ಭಾರತ- ಪಾಕ್ ಪಂದ್ಯ ನೋಡಲು ಆಗಮಿಸಿದ್ದ ವಿಜಯ್ ಮಲ್ಯ
ಭಾನುವಾರ (ಜೂನ್ 5) ನಡೆದ ಭಾರತ- ಪಾಕಿಸ್ತಾನ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯವನ್ನು ನೋಡಲು ಉದ್ಯಮಿ ವಿಜಯ್ ಮಲ್ಯ ಅವರು ಆಗಮಿಸಿದ್ದರೇ? ಎಂಬುದೊಂದು ಅನುಮಾನ ವ್ಯಕ್ತವಾಗಿದೆ.
ಬರ್ಮಿಂಗ್ ಹ್ಯಾಮ್, ಜೂನ್ 5: ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವೆ ಭಾನುವಾರ (ಜೂನ್ 4) ನಡೆದ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯವನ್ನು ನೋಡಲು ಉದ್ಯಮಿ ವಿಜಯ್ ಮಲ್ಯ ಆಗಮಿಸಿದ್ದರೇ? ಇಂಥದ್ದೊಂದು ಪ್ರಶ್ನೆ ಈಗ ಎಲ್ಲೆಡೆ ಹರಿದಾಡುತ್ತಿದೆ.
ಇದಕ್ಕೆ ಮೂಲ ಕಾರಣ, ಕ್ರೀಡಾಂಗಣದಲ್ಲಿ ಮಲ್ಯ ವೀಕ್ಷಕರ ಗ್ಯಾಲರಿಯಲ್ಲಿ ಕುಳಿತು ಪಂದ್ಯವನ್ನು ನೋಡುತ್ತಿರುವ ಹಾಗೂ ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಜತೆಗೆ ಕ್ರೀಡಾಂಗಣದ ಬೇರೊಂದು ಕಡೆ ಮಾತುಕತೆ ನಡೆಸುತ್ತಿರುವ ಚಿತ್ರ.[In Pics : ಪಾಕ್ ವಿರುದ್ಧ ಜಯದ ನಗೆ ಬೀರಿದ ಭಾರತ]

ಈ ಎರಡೂ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆದರೆ, ಆ ವ್ಯಕ್ತಿ ವಿಜಯ್ ಮಲ್ಯನಾ ಅಥವಾ ಬೇರೆಯವರಾ ಎಂಬುದಿನ್ನೂ ಖಚಿತವಾಗಿಲ್ಲ ಎಂದು ಇಂಡಿಯಾ ಟುಡೇ ತನ್ನ ಜಾಲತಾಣದಲ್ಲಿ ಹೇಳಿಕೊಂಡಿದೆ. @nikster007 ಎಂಬ ಟ್ವಿಟರ್ ಅಕೌಂಟ್ ನಲ್ಲಿ ಪ್ರಕಟಿಸಲ್ಪಟ್ಟಿರುವ ಈ ಫೋಟೋಗಳನ್ನು ಆಧರಿಸಿ ಇಂಡಿಯಾ ಟುಡೇ ಈ ವರದಿ ಮಾಡಿದೆ. ಆದರೆ, ಹಲವಾರು ಮಾಧ್ಯಮಗಳು ಅವರನ್ನು ವಿಜಯ್ ಮಲ್ಯ ಎಂದೇ ಸ್ಪಷ್ಟವಾಗಿ ಹೇಳಿವೆ.
ಭಾರತೀಯ ಬ್ಯಾಂಕುಗಳಿಗೆ ಸುಮಾರು 6 ಸಾವಿರ ಕೋಟಿ ರು. ಗಳಷ್ಟು ಸಾಲವನ್ನು ತೀರಿಸದೇ ದೇಶದಿಂದ ಹೊರಹೋಗಿರುವ ಆಪಾದನೆ ಎದುರಿಸುತ್ತಿರುವ ಮಲ್ಯ, ನೆಲೆಸಿರುವುದು ಲಂಡನ್ ನಲ್ಲೇ. ಈಗ ಚಾಂಪಿಯನ್ಸ್ ಟ್ರೋಫಿ ಕೂಡ ಅಲ್ಲೇ ನಡೆಯುತ್ತಿದೆ. ಮೊದಲಿನಿಂದಲೂ ಭಾರತೀಯ ಕ್ರಿಕೆಟ್ ನ ಅಪ್ಪಟ ಅಭಿಮಾನಿಯಾಗಿರುವ ಅವರು, ಹೈ ವೋಲ್ಟೇಜ್ ಪಂದ್ಯವೆನಿಸಿದ್ದ ಭಾರತ- ಪಾಕಿಸ್ತಾನ ನಡುವಿನ ಸೆಣಸನ್ನು ನೋಡಲು ಆಗಮಿಸಿದರೂ ಅಚ್ಚರಿಪಡಬೇಕಿಲ್ಲ.
Mallya chilling in The stadium #VJM #WA pic.twitter.com/RE8ztBJ761
— Nik (@nikster007) June 4, 2017
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications