ನೊಬೆಲ್ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ಶಿಫಾರಸು!
ಜೆರುಸಲೆಂ, ಸೆಪ್ಟೆಂಬರ್ 9: ಇಸ್ರೇಲ್ ಮತ್ತು ಯುನೈಟೆಡ್ ಅರಬ್ ಎಮಿರೈಟ್ಸ್ ನಡುವೆ ಒಪ್ಪಂದ ಏರ್ಪಡಲು ನಡೆಸಿದ ಪ್ರಯತ್ನಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪುರಸ್ಕಾರಕ್ಕಾಗಿ ನಾಮನಿರ್ದೇಶನ ಮಾಡಲಾಗಿದೆ.
ನಾರ್ವೆ ಸಂಸತ್ನ ಸದಸ್ಯ ಮತ್ತು ನ್ಯಾಟೋ ಸಂಸದೀಯ ಸಭೆಯ ಅಧ್ಯಕ್ಷ ಕ್ರಿಸ್ಟಿಯನ್ ಟೈಬ್ರಿಂಗ್-ಜೆಡ್ಡೆ ಈ ನಾಮನಿರ್ದೇಶನ ಸಲ್ಲಿಸಿದ್ದಾರೆ ಎಂದು ಫಾಕ್ಸ್ ನ್ಯೂಸ್ ವರದಿ ಮಾಡಿದೆ.
ಕಿಮ್ ಜಾಂಗ್ ಉನ್ ಅವರಿಗಾಗಿ ಸಿಂಗಪುರದಲ್ಲಿ ಆಯೋಜಿಸಿದ್ದ ಸಮಾವೇಶದ ಸಲುವಾಗಿ ಟ್ರಂಪ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡುವಂತೆ ಟೈಬ್ರಿಂಗ್ 2018ರಲ್ಲಿ ಕೂಡ ನಾಮನಿರ್ದೇಶನ ಸಲ್ಲಿಸಿದ್ದರು.

ಇತರೆ ನೊಬೆಲ್ ಶಾಂತಿ ಪುರಸ್ಕಾರ ನಾಮನಿರ್ದೇಶಿತ ವ್ಯಕ್ತಿಗಳಿಗಿಂತಲೂ ಹೆಚ್ಚು ದೇಶಗಳ ಮಧ್ಯೆ ಶಾಂತಿ ಸ್ಥಾಪಿಸುವ ಪ್ರಯತ್ನದಲ್ಲಿ ಡೊನಾಲ್ಡ್ ಟ್ರಂಪ್ ಕೆಲಸ ಮಾಡುವ ಮೂಲಕ ಅರ್ಹತೆ ಗಳಿಸಿದ್ದಾರೆ ಎಂದು ಟೈಬ್ರಿಂಗ್ ಹೇಳಿದ್ದಾರೆ.
ಭಾರತ-ಪಾಕಿಸ್ತಾನ ನಡುವಿನ ಕಾಶ್ಮೀರ ಗಡಿ ವಿವಾದ, ಉತ್ತರ ಮತ್ತು ದಕ್ಷಿಣ ಕೊರಿಯಾ ಸಂಘರ್ಷದಂತಹ ದೇಶಗಳ ಮಧ್ಯೆ ಇರುವ ಸಂಘರ್ಷಗಳನ್ನು ಪರಿಹರಿಸಲು ಸಂಪರ್ಕ ಮೂಡಿಸುವ ಪ್ರಯತ್ನದಲ್ಲಿ ಡೊನಾಲ್ಡ್ ಟ್ರಂಪ್ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಇಸ್ರೇಲ್-ಯುಎಇ ಒಪ್ಪಂದವನ್ನು ಉಲ್ಲೇಖಿಸಿ ನೊಬೆಲ್ ಸಮಿತಿಗೆ ಪತ್ರ ಬರೆದಿದ್ದಾರೆ.
ಸಮಿತಿಯು ವಾಸ್ತವಗಳನ್ನು ಗಮನಿಸಬೇಕು ಮತ್ತು ವಾಸ್ತವಗಳ ಆಧಾರದಲ್ಲಿ ಅವರನ್ನು ನಿರ್ಧರಿಸಬೇಕೇ ಹೊರತು ಅವರ ವರ್ತನೆಯ ಆಧಾರದ ಮೇಲೆ ಅಲ್ಲ. ಇತ್ತೀಚಿನ ವರ್ಷಗಳಲ್ಲಿ ಶಾಂತಿ ಪುರಸ್ಕಾರಗಳನ್ನು ಪಡೆದಿರುವ ಜನರು ಡೊನಾಲ್ಡ್ ಟ್ರಂಪ್ ಅವರಿಗಿಂತಲೂ ಕಡಿಮೆ ಕೆಲಸ ಮಾಡಿದ್ದಾರೆ ಎಂದಿರುವ ಅವರು, ತಾವು ಡೊನಾಲ್ಡ್ ಟ್ರಂಪ್ ಅಭಿಮಾನಿಯಲ್ಲ ಎಂದು ತಿಳಿಸಿದ್ದಾರೆ.
ಉದಾಹರಣೆಗೆ, ಬರಾಕ್ ಒಬಾಮಾ ಯಾವ ಕೆಲಸವನ್ನೂ ಮಾಡಿರಲಿಲ್ಲ ಎಂದು 2009ರಲ್ಲಿ ಅಮೆರಿಕಾ ಅಧ್ಯಕ್ಷರಾಗಿದ್ದಾಗ ನೊಬೆಲ್ ಶಾಂತಿ ಪುರಸ್ಕಾರ ಪಡೆದಿದ್ದ ಒಬಾಮಾ ಹೆಸರು ಪ್ರಸ್ತಾಪಿಸಿದ್ದಾರೆ. ಅಂತಾರಾಷ್ಟ್ರೀಯ ರಾಜತಾಂತ್ರಿಕತೆ ಮತ್ತು ಜನರ ನಡುವೆ ಸಹಕಾರ ಬಲಪಡಿಸುವಲ್ಲಿ ಬರಾಕ್ ಒಬಾಮಾ ಅಭೂತಪೂರ್ವ ಪ್ರಯತ್ನಗಳನ್ನು ನಡೆಸಿದ್ದಾರೆ ಎಂದು ನೊಬೆಲ್ ಸಮಿತಿ ಹೇಳಿತ್ತು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications