ನೊಬೆಲ್ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ಶಿಫಾರಸು!
ಜೆರುಸಲೆಂ, ಸೆಪ್ಟೆಂಬರ್ 9: ಇಸ್ರೇಲ್ ಮತ್ತು ಯುನೈಟೆಡ್ ಅರಬ್ ಎಮಿರೈಟ್ಸ್ ನಡುವೆ ಒಪ್ಪಂದ ಏರ್ಪಡಲು ನಡೆಸಿದ ಪ್ರಯತ್ನಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪುರಸ್ಕಾರಕ್ಕಾಗಿ ನಾಮನಿರ್ದೇಶನ ಮಾಡಲಾಗಿದೆ.
ನಾರ್ವೆ ಸಂಸತ್ನ ಸದಸ್ಯ ಮತ್ತು ನ್ಯಾಟೋ ಸಂಸದೀಯ ಸಭೆಯ ಅಧ್ಯಕ್ಷ ಕ್ರಿಸ್ಟಿಯನ್ ಟೈಬ್ರಿಂಗ್-ಜೆಡ್ಡೆ ಈ ನಾಮನಿರ್ದೇಶನ ಸಲ್ಲಿಸಿದ್ದಾರೆ ಎಂದು ಫಾಕ್ಸ್ ನ್ಯೂಸ್ ವರದಿ ಮಾಡಿದೆ.
ಕಿಮ್ ಜಾಂಗ್ ಉನ್ ಅವರಿಗಾಗಿ ಸಿಂಗಪುರದಲ್ಲಿ ಆಯೋಜಿಸಿದ್ದ ಸಮಾವೇಶದ ಸಲುವಾಗಿ ಟ್ರಂಪ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡುವಂತೆ ಟೈಬ್ರಿಂಗ್ 2018ರಲ್ಲಿ ಕೂಡ ನಾಮನಿರ್ದೇಶನ ಸಲ್ಲಿಸಿದ್ದರು.

ಇತರೆ ನೊಬೆಲ್ ಶಾಂತಿ ಪುರಸ್ಕಾರ ನಾಮನಿರ್ದೇಶಿತ ವ್ಯಕ್ತಿಗಳಿಗಿಂತಲೂ ಹೆಚ್ಚು ದೇಶಗಳ ಮಧ್ಯೆ ಶಾಂತಿ ಸ್ಥಾಪಿಸುವ ಪ್ರಯತ್ನದಲ್ಲಿ ಡೊನಾಲ್ಡ್ ಟ್ರಂಪ್ ಕೆಲಸ ಮಾಡುವ ಮೂಲಕ ಅರ್ಹತೆ ಗಳಿಸಿದ್ದಾರೆ ಎಂದು ಟೈಬ್ರಿಂಗ್ ಹೇಳಿದ್ದಾರೆ.
ಭಾರತ-ಪಾಕಿಸ್ತಾನ ನಡುವಿನ ಕಾಶ್ಮೀರ ಗಡಿ ವಿವಾದ, ಉತ್ತರ ಮತ್ತು ದಕ್ಷಿಣ ಕೊರಿಯಾ ಸಂಘರ್ಷದಂತಹ ದೇಶಗಳ ಮಧ್ಯೆ ಇರುವ ಸಂಘರ್ಷಗಳನ್ನು ಪರಿಹರಿಸಲು ಸಂಪರ್ಕ ಮೂಡಿಸುವ ಪ್ರಯತ್ನದಲ್ಲಿ ಡೊನಾಲ್ಡ್ ಟ್ರಂಪ್ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಇಸ್ರೇಲ್-ಯುಎಇ ಒಪ್ಪಂದವನ್ನು ಉಲ್ಲೇಖಿಸಿ ನೊಬೆಲ್ ಸಮಿತಿಗೆ ಪತ್ರ ಬರೆದಿದ್ದಾರೆ.
ಸಮಿತಿಯು ವಾಸ್ತವಗಳನ್ನು ಗಮನಿಸಬೇಕು ಮತ್ತು ವಾಸ್ತವಗಳ ಆಧಾರದಲ್ಲಿ ಅವರನ್ನು ನಿರ್ಧರಿಸಬೇಕೇ ಹೊರತು ಅವರ ವರ್ತನೆಯ ಆಧಾರದ ಮೇಲೆ ಅಲ್ಲ. ಇತ್ತೀಚಿನ ವರ್ಷಗಳಲ್ಲಿ ಶಾಂತಿ ಪುರಸ್ಕಾರಗಳನ್ನು ಪಡೆದಿರುವ ಜನರು ಡೊನಾಲ್ಡ್ ಟ್ರಂಪ್ ಅವರಿಗಿಂತಲೂ ಕಡಿಮೆ ಕೆಲಸ ಮಾಡಿದ್ದಾರೆ ಎಂದಿರುವ ಅವರು, ತಾವು ಡೊನಾಲ್ಡ್ ಟ್ರಂಪ್ ಅಭಿಮಾನಿಯಲ್ಲ ಎಂದು ತಿಳಿಸಿದ್ದಾರೆ.
ಉದಾಹರಣೆಗೆ, ಬರಾಕ್ ಒಬಾಮಾ ಯಾವ ಕೆಲಸವನ್ನೂ ಮಾಡಿರಲಿಲ್ಲ ಎಂದು 2009ರಲ್ಲಿ ಅಮೆರಿಕಾ ಅಧ್ಯಕ್ಷರಾಗಿದ್ದಾಗ ನೊಬೆಲ್ ಶಾಂತಿ ಪುರಸ್ಕಾರ ಪಡೆದಿದ್ದ ಒಬಾಮಾ ಹೆಸರು ಪ್ರಸ್ತಾಪಿಸಿದ್ದಾರೆ. ಅಂತಾರಾಷ್ಟ್ರೀಯ ರಾಜತಾಂತ್ರಿಕತೆ ಮತ್ತು ಜನರ ನಡುವೆ ಸಹಕಾರ ಬಲಪಡಿಸುವಲ್ಲಿ ಬರಾಕ್ ಒಬಾಮಾ ಅಭೂತಪೂರ್ವ ಪ್ರಯತ್ನಗಳನ್ನು ನಡೆಸಿದ್ದಾರೆ ಎಂದು ನೊಬೆಲ್ ಸಮಿತಿ ಹೇಳಿತ್ತು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications