Joe Biden: ದೀಪಾವಳಿ ಹಬ್ಬ ಆಚರಿಸಿದ ವಿಶ್ವದ ದೊಡ್ಡಣ್ಣ- ಅಮೆರಿಕದ ಶ್ವೇತಭವನದಲ್ಲಿ ಬೆಳಕಿನ ಹಬ್ಬ
ದೀಪಾವಳಿ ಹಬ್ಬವನ್ನು ದೇಶದೆಲ್ಲೆಡೆ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಹಬ್ಬದ ಆಚರಣೆಗಾಗಿ ವಿದೇಶದಲ್ಲಿ ವಾಸಿಸುವ ಜನ ತಾಯಿನಾಡಿಗೆ ಆಗಮಿಸುತ್ತಾರೆ. ಕತ್ತಲಿನಿಂದ ಬೆಳಕಿನೆಡೆಗಿನ ಈ ಹಬ್ಬ ಭಾರತೀಯರಲ್ಲಿ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ. ಹೀಗಾಗಿ ಭಾರತೀಯ-ಅಮೆರಿಕನ್ನರೊಂದಿಗೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ. ಹಾಗಾದರೆ ಅಮೇರಿಕಾದಲ್ಲಿ ದೀಪಾವಳಿಯನ್ನು ಯಾವಾಗ ಆಚರಿಸಲಾಯಿತು, ಜೋ ಬಿಡನ್ ಹೇಳಿದ್ದೇನು ಎಲ್ಲವನ್ನೂ ತಿಳಿಯೋಣ.
ವಿಶ್ವದ ದೊಡ್ಡಣ್ಣ ಅಮೆರಿಕದ ಶ್ವೇತಭವನದಲ್ಲಿ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸಲಾಗಿದೆ. ಸೋಮವಾರ (ಅಕ್ಟೋಬರ್ 28) ಶ್ವೇತಭವನದಲ್ಲಿ ದೀಪಾವಳಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ 600 ಕ್ಕೂ ಹೆಚ್ಚು ಪ್ರಸಿದ್ಧ ಭಾರತೀಯ-ಅಮೆರಿಕನ್ನರು ಭಾಗವಹಿಸಿದ್ದರು. ಈ ವೇಳೆ ಅಮೆರಿಕ ಅಧ್ಯಕ್ಷ ಜೋ ಬಿಡನ್ ಅತಿಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಶ್ವೇತಭವನದ ದೀಪಾವಳಿ ಕಾರ್ಯಕ್ರಮದಲ್ಲಿ ಅಧ್ಯಕ್ಷ ಜೋ ಬಿಡೆನ್ ಹೇಳಿದ್ದೇನು?
ಭಾರತೀಯ-ಅಮೆರಿಕನ್ ಶಾಸಕರು, ಅಧಿಕಾರಿಗಳು ಮತ್ತು ಕಾರ್ಪೊರೇಟ್ ಕಾರ್ಯನಿರ್ವಾಹಕರನ್ನು ಉದ್ದೇಶಿಸಿ ಮಾತನಾಡಿದ ಯುಎಸ್ ಅಧ್ಯಕ್ಷರು, "ಅಧ್ಯಕ್ಷನಾಗಿ, ಶ್ವೇತಭವನದಲ್ಲಿ ಇದುವರೆಗೆ ಅತಿದೊಡ್ಡ ದೀಪಾವಳಿ ಹಬ್ಬವನ್ನು ಆಯೋಜಿಸಿದ ಗೌರವ ನನಗೆ ಇದೆ. ಇದು ನನಗೆ ಬಹಳಷ್ಟು ಸಂತೋಷ ತಂದಿದೆ'' ಎಂದಿದ್ದಾರೆ. "ಕಮಲಾ ಅವರಿಂದ ಹಿಡಿದು ಡಾ. ಮೂರ್ತಿಯವರವರೆಗೆ ನಿಮ್ಮಲ್ಲಿ ಅನೇಕರು, ಅಮೆರಿಕದ ಆಡಳಿತವನ್ನು ನಿರ್ಮಿಸುವಲ್ಲಿ ತಮ್ಮ ಬದ್ಧತೆಯನ್ನು ಅನುಸರಿಸಿದ್ದಕ್ಕಾಗಿ ನಾನು ಹೆಮ್ಮೆಪಡುತ್ತೇನೆ" ಎಂದು ಅಧ್ಯಕ್ಷ ಬಿಡೆನ್ ಹೇಳಿದರು.
ನವೆಂಬರ್ 5ರ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಭಾರತ ಮೂಲದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಶ್ವೇತ ಭವನದಲ್ಲಿ ನಡೆದ ದೀಪಾವಳಿ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ.
ಅಧ್ಯಕ್ಷ ಬಿಡೆನ್ ಅವರ ಭಾಷಣದ ಮೊದಲು, ಭಾರತೀಯ ಅಮೇರಿಕನ್ ಯುವ ಕಾರ್ಯಕರ್ತೆ ಶ್ರುತಿ ಅಮುಲಾ ಮತ್ತು ಯುಎಸ್ ಸರ್ಜನ್ ಜನರಲ್ ವೈಸ್ ಅಡ್ಮಿರಲ್ ವಿವೇಕ್ ಎಚ್. ಮೂರ್ತಿ, ನಿವೃತ್ತ ನೌಕಾಪಡೆಯ ಅಧಿಕಾರಿ ಮತ್ತು ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸುನೀತಾ ವಿಲಿಯಮ್ಸ್ ಅವರು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ರೆಕಾರ್ಡ್ ಮಾಡಿದ ವೀಡಿಯೊ ಸಂದೇಶವನ್ನು ಕಳುಹಿಸಿದ್ದಾರೆ.
ಕಮಲಾ ಹ್ಯಾರಿಸ್ ಮತ್ತು ಜಿಲ್ ಬಿಡೆನ್ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ. ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತು ಪ್ರಥಮ ಮಹಿಳೆ ಡಾ. ಜಿಲ್ ಬಿಡೆನ್ ಅವರು ಚುನಾವಣಾ ಪ್ರಚಾರದ ಜವಾಬ್ದಾರಿಗಳಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ.
ಅಧ್ಯಕ್ಷ ಬಿಡೆನ್ ಅವರು ಶ್ವೇತಭವನದ ನೀಲಿ ಕೋಣೆಯಲ್ಲಿ ವಿಧ್ಯುಕ್ತ ದೀಪವನ್ನು ಬೆಳಗಿಸಿ ದಕ್ಷಿಣ ಏಷ್ಯಾದ ಅಮೆರಿಕನ್ ಸಮುದಾಯಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications