ಶ್ವೇತಭವನದಲ್ಲಿ ದೀಪಾವಳಿ ಆಚರಿಸಿದ ಬರಾಕ್ ಒಬಾಮ
ವಾಷಿಂಗ್ಟನ್, ಅಕ್ಟೋಬರ್, 31: ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ಶ್ವೇತಭವನ ಓವಲ್ ಕಚೇರಿಯಲ್ಲಿ ದೀಪ ಬೆಳಗಿಸಿ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸಿ ಸಂಭ್ರಮಪಟ್ಟರು.
ಮುಂದೆ ಬರುವ ಅಧ್ಯಕ್ಷರೂ ಸಹ ಇದೇ ರೀತಿ ದೀಪಾವಳಿಯನ್ನು ಆಚರಿಸುತ್ತಾರೆ ಎಂಬ ಆಶಯ ನನಗೆ ಇದೆ ಎಂದು ಅವರು ಹೇಳಿದರು. ಒಬಾಮ ಅವರು ಪ್ರಥಮ ಬಾರಿಗೆ 2009ರಲ್ಲಿಯೂ ಸಹ ಶ್ವೇತಭವನದಲ್ಲಿ ದೀಪಾವಳಿಯನ್ನು ಆಚರಿಸಿದ್ದರು.
ಪ್ರಥಮ ಬಾರಿಗೆ ಶ್ವೇತ ಭವನದಲ್ಲಿ ದೀಪಾವಳಿ ಆಚರಿಸಿದ ಅಮೆರಿಕದ ಮೊದಲ ಅಧ್ಯಕ್ಷ ಎಂಬ ಹೆಮ್ಮೆ ನನಗಿದೆ. ಮುಂಬೈ ಭೇಟಿಯ ವೇಳೆಯ ದೀಪಾವಳಿ ಆಚರಿಸಿದ ಸಂದರ್ಭವನ್ನು ಒಬಾಮಾ ಅವರು ಸ್ಮರಿಸಿದರು. ಭಾರತೀಯರು ಅಂದು ತೋರಿದ ಪ್ರೀತಿ ಮತ್ತು ಆತ್ಮೀಯತೆಯನ್ನು ನೆನೆದು ಸಂತಸ ವ್ಯಕ್ತಪಡಿಸಿದರು.
ಓವಲ್ ಕಚೇರಿಯಲ್ಲಿ ಬೆಳಗಿರುವ ದೀಪ ಕತ್ತಲೆಯಿಂದ ಬೆಳಕಿನೆಡೆಗೆ ನಮ್ಮನ್ನು ಸ್ವಾಗಿತಿಸುತ್ತಿದೆ ಎಂದು ಹೇಳಿದರು. ಅಷ್ಟೇ ಅಲ್ಲದೇ ದೀಪಾವಳಿ ಆಚರಿಸುತ್ತಿರುವ ಚಿತ್ರವೊಂದನ್ನು ಅವರು ಫೇಸ್ ಬುಕ್ ನಲ್ಲಿ ಪ್ರಕಟಿಸಿದ್ದು, ಅದು ಈಗ ವೈರಲ್ ಆಗಿದೆ.
ಒಂದೇ ದಿನದಲ್ಲಿ 1.5ಲಕ್ಷಕ್ಕೂ ಹೆಚ್ಚು ಮಂದಿ ಚಿತ್ರಕ್ಕೆ ಲೈಕ್ ಕೊಟ್ಟಿದ್ದು, 33 ಸಾವಿರಕ್ಕೂ ಅಧಿಕ ಮಂದಿ ಶೇರ್ ಮಾಡಿದ್ದಾರೆ. ಒಬಾಮ ಕುಟುಂಬದ ಪರವಾಗಿ ಎಲ್ಲರಿಗೂ ದೀಪಾವಳಿ ಶುಭಾಶಯ ತಿಳಿಸುತ್ತೇನೆ ಎಂದು ಒಬಾಮ ಅವರು ಹೇಳಿದ್ದಾರೆ.
ಇನ್ನುಳಿದಂತೆ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೋನಾಲ್ಡ್ ಟ್ರಂಪ್ ಹಾಗು ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಹಿಲರಿ ಕ್ಲಿಂಟನ್ ಅವರೂ ಸಹ ದೀಪಾವಳಿ ಶುಭಾಶಯ ಕೋರಿದ್ದಾರೆ.

ಪಟಾಕಿ ಸಿಡಿಸಿ ಸಂಭ್ರಮಿಸಿದ ಭಾರತ ಮೂಲದ ಮಹಿಳೆಯರು
ಭಾರತ ಮೂಲದ ಮಹಿಳೆಯೊಬ್ಬರು ನ್ಯೂಜೆರ್ಸಿಯಲ್ಲಿ ಭಾನುವಾರ ರಾತ್ರಿ ಪಟಾಕಿ ಸಿಡಿಸಿ ದೀಪಾವಳಿ ಆಚರಿಸಿದರು. ಅಮೆರಿಕದ ರಸ್ತೆಗಳಲ್ಲಿ ಪಟಾಕಿ ಸಿಡಿಸಲು ಅವಕಾಶವಿಲ್ಲದಿದ್ದರೂ, ಪೊಲೀಸರ ಸುಪರ್ದಿಯಲ್ಲಿ ಶಾಂತಿಯುತವಾಗಿ ದೀಪಾವಳಿ ಆಚರಿಸಲಾಯಿತು.

ಭಾರತೀಯರಿಂದ ಸಂಭ್ರಮದ ದೀಪಾವಳಿ ಆಚರಣೆ
ಅಮೆರಿಕದ ನ್ಯೂಜೆರ್ಸೆಯಲ್ಲಿರುವ ಪಟೇಲ್ ಪಾನ್ ಶಾಪ್ ಎದುರಿಗೆ ಭಾರತದ ಪ್ರಜೆಗಳು ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಿದರು. ಪೊಲೀಸ್ ಇಲಾಖೆ ದೀಪಾವಳಿ ಆಚರಣೆಗೆ ಅವಕಾಶ ಕಲ್ಪಿಸಿತು

ನ್ಯೂಜೆರ್ಸೆ ರಸ್ತೆಯಲ್ಲಿ ದೀಪಾವಳಿ ಬೆಳಕು
ಅಮೆರಿಕದ ನ್ಯೂಜೆರ್ಸಿಯ ರಸ್ತೆಯೊಂದರಲ್ಲಿ ಭಾರತದ ಪ್ರಜೆಗಳು ಪಟಾಕಿಸಿಡಿಸಿ ರಸ್ತೆ ತುಂಬೆಲ್ಲಾ ಬೆಳಕನ್ನು ಮೂಡಿಸಿ ಸಂಭ್ರಮದಿಂದ ದೀಪಾವಳಿ ಆಚರಿಸಿದರು. ಸ್ಥಳೀಯ ಪ್ರಜೆಗಳಿಗೂ ದೀಪಾವಳಿ ಸಂಭ್ರಮವನ್ನು ಕಂಡು ಸಂತೋಷಪಟ್ಟರು
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications