ವಿಡಿಯೋ: ಗಣೇಶ ಮೂರ್ತಿ ಒಡೆದು ಹಾಕಿದ ಮಹಿಳೆ ಬಂಧನ
ಮನಾಮ, ಆಗಸ್ಟ್.17: ಹಿಂದೂ ಜನರ ಭಾವನೆಗೆ ಧಕ್ಕು ಉಂಟು ಮಾಡಿರುವಂತಾ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಮಧ್ಯಪ್ರಾಚ್ಯ ದೇಶವಾಗಿರುವ ಬಹ್ರೇನ್ ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ವಿಡಿಯೋದಲ್ಲಿ ಬುರ್ಖಾ ಧರಿಸಿರುವ ಇಬ್ಬರು ಮಹಿಳೆಯರು ಗಣೇಶ ಮೂರ್ತಿಗಳನ್ನು ಸೂಪರ್ ಮಾರ್ಕೇಟ್ ನಲ್ಲಿ ಇರಿಸಿದ್ದಕ್ಕೆ ಸಿಬ್ಬಂದಿ ಜೊತೆಗೆ ವಾಗ್ವಾದ ನಡೆಸಿದ್ದಾರೆ. ಸಿಟ್ಟಿಗೆದ್ದ ಮಹಿಳೆಯರು ಸೂಪರ್ ಮಾರ್ಕೇಟ್ ನಲ್ಲಿ ಇರಿಸಿದ್ದ ಗಣೇಶ ಮೂರ್ತಿಗಳನ್ನೆಲ್ಲ ಒಡೆದು ಹಾಕಿರುವ ದೃಶ್ಯವು ವಿಡಿಯೋದಲ್ಲಿ ಸೆರೆಯಾಗಿದೆ.
ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಹಿನ್ನೆಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಕೆಲವು ಗಂಟೆಗಳಲ್ಲೇ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. 54 ವರ್ಷದ ಮಹಿಳೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
This video is from #Bahrain
— Amit (@amy_official7) August 16, 2020
"Lady destroying the idols of Lord Ganesha "
No religion teaches to disrespect someone's faith and belief's. #Bahrain pic.twitter.com/IGrtS1k12E

ಗಣೇಶ ಚತುರ್ಥಿ ಆಚರಣೆಗಾಗಿ ಮೂರ್ತಿ ಮಾರಾಟ:
ಬಹ್ರೇನ್ ರಾಜಧಾನಿ ಮನಾಮದ ಪಕ್ಕದಲ್ಲೇ ಇರುವ ಜುಫೈರ್ ನಲ್ಲಿ ಈ ಘಟನೆ ನಡೆದಿದೆ. ಗಣೇಶ ಚತುರ್ಥಿ ಹಬ್ಬ ಸನ್ನಿಹಿತದಲ್ಲಿರುವ ಹಿನ್ನೆಲೆ ಮೂರ್ತಿಗಳನ್ನು ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ಸೂಪರ್ ಮಾರ್ಕೇಟ್ ನಲ್ಲೂ ಗಣೇಶ ಮೂರ್ತಿಗಳನ್ನು ಮಾರಾಟಕ್ಕೆ ಇರಿಸಲಾಗಿತ್ತು. ಈ ವೇಳೆ ಸೂಪರ್ ಮಾರ್ಕೇಟ್ ಗೆ ತೆರಳಿದ್ದ ಇಬ್ಬರು ಮಹಿಳೆಯರು ಗಣೇಶ ಮೂರ್ತಿಗಳನ್ನು ಅಲ್ಲಿ ಇರಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಂತರದಲ್ಲಿ ಇಬ್ಬರು ಮಹಿಳೆಯರ ಪೈಕಿ ಒಬ್ಬರು ಗಣೇಶ ಮೂರ್ತಿಗಳನ್ನು ಕೆಳಗೆ ಎಸೆದು ಒಡೆದು ಹಾಕಿದ್ದಾರೆ. ಮತ್ತೊಬ್ಬ ಮಹಿಳೆಯು ಈ ಘಟನೆಯ ವಿಡಿಯೋ ಮಾಡಿಕೊಂಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications