ಕತಾರಿನಿಂದ ಮಾತೃಭೂಮಿಗೆ ಮರಳುತ್ತಿರುವ ಕನ್ನಡಿಗರು
22 ಮೇ 2020 ಕನ್ನಡಿಗರ ಇತಿಹಾಸದಲ್ಲಿ ನೆನಪಿನ್ನಲ್ಲಿಡಬೇಕಾದ ದಿನ, ಪ್ರತ್ಯೇಕವಾಗಿ 185 ಜನ ಪ್ರಯಾಣಿಕರನ್ನು ಹೊತ್ತು ಆರಲಿರುವ ದೋಹಾ - ಬೆಂಗಳೂರು ನೇರ ವಿಮಾನ ಯಾನಕ್ಕೆ ಕಾರಣಕರ್ತರಾದ ಹಾಗೂ ಪ್ರಯಾಣಿಕರೆಲ್ಲರೂ ನೆನಪಿನಲ್ಲಿಡಬೇಕಾದ ಸುದಿನ.
Recommended Video
ಕೊರೊನಾವೈರಸ್ 19 ಮಹಾಮಾರಿಯಿಂದ ತತ್ತರಿಸಿ ಹೋಗಿ, ನಿರಾಶ್ರಿತ ಮತ್ತು ತುರ್ತು ಪರಿಸ್ಥಿತಿಯಲ್ಲಿರುವ ಕತಾರಿನ ಕನ್ನಡಿಗರಿಗೆ ಅಭಯ ಹಸ್ತ ನೀಡಿದ ಭಾರತ ಹಾಗು ಕರ್ನಾಟಕ ಸರಕಾರವು ಸಕಲ ಪ್ರಯತ್ನವನ್ನು ಮಾಡಿ,''ವಂದೇ ಭಾರತ ನಿಯೋಗ"ದಡಿಯಲ್ಲಿ ಬೆಂಗಳೂರಿಗೆ ಮೊದಲ ವಿಮಾನಯಾನವನ್ನು ಹಾರಲು ವ್ಯವಸ್ಥೆ ಮಾಡಿರುವುದು ಸಂತಸದ ವಿಚಾರ.
ಈ ವಿಮಾನದಲ್ಲಿ ಕರ್ನಾಟಕ ಮೂಲದ, ಕತಾರಿನಲ್ಲಿ ನೆಲೆಸಿದ್ದ ಕನ್ನಡಿಗರು, ಅದರಲ್ಲೂ ಗರ್ಭಿಣಿಯರು, ವಯೋವೃದ್ಧರು, ಅನಾರೊಗ್ಯದಿಂದ ಬಳಲುತ್ತಿರುವವರು ಹಾಗೂ ಕೆಲಸ ಕಳೆದುಕೊಂಡು ವಾಸ್ತವ್ಯ ಹೂಡಲಾಗದೆ ಬಳಲುತ್ತಿರುವವರನ್ನು ಮಾತೃಭೂಮಿಗೆ ಹಿಂತಿರುಗಲು ವಿಮಾನದ ವ್ಯವಸ್ಥೆಯನ್ನು ಮಾಡಲಾಗಿದೆ.

ದೋಹಾದಿಂದ ಬೆಂಗಳೂರಿಗೆ ಏರ್ಪಡಿಸಿರುವ ವಿಮಾನಕ್ಕೆ ಕಾರಣಕರ್ತರಾದ ಎಲ್ಲಾ ಮಂತ್ರಿಗಳು, ಸಚಿವರು ಹಾಗು ಸ್ವಯಂ ಸೇವಾಕರ್ತರಿಗೂ ವಂದನೆಗಳು.

ಕತಾರ್ನಿಂದ ಸುಮಾರು 1,300 ಜನರು ಊರಿಗೆ ಬರಲು ನೋಂದಣಿ ಮಾಡಿಸಿಕೊಂಡಿದ್ದಾರೆ. ಅವರಲ್ಲಿ ಕರ್ನಾಟಕ ಕರಾವಳಿಯವರೇ ಹೆಚ್ಚು. ಬೆಂಗಳೂರು, ಮೈಸೂರು, ಮಂಡ್ಯ ಮೊದಲಾದೆಡೆ ಹೋಗುವವರು ಬೆಂಗಳೂರಿನ ಮೂಲಕ ಹೋಗುವವರಾದರೆ, ಅತ್ತ ಕಾಸರಗೋಡು, ಇತ್ತ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಭಟ್ಕಳ, ಬೈಂದೂರಿನವರೆಗೆ ಹೋಗುವವರು ಮಂಗಳೂರನ್ನು ಆಶ್ರಯಿಸಬೇಕಾಗಿದೆ.

ಈಗ ಬೆಂಗಳೂರಿಗೆ ವಿಮಾನ ಯಾನಕ್ಕೆ ತಾತ್ವಿಕ ಸಮ್ಮತಿಯಾಗಿದ್ದರೂ ಮಂಗಳೂರಿಗೆ ಆಗಿಲ್ಲ ಎನ್ನುವ ಕೊರಗು ಕತಾರ್ನಲ್ಲಿರುವ ಕರಾವಳಿ ಭಾಗದವರಿಗೆ ಕತಾರ್ ನಲ್ಲಿರುವ ಕನ್ನಡಿಗರನ್ನು ಆದಷ್ಟು ಬೇಗ ಭಾರತಕ್ಕೆ ಕರೆತರಲು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಕರ್ನಾಟಕ ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿದೆ. ಮಂಗಳೂರಿಗೆ ಕತಾರ್ ನಿಂದ ನೇರ ವಿಮಾನ ವ್ಯವಸ್ಥೆ ಹೆಚ್ಚು ಸಂಕಷ್ಟದಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಜನತೆಗೆ ಅಗತ್ಯವಿದೆ.
ಹೀಗೆ ಮುಂದುವರೆದು ಮಂಗಳೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಿಂತಿರುಗಬೇಕೆಂದಿರುವ ಕನ್ನಡಿಗರಿಗೆ ವಿಮಾನ ಸೇವೆಯನ್ನು ವ್ಯವಸ್ಥೆ ಮಾಡಲು ಈ ಮೂಲಕ ಬಿನ್ನವಿಸಲಾಗುತ್ತಿದೆ- ಸುಬ್ರಮಣ್ಯ ಹೆಬ್ಬಾಗಿಲು, ಕರ್ನಾಟಕ ಪ್ರತಿನಿಧಿ, ಭಾರತೀಯ ಸಮುದಾಯ ಹಿತೈಷಿ ವೇದಿಕೆ, ಕತಾರ್.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications