ಅಮೆರಿಕದಿಂದ ಭಾರತಕ್ಕೆ 200 ಅತ್ಯಮೂಲ್ಯ ಕಲಾಕೃತಿ ವಾಪಸ್
ವಾಷಿಂಗ್ಟನ್, ಜೂನ್ 07: ಭಾರತಕ್ಕೆ ಸೇರಿದ 200ಕ್ಕೂ ಅತ್ಯಮೂಲ್ಯ ಕಲಾಕೃತಿಗಳನ್ನು ಅಮೆರಿಕ ಹಿಂತಿರುಗಿಸಿದೆ. ಪ್ರಧಾನಿ ಮೋದಿ ಅವರು ಉಪಸ್ಥಿತರಿದ್ದ ಸಮಾರಂಭದಲ್ಲಿ ಸುಮಾರು 67 ಕೋಟಿ ರು ಗೂ ಅಧಿಕ ಮೌಲ್ಯದ ಕಲಾಕೃತಿಗಳನ್ನು ಹಸ್ತಾಂತರಿಸಲಾಯಿತು.
ವಾಷಿಂಗ್ಟನ್ನ ಬ್ಲೇರ್ ಹೌಸ್ನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೊದಿ ಅವರಿಗೆ ಕಲಾಕೃತಿಗಳನ್ನು ಹಸ್ತಾಂತರಿಸಲಾಯಿತು.
ಈ ಕಲಾಕೃತಿಗಳನ್ನು ಹಣಕ್ಕಾಗಿ ಮಾರಾಟ ಮಾಡಿರಬಹುದು. ಆದರೆ, ಇವು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಒಂದು ಭಾಗ. ಇವುಗಳನ್ನು ಭಾರತಕ್ಕೆ ಹಸ್ತಾಂತರಿರುವ ಅಮೆರಿಕಕ್ಕೆ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ಪ್ರಧಾನಿ ಮೋದಿ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಅಮೆರಿಕ ಹಿಂದಿರುಗಿಸಿರುವ ಕಲಾಕೃತಿಗಳಲ್ಲಿ ಹಲವು ಸುಮಾರು 2000 ವರ್ಷಗಳಷ್ಟು ಹಳೆಯದಾಗಿವೆ. ಚೋಳರ ಕಾಲದ ಕವಿ ಸಂತ ಮನಿಕ್ಕವಿಚವಕರ್ ಪ್ರತಿಮೆಯನ್ನು ಚೆನ್ನೈನ ಶಿವನ್ ದೇವಾಲಯದಿಂದ ಕಳವು ಮಾಡಲಾಗಿತ್ತು. ಸುಮಾರು 1000 ವರ್ಷ ಹಳೆಯದಾದ ಗಣೇಶನ ಕಂಚಿನ ವಿಗ್ರಹ ಸೇರಿದಂತೆ ಹಲವು ಪುರಾತನ ಕಲ್ಲಿನ, ಕಂಚಿನ ಮತ್ತು ಟೆರ್ರಾಕೋಟಾದ ವಿಗ್ರಹ ಮತ್ತು ಕಲಾಕೃತಿಗಳನ್ನು ಅಮೆರಿಕ ಭಾರತಕ್ಕೆ ಹಸ್ತಾಂತರಿಸಿದೆ.
ಕಲಾಕೃತಿಗಳಿಗೆ ನೂರಾರು ಡಾಲರ್ ಮೌಲ್ಯ (ಯುಎಸ್ ಡಿ 100ಮಿಲಿಯನ್) ನಿಗದಿ ಪಡಿಸಬಹುದಾದರೂ ಅವುಗಳ ಪಾರಂಪರಿಕ, ಸಾಂಸ್ಕೃತಿಕ ಮೌಲ್ಯಗಳಿಗೆ ಬೆಲೆ ಕಟ್ಟಲಾಗದು ಎಂದು ಹೋಮ್ ಲ್ಯಾಂಡ್ ಕಾರ್ಯದರ್ಶಿ ಜೆಹ್ ಜಾನ್ಸನ್ ಅವರು ಅಭಿಪ್ರಾಯಪಟ್ಟಿದ್ದಾರೆ.
ಅಮೆರಿಕದಿಂದ ಭಾರತಕ್ಕೆ 200 ಅತ್ಯಮೂಲ್ಯ ಕಲಾಕೃತಿ ವಾಪಸ್
ಹುತಾತ್ಮರಿಗೆ ನಮನ ಸಲ್ಲಿಸಿದ ಮೋದಿ: ಅನಾಮಿಕ ಯೋಧರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ ಮೋದಿ ಅವರು ನಂತರ ಭಾರತ ಮೂಲದ ಗಗನಯಾತ್ರಿ ಕಲ್ಪನಾ ಚಾವ್ಲಾ ಅವರ ಸಮಾಧಿ ಬಳಿ ತೆರಳಿ ನಮನ ಸಲ್ಲಿಸಿದರು.ಗಗನಯಾತ್ರಿ ಸುನಿತಾ ವಿಲಿಯಮ್ಸ್ ಹಾಗೂ ಅವರ ತಂದೆ ದೀಪಕ್ ಪಾಂಡ್ಯ ಮತ್ತು ನಾಸಾ ಅಧಿಕಾರಿಗಳನ್ನು ಮೋದಿ ಅವರು ಭೇಟಿ ಮಾಡಿ ಮಾತನಾಡಿದರು.
-
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications