USA Military: ಅಮೆರಿಕ ಸೇನೆ ಕುರಿತು ಮಹತ್ವದ ಪ್ರತಿಕ್ರಿಯೆ ನೀಡಿದ ಇರಾನ್, ಯುದ್ಧಕ್ಕೆ ಎರಡೂ ದೇಶಗಳ ಸಿದ್ಧತೆ ಆತಂಕ
ಅಮೆರಿಕ ಇದೀಗ ಇರಾನ್ ವಿರುದ್ಧ ಯಾವುದೇ ರೀತಿಯ ಕ್ರಮಕ್ಕೂ ಸಿದ್ಧ ಎಂದು ಗುಡುಗುತ್ತಿದೆ, ಈ ಸಮಯದಲ್ಲೇ ಇರಾನ್ ಕೂಡ ಎಲ್ಲವನ್ನೂ ಎದುರಿಸಲು ತಾನು ಕೂಡ ಸಿದ್ಧ ಎನ್ನುತ್ತಿದೆ. ಇಬ್ಬರೂ ಹೀಗೆಲ್ಲಾ ತಿಕ್ಕಾಟ ನಡೆಸುವಾಗ ಮಧ್ಯಪ್ರಾಚ್ಯ ಭಾಗದಲ್ಲಿ ಸೂಕ್ಷ್ಮ ವಾತಾವರಣ ನಿರ್ಮಾಣ ಆಗುತ್ತಿದೆ. ಯಾವ ಕ್ಷಣದಲ್ಲಿ ಯುದ್ಧ ಜೋರಾಗುತ್ತದೋ? ಎಂಬ ಪ್ರಶ್ನೆಯಲ್ಲೇ ಜಗತ್ತು ಮುಳುಗಿದೆ. ಪ್ರಮುಖವಾಗಿ ಇಲ್ಲಿ ಕಾಡುತ್ತಿರುವ ಪ್ರಶ್ನೆ ಏನೆಂದರೆ ಈ ಯುದ್ಧದಲ್ಲಿ ಅಕಸ್ಮಾತ್ ಪರಮಾಣು ಅಸ್ತ್ರಗಳು ಬಳಕೆಯಾದರೆ ಅದು ಭವಿಷ್ಯವನ್ನೇ ನಾಶ ಮಾಡುವ ಸಾಧ್ಯತೆ ಇದೆ. ಹೀಗೆಲ್ಲಾ ಇದ್ದಾಗಲೇ ದಿಢೀರ್ ಇರಾನ್ ಇದೀಗ ಪ್ರತಿಕ್ರಿಯೆ ನೀಡಿದ್ದು, ಅಮೆರಿಕ ಸೇನೆ ನಿಯೋಜನೆ ಮಾಡಿರುವ ಬಗ್ಗೆ ರಿಯಾಕ್ಷನ್ ಕೊಟ್ಟಿದೆ.
ಇರಾನ್ ಜಲಗಡಿ ಸಮೀಪದಲ್ಲೇ ಅಮೆರಿಕ ಸೇನೆಯು ಕಾಯುತ್ತಾ ಕುಳಿತಿದೆ, ಯಾವುದೇ ಸಂದರ್ಭದಲ್ಲಿ ನುಗ್ಗಿ ಇರಾನ್ ವಿರುದ್ಧ ದಾಳಿ ಮಾಡಲು ಅಮೆರಿಕದ ಸೈನಿಕರು ಸನ್ನದ್ಧವಾಗಿದ್ದಾರೆ. ಅಲ್ಲದೆ ಯುದ್ಧ ಎದುರಿಸಲು ಬೇಕಾದ ಎಲ್ಲಾ ರೀತಿಯ ಕ್ರಮಗಳನ್ನು ಅಮೆರಿಕ ಈಗಾಗಲೇ ತೆಗೆದುಕೊಂಡಿದೆ. ಹೀಗಾಗಿ ಅಮೆರಿಕ ಮತ್ತು ಇರಾನ್ ನಡುವೆ ಪೂರ್ಣ ಪ್ರಮಾಣದ ಯುದ್ಧ ನಡೆದರೂ ಅನುಮಾನ ಇಲ್ಲ ಎಂಬ ಚರ್ಚೆ ನಡೆಯುತ್ತಿದೆ. ಹೀಗಿದ್ದಾಗ ಇರಾನ್ ಮತ್ತೊಮ್ಮೆ ಅಮೆರಿಕದ ಮಾತುಗಳಿಗೆ ಪ್ರತಿಕ್ರಿಯೆ ನೀಡಿದ್ದು, ತಾನು ಕೂಡ ಯುದ್ಧಕ್ಕೆ ಸಿದ್ಧ ಎನ್ನುವ ಸಂದೇಶ ಕೊಟ್ಟಿದೆ. ಆದರೆ ಈ ಬೆಳವಣಿಗೆ ಮತ್ತಷ್ಟು ಭಯ ಹುಟ್ಟಿಸುತ್ತಿದೆ.

-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications