ತೂಫಾನ್ ಅಬ್ಬರದಿಂದ ಭೂ ಕುಸಿತ: ಕನಿಷ್ಠ 35 ಸಾವು
ಹನೊಯ್, ಅಕ್ಟೋಬರ್ 30: ಭಾರಿ ಪ್ರಬಲ ತೂಫನಿನ ಆರ್ಭಟಕ್ಕೆ ವಿಯೆಟ್ನಾ ದೇಶ ತತ್ತರಿಸಿಹೋಗಿದೆ. 20 ವರ್ಷಗಳಲ್ಲಿಯೇ ಅತ್ಯಂತ ಮಾರಕ ಸ್ವರೂಪದ್ದಾಗಿರುವ ತೂಫಾನಿನಿಂದಾಗಿ ಗುರುವಾರ ದೇಶದ ಅನೇಕ ಭಾಗಗಳಲ್ಲಿ ಭೂಕುಸಿತ, ಮರಗಳ ಉರುಳುವಿಕೆ ಮುಂತಾದ ಅನಾಹುತಗಳಿಂದ ಕನಿಷ್ಠ 35 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ.
ಅನೇಕ ಕಡೆ ನೂರಾರು ದೋಣಿಗಳು ಮುಳುಗಿ ಹೋಗಿವೆ. ವಿದ್ಯುತ್ ಕಂಬಗಳು ಧರೆಗುರುಳಿದ್ದು, ಕಮಿಷ್ಠ 1.7 ಮಿಲಿಯನ್ ಜನರು ಕತ್ತಲಲ್ಲಿ ಮುಳುಗುವಂತಾಗಿದೆ. ದೇಶದ ಮಧ್ಯ ಭಾಗದಲ್ಲಿನ ಮೂರು ಗ್ರಾಮಗಳಲ್ಲಿ ಭಾರಿ ಅನಾಹುತವಾಗಿದೆ. ಭೂಕುಸಿತಗಳಿಂದ ಕನಿಷ್ಠ 19 ಮಂದಿ ಮೃತಪಟ್ಟಿದ್ದಾರೆ. 40ಕ್ಕೂ ಹೆಚ್ಚು ಮಂದಿ ಅಪಾರ ಪ್ರಮಾಣದಲ್ಲಿ ಕುಸಿದಿರುವ ಮಣ್ಣು ಮತ್ತು ಅವಶೇಷಗಳ ಅಡಿ ಸಿಲುಕಿದ್ದಾರೆ ಎಂದು ಊಹಿಸಲಾಗಿದೆ.

ಸೇನಾ ಪಡೆಗಳು ಅವಶೇಷಗಳನ್ನು ಬುಲ್ಡೋಜರ್ಗಳ ಸಹಾಯದಿಂದ ತೆರವುಗೊಳಿಸುವ ಮೂಲಕ ಜನರನ್ನು ರಕ್ಷಿಸುವ ಕಾರ್ಯಗಳಲ್ಲಿ ನಿರತವಾಗಿವೆ. ಭೂಕುಸಿತದ ಒಂದು ಸ್ಥಳಕ್ಕೆ ಭೇಟಿ ನೀಡಿರುವ ಉಪ ಪ್ರಧಾನಿ ಟ್ರಿನ್ಹ್ ಡಿನ್ಹ್ ಡುಂಗ್, ರಕ್ಷಣಾ ಕಾರ್ಯಾಚರಣೆಯ ಪ್ರಯತ್ನಗಳಿಗೆ ನೆರವಾಗಲು ಕೂಡಲೇ ಮತ್ತಷ್ಟು ಸೇನಾ ಪಡೆಗಳನ್ನು ರವಾನಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
Central Vietnam hit by typhoon few hours ago pic.twitter.com/kkQMElXj6V
— Toon Seri Anthraxxxx (@anthraxxxx) October 28, 2020
ತೂಫಾನ್ 'ಮೊಲಾವೆ' ಹೊಡೆತಕ್ಕೆ ಸಿಕ್ಕಿ ಬುಧವಾರ ಕೆಲವು ಮೀನುಗಾರರ ದೋಣಿಗಳು ಮುಳುಗಿಹೋಗಿದ್ದು 12 ಮೀನುಗಾರರು ಬಲಿಯಾಗಿದ್ದಾರೆ. ಗಂಟೆಗೆ 150 ಕಿಮೀ ವೇಗದಲ್ಲಿ ಗಾಳಿ ಬೀಸಿದೆ. 14 ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ. ದೇಶದ ಅನೇಕ ಕಡೆ ಅಪಾರ ಹಾನಿಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಉಂಟಾಗಿರುವ ಹಾನಿಗಳ ಪ್ರಮಾಣ ಮತ್ತು ಸಾವು ನೋವಿಗಳನ್ನು ಅಂದಾಜಿಸಲು ಈಗಲೇ ಸಾಧ್ಯವಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವೇಗವಾಗಿ ಬೀಸುತ್ತಿರುವ ಗಾಳಿಯ ನಡುವೆ ಮಳೆ ಸುರಿಯುತ್ತಿದ್ದು, ಜನರು ಕಂಗಾಲಾಗಿದ್ದಾರೆ. 1.3 ಮಿಲಿಯನ್ ಜನರನ್ನು ಬೇರೆಡೆಗೆ ಸ್ಥಳಾಂತರಿಸಲು ಸರ್ಕಾರ ಸಿದ್ಧತೆ ನಡೆಸಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications