ಅಮೆರಿಕದಿಂದ ಭಾರತಕ್ಕೆ 200 ಅತ್ಯಮೂಲ್ಯ ಕಲಾಕೃತಿ ವಾಪಸ್
ವಾಷಿಂಗ್ಟನ್, ಜೂನ್ 07: ಭಾರತಕ್ಕೆ ಸೇರಿದ 200ಕ್ಕೂ ಅತ್ಯಮೂಲ್ಯ ಕಲಾಕೃತಿಗಳನ್ನು ಅಮೆರಿಕ ಹಿಂತಿರುಗಿಸಿದೆ. ಪ್ರಧಾನಿ ಮೋದಿ ಅವರು ಉಪಸ್ಥಿತರಿದ್ದ ಸಮಾರಂಭದಲ್ಲಿ ಸುಮಾರು 67 ಕೋಟಿ ರು ಗೂ ಅಧಿಕ ಮೌಲ್ಯದ ಕಲಾಕೃತಿಗಳನ್ನು ಹಸ್ತಾಂತರಿಸಲಾಯಿತು.
ವಾಷಿಂಗ್ಟನ್ನ ಬ್ಲೇರ್ ಹೌಸ್ನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೊದಿ ಅವರಿಗೆ ಕಲಾಕೃತಿಗಳನ್ನು ಹಸ್ತಾಂತರಿಸಲಾಯಿತು.
ಈ ಕಲಾಕೃತಿಗಳನ್ನು ಹಣಕ್ಕಾಗಿ ಮಾರಾಟ ಮಾಡಿರಬಹುದು. ಆದರೆ, ಇವು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಒಂದು ಭಾಗ. ಇವುಗಳನ್ನು ಭಾರತಕ್ಕೆ ಹಸ್ತಾಂತರಿರುವ ಅಮೆರಿಕಕ್ಕೆ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ಪ್ರಧಾನಿ ಮೋದಿ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಅಮೆರಿಕ ಹಿಂದಿರುಗಿಸಿರುವ ಕಲಾಕೃತಿಗಳಲ್ಲಿ ಹಲವು ಸುಮಾರು 2000 ವರ್ಷಗಳಷ್ಟು ಹಳೆಯದಾಗಿವೆ. ಚೋಳರ ಕಾಲದ ಕವಿ ಸಂತ ಮನಿಕ್ಕವಿಚವಕರ್ ಪ್ರತಿಮೆಯನ್ನು ಚೆನ್ನೈನ ಶಿವನ್ ದೇವಾಲಯದಿಂದ ಕಳವು ಮಾಡಲಾಗಿತ್ತು. ಸುಮಾರು 1000 ವರ್ಷ ಹಳೆಯದಾದ ಗಣೇಶನ ಕಂಚಿನ ವಿಗ್ರಹ ಸೇರಿದಂತೆ ಹಲವು ಪುರಾತನ ಕಲ್ಲಿನ, ಕಂಚಿನ ಮತ್ತು ಟೆರ್ರಾಕೋಟಾದ ವಿಗ್ರಹ ಮತ್ತು ಕಲಾಕೃತಿಗಳನ್ನು ಅಮೆರಿಕ ಭಾರತಕ್ಕೆ ಹಸ್ತಾಂತರಿಸಿದೆ.
ಕಲಾಕೃತಿಗಳಿಗೆ ನೂರಾರು ಡಾಲರ್ ಮೌಲ್ಯ (ಯುಎಸ್ ಡಿ 100ಮಿಲಿಯನ್) ನಿಗದಿ ಪಡಿಸಬಹುದಾದರೂ ಅವುಗಳ ಪಾರಂಪರಿಕ, ಸಾಂಸ್ಕೃತಿಕ ಮೌಲ್ಯಗಳಿಗೆ ಬೆಲೆ ಕಟ್ಟಲಾಗದು ಎಂದು ಹೋಮ್ ಲ್ಯಾಂಡ್ ಕಾರ್ಯದರ್ಶಿ ಜೆಹ್ ಜಾನ್ಸನ್ ಅವರು ಅಭಿಪ್ರಾಯಪಟ್ಟಿದ್ದಾರೆ.
ಅಮೆರಿಕದಿಂದ ಭಾರತಕ್ಕೆ 200 ಅತ್ಯಮೂಲ್ಯ ಕಲಾಕೃತಿ ವಾಪಸ್
ಹುತಾತ್ಮರಿಗೆ ನಮನ ಸಲ್ಲಿಸಿದ ಮೋದಿ: ಅನಾಮಿಕ ಯೋಧರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ಮೋದಿ ಅವರು ನಂತರ ಭಾರತ ಮೂಲದ ಗಗನಯಾತ್ರಿ ಕಲ್ಪನಾ ಚಾವ್ಲಾ ಅವರ ಸಮಾಧಿ ಬಳಿ ತೆರಳಿ ನಮನ ಸಲ್ಲಿಸಿದರು.ಗಗನಯಾತ್ರಿ ಸುನಿತಾ ವಿಲಿಯಮ್ಸ್ ಹಾಗೂ ಅವರ ತಂದೆ ದೀಪಕ್ ಪಾಂಡ್ಯ ಮತ್ತು ನಾಸಾ ಅಧಿಕಾರಿಗಳನ್ನು ಮೋದಿ ಅವರು ಭೇಟಿ ಮಾಡಿ ಮಾತನಾಡಿದರು.
-
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ












Click it and Unblock the Notifications