ಪ್ರಧಾನಿ ಮೋದಿ ತಾಯಿ ನಿಧನ: ಸಂತಾಪ ಸೂಚಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಜಾಗತಿಕ ನಾಯಕರು
ವಾಷಿಂಗ್ಟನ್, ಡಿಸೆಂಬರ್ 31: ನಿನ್ನೆ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರು ನಿಧನರಾದರು. ಇದಕ್ಕೆ ಜಗತ್ತಿನ ಗಣ್ಯರು ಕಂಬನಿ ಮಿಡಿದಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅಮೆರಿಕದ ಅಧ್ಯಕ್ಷ ಜೋ ಬೈಡನ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೃದಯಪೂರ್ವಕ ಸಂತಾಪ ಸೂಚಿಸಿದ್ದಾರೆ.
ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದ ಪ್ರಧಾನಿ ತಾಯಿ ಹೀರಾಬೆನ್ ಮೋದಿ ಅವರ ಆರೋಗ್ಯ ಹದಗೆಟ್ಟಿತ್ತು. ಅವರು ಶುಕ್ರವಾರ ಮುಂಜಾನೆ ನಿಧನರಾದರು.

'ತಾಯಿಯನ್ನು ಕಳೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಿಲ್(ಬೈಡನ್ ಪತ್ನಿ) ಮತ್ತು ನಾನು ಹೃತ್ಪೂರ್ವಕ ಸಂತಾಪವನ್ನು ಸೂಚಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮ ಪ್ರಾರ್ಥನೆಗಳು ಪ್ರಧಾನಿ ಮತ್ತು ಅವರ ಕುಟುಂಬದೊಂದಿಗೆ ಇವೆ,' ಎಂದು ಬೈಡೆನ್ ಅವರು ಬರೆದುಕೊಂಡಿದ್ದಾರೆ.
Jill and I send our deepest and heartfelt condolences to Prime Minister @narendramodi on the loss of his mother, Heeraben Modi.
— President Biden (@POTUS) December 30, 2022
Our prayers are with the Prime Minister and his family at this difficult time.
ಗುಜರಾತ್ನ ಅಹಮದಾಬಾದ್ನಲ್ಲಿ ಪ್ರಧಾನಿ ಮೋದಿ ಅವರ ತಾಯಿ ನಿಧನರಾದ ನಂತರ ಹಲವಾರು ಜಾಗತಿಕ ನಾಯಕರು ಸಹ ಸಂತಾಪ ಸೂಚಿಸಿದ್ದಾರೆ.
'ತಾಯಿಯನ್ನು ಕಳೆದುಕೊಳ್ಳುವುದಕ್ಕಿಂತ ದೊಡ್ಡ ನಷ್ಟವಿಲ್ಲ' ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಟ್ವೀಟ್ ಮಾಡಿದ್ದಾರೆ.
'ತಾಯಿಯ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನ ಸಂತಾಪ" ಎಂದು ಸೇರಿಸಿದ್ದಾರೆ.

'ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ನಿಧನರಾದ ಸುದ್ದಿ ಕೇಳಿ ದುಃಖವಾಯಿತು. ಈ ದುಃಖದ ಸಮಯದಲ್ಲಿ ನನ್ನ ಪ್ರಾರ್ಥನೆಗಳು ಪ್ರಧಾನಿ ಮೋದಿ ಮತ್ತು ಅವರ ಕುಟುಂಬದೊಂದಿಗೆ ಇವೆ' ಎಂದು ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಟ್ವೀಟ್ ಮಾಡಿದ್ದಾರೆ.
ಜಪಾನಿನ ಪ್ರಧಾನಿ ಫ್ಯೂಮಿಯೊ ಕಿಶಿಡಾ ತಮ್ಮ ಸಂತಾಪವನ್ನು ಸೂಚಿಸಿದ್ದಾರೆ.
'ಪ್ರಧಾನಿ ಮೋದಿ, ನಿಮ್ಮ ಪ್ರೀತಿಯ ತಾಯಿಯ ನಿಧನಕ್ಕಾಗಿ ನಾನು ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಆಕೆಯ ಆತ್ಮಕ್ಕೆ ಶಾಂತಿ ಸಿಗಲಿ' ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಶುಕ್ರವಾರ ಗುಜರಾತ್ನ ಗಾಂಧಿನಗರದಲ್ಲಿ ತಮ್ಮ ತಾಯಿಯ ಅಂತಿಮ ವಿಧಿಗಳನ್ನು ನೆರವೇರಿಸಿದರು. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಮಾಜಿ ಸಿಎಂ ವಿಜಯ್ ರೂಪಾನಿ ಮತ್ತು ಗುಜರಾತ್ ಕ್ಯಾಬಿನೆಟ್ ಸಚಿವರು ಸಹ ಅವರೊಂದಿಗೆ ಉಪಸ್ಥಿತರಿದ್ದರು.
ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್ ಅವರಿಗೆ ನೂರು ವರ್ಷ ವಯಸ್ಸಾಗಿತ್ತು. ಅವರು ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿದ್ದರು. ಹಿಂದೂ ಸಂಪ್ರದಾಯದ ವಿಧಿವಿಧಾನಗಳಂತೆ ಅವರಿಗೆ ಅಗ್ನಿ ಸ್ಪರ್ಷ ಮಾಡಲಾಯಿತು. ಗುಜರಾತ್ನ ಗಾಂಧಿನಗರದಲ್ಲಿ ಅವರ ಅಂತ್ಯ ಸಂಸ್ಕಾರ ನೇರವೇರಿತು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications