್ತಿನ ದೊಡ್ಡಣ್ಣ ಅಮೆರಿಕ ಸೇನೆ ತನ್ನ ಬಳಿ ಇರುವ ದೊಡ್ಡ ದೊಡ್ಡ ವಿಮಾನಗಳನ್ನು ರವಾನಿಸಿದೆ. ಹೀಗೆ, ಸುಮಾರು 23 ವರ್ಷಗಳ ನಂತರ ಮತ್ತೊಂದು ಬೃಹತ್ ಸೇನಾ ಕಾರ್ಯಾಚರಣೆಗೆ ಅಮೆರಿಕ ಕೈಹಾಕಿದೆ. ಇದು ತೀವ್ರ ಚರ್ಚೆಯ ಜೊತೆಗೆ ಮಧ್ಯಪ್ರಾಚ್ಯದಲ್ಲಿ ಆತಂಕದ ವಾತಾವರಣ ಸೃಷ್ಟಿಸಿದೆ.

ಬೃಹತ್ ಯುದ್ಧ ವಿಮಾನಗಳ ರವಾನೆ
ಈ ಬಗ್ಗೆ ಮಧ್ಯಪ್ರಾಚ್ಯ ಭಾಗದಲ್ಲಿ ಮಾತ್ರವಲ್ಲದೆ ಇಡೀ ಜಗತ್ತಿನಾದ್ಯಂತ ಭೀತಿಯು ಹೆಚ್ಚಾಗಿದೆ. ಅಲ್ಲದೆ ಒಮಾನ್ ಸೇರಿದಂತೆ ಮಧ್ಯಪ್ರಾಚ್ಯ ಭಾಗದ ಶ್ರೀಮಂತ ದೇಶಗಳು ಗಂಭೀರ ಚಿಂತನೆ ನಡೆಸಿದ್ದು, ಯುದ್ಧ ನಡೆಯುವುದನ್ನು ತಪ್ಪಿಸೋದಕ್ಕೆ ಎಲ್ಲಾ ಪ್ರಯತ್ನ ಮಾಡುತ್ತಿವೆ. ಆದರೂ ಅಮೆರಿಕ 2003ರ ನಂತರ ಇದೇ ಮೊದಲ ಬಾರಿಗೆ ತನ್ನಲ್ಲಿ ಇರುವ ಎಲ್ಲಾ ದೊಡ್ಡ ದೊಡ್ಡ ಯುದ್ಧ ವಿಮಾನಗಳನ್ನು ಮಧ್ಯಪ್ರಾಚ್ಯ ಭಾಗಕ್ಕೆ ರವಾನಿಸಿದೆ.
ಇದು ಜಗತ್ತನ್ನೇ ಸುಡುವ ಬೆಂಕಿ?
ಅಮೆರಿಕ ಸೇನೆಯಲ್ಲಿ ಇರುವ ಎಲ್ಲಾ ಯುದ್ಧ ವಿಮಾನಗಳು ತುಂಬಾ ಶಕ್ತಿಶಾಲಿ ಅಂತಾ ಹೇಳಬಹುದು. ಎಫ್-22 ಎಸ್, ಎಫ್-35 ಎಸ್, ಎಫ್-16 ಎಸ್ ಯುದ್ಧ ವಿಮಾನಗಳು ದಿಢೀರ್ ಇರಾನ್ ಕಡೆಗೆ ಹಾರಿ ಬಂದಿವೆ. ಮತ್ತೊಂದು ಕಡೆ ಇಸ್ರೇಲ್ ತನ್ನ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನ ಇನ್ನಷ್ಟು ಭದ್ರ ಮಾಡಿದ್ದು, ಯಾವುದೇ ಸಮಯವೂ ಎದುರಾಗುವ ಸೂಕ್ಷ್ಮ ಪರಿಸ್ಥಿತಿ ಮಧ್ಯಪ್ರಾಚ್ಯದಲ್ಲಿ ನಿರ್ಮಾಣ ಆಗಿದೆ. ಹಾಗೇ ಇರಾನ್ ಜನ ಪಲಾಯನದ ಚಿಂತೆ ಮಾಡುತ್ತಿದ್ದಾರೆ. ಕೂಡಲೇ ಯುದ್ಧ ನಿಲ್ಲಿಸಲು ಕ್ರಮ ಕೈಗೊಳ್ಳದೇ ಇದ್ದರೆ ಇದು ಇಡೀ ಜಗತ್ತನ್ನೇ ಸುಡುವ ಬೆಂಕಿ ಆದರೂ ಅಚ್ಚರಿ ಇಲ್ಲ ಅಂತಿದ್ದಾರೆ ತಜ್ಞರು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications