ವೆನಿಜುವೆಲಾದಲ್ಲಿ ಮತದಾನದ ವೇಳೆ ಹಿಂಸಾಚಾರಕ್ಕೆ 10 ಬಲಿ
ವೆನಿಜುವೆಲಾ, ಜುಲೈ 31: ಆರ್ಥಿಕ ದಿವಾಳಿಯ ಅಂಚಿಗೆ ಬಂದು ನಿಂತಿರುವ ವೆನಿಜುವೆಲಾದಲ್ಲಿ ಭಾನುವಾರ ಸಂಸತ್ತಿಗೆ ನಡೆದ ಮತದಾನ ಹಿಂಸೆಯಲ್ಲಿ ಕೊನೆಗೊಂಡಿದೆ. ಮತದಾನ ಮುಗಿಯುವ ವೇಳೆ ಕನಿಷ್ಠ ಹತ್ತು ಜನ ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಇಡೀ ದೇಶವೇ ಹಿಂಸಾಚಾರಕ್ಕೆ ನಲುಗಿ ಹೋಗಿದೆ.
ಒಂದು ಕಾಲದ ತೈಲ ವ್ಯಾಪಾರಿ ಶ್ರೀಮಂತ ದೇಶ ವೆನಿಜುವೆಲಾ ಅರಬ್ ಬಿಕ್ಕಟ್ಟಿನ ನಂತರ ತೈಲ ಬೆಲೆಯಲ್ಲಾದ ಇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿದೆ. ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ನಿರುದ್ಯೋಗ, ಆರ್ಥಿಕ ಹಿಂಜರಿತದಿಂದ ಜನ ತತ್ತರಿಸಿದ್ದಾರೆ.

ದೇಶದ ಜನರು ಹಲವು ತಿಂಗಳ ಹಿಂದಿನಿಂದಲೂ ಹಾಲಿ ಅಧ್ಯಕ್ಷ ನಿಕೋಲಸ್ ಮದುರೋ ವಿರುದ್ಧ ಭಾರಿ ಪ್ರತಿಭಟನೆಗಳನ್ನು ನಡೆಸಿದ್ದರು. ಹಲವು ಸಂದರ್ಭಗಳಲ್ಲಿ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದು 120ಕ್ಕೂ ಹೆಚ್ಚು ಜನರು ಅಸು ನೀಗಿದ್ದರು.
ಈ ಎಲ್ಲಾ ಪ್ರತಿಭಟನೆಗಳ ನಂತರ ಇದೀಗ ವೆನಿಜುವೆಲಾದಲ್ಲಿ ಭಾನುವಾರ ಐತಿಹಾಸಿಕ ಚುನಾವಣೆ ನಡೆದಿತ್ತು. ಆದರೆ, ಈ ಚುನಾವಣೆಯನ್ನು ಬಹಿಷ್ಕರಿಸಿ ದೇಶದ ಬಲಪಂಥೀಯ ಸಂಘಟನೆಗಳು ಕರೆ ನೀಡಿದ್ದವು. ಈ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಕನಿಷ್ಠ ಹತ್ತು ಜನರು ಬಲಿಯಾಗಿದ್ದಾರೆ. ಇವರಲ್ಲಿ ಚುನಾವಣಾ ಅಭ್ಯರ್ಥಿಗಳೂ ಸೇರಿದ್ದಾರೆ.
'ಇದೊಂದು ನಾಟಕದ ಚುನಾವಣೆ' ಎಂಬುದು ಅಲ್ಲಿನ ವಿರೋಧ ಪಕ್ಷಗಳ ಕೂಗು. "ಸರ್ವಾಧಿಕಾರಿಯಂತೆ ಮೆರೆಯುತ್ತಿರುವ ಮದುರೋ ಅಧಿಕಾರದಿಂದ ಕೆಳಕ್ಕಿಳಿಯಬೇಕು. ಅಲ್ಲಿಯವರೆಗೆ ಯಾವ ಚುನಾವಣೆಗಳಿಗೂ ಬೆಲೆ ಇಲ್ಲ," ಎಂಬುದು ಅವುಗಳ ವಾದ.
ಹೀಗಿದ್ದೂ ಮದುರೋ ಅಧಿಕಾರದಿಂದ ಕೆಳಕ್ಕಿಳಿಯಲು ಒಪ್ಪುತ್ತಿಲ್ಲ. ಪರಿಣಾಮ ದೇಶದ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿದ್ದು ದೇಶ ಅರಾಜಕತೆಯತ್ತ ಮುಖ ಮಾಡಿದೆ. ಇರಾಕ್, ಸಿರಿಯಾದಂತೆ ಇಲ್ಲೂ ದೇಶದ ಮೇಲಿನ ನಿಯಂತ್ರಣ ಸರಕಾರದ ಕೈಯಿಂದ ನಿಧಾನವಾಗಿ ತಪ್ಪಿ ಹೋಗುತ್ತಿದ್ದು ಎಚ್ಚರಿಕೆಯ ಗಂಟೆ ಬಾರಿಸುತ್ತಿದೆ.
ಇಂದು ವೆನಿಜುವೆಲಾ ಸಂಸತ್ತಿಗೆ ನಡೆದ ಚುನಾವಣೆಯ ಫಲಿತಾಂಶ ಹೊರ ಬೀಳುವ ಸಾಧ್ಯತೆ ಇದೆ. ಈ ವೇಳೆ ಮತ್ತಷ್ಟು ಹಿಂಸೆ ಭುಗಿಲೆದ್ದರೆ ಆಶ್ಚರ್ಯವಿಲ್ಲ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications