Video: ಉಕ್ರೇನ್ ನೆಲದ ಈ ದೃಶ್ಯ ನೋಡಿದ್ರೆ ಕಣ್ಣೀರು ಕಪಾಳಕ್ಕೆ ಬರುತ್ತೆ!
ಕೀವ್, ಮಾರ್ಚ್ 8: ಅಮ್ಮನ ಮಡಿಲು ಇಲ್ಲ, ಅಪ್ಪನ ಹೆಗಲೂ ಇಲ್ಲ. ಪುಟ್ಟ ಮಗುವಿನ ಮನಸಿನ ಹೋಯ್ದಾಟವನ್ನು ಕೇಳಿಸಿಕೊಳ್ಳುವವರೂ ಯಾರಿಲ್ಲ. ಯಾವಾಗ ಏನಾಗುತ್ತೋ ಎನ್ನುವ ಆತಂಕದ ನಡುವೆ ಯುದ್ಧ ಭೂಮಿಯಲ್ಲಿ ಏಕಾಂಗಿಯಾಗಿ ನಡೆದುಕೊಂಡು ಹೋಗುತ್ತಿರುವ ಮಗುವಿನ ವೇದನೆಗೆ ಇದೊಂದು ದೃಶ್ಯ ಸಾಕ್ಷಿ ಆಗಿ ನಿಲ್ಲುತ್ತದೆ.
ಯುದ್ಧ ಎಂದರೆ ವಿನಾಶ. ಅನಾದಿ ಕಾಲದಿಂದಲೂ ನಡೆದ ಘಟನೆಗಳಿಂದ ಬುದ್ಧಿ ಕಲಿಯದ ರಷ್ಯಾ, ಉಕ್ರೇನ್ ನೆಲದಲ್ಲಿ ರಾಕ್ಷಸನಂತೆ ವರ್ತಿಸುತ್ತಿದೆ. ಪುಟಿನ್ ಅಧಿಕಾರದಾಹಕ್ಕೆ ಪುಟ್ಟ ಮಕ್ಕಳು, ಮಹಿಳೆಯರು, ವೃದ್ಧರು ಅನಾಥರಾಗಿ ಬೀದಿಯಲ್ಲಿ ನಿಲ್ಲುವಂತ ದುಸ್ಥಿತಿ ನಿರ್ಮಾಣವಾಗಿ ಬಿಟ್ಟಿದೆ.
Heart breaking 😥 #UkraineRussiaWar #Poland pic.twitter.com/XGG2eoLd9Y
— Jeeva Bharathi (@sjeeva26) March 9, 2022
ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ಯುದ್ಧವು 14ನೇ ದಿನಕ್ಕೆ ಕಾಲಿಟ್ಟಿದೆ. ವೈಮಾನಿಕ ದಾಳಿ, ಶೆಲ್ ದಾಳಿ, ಬಾಂಬ್ ದಾಳಿ ಹಾಗೂ ಬಂದೂಕಿನಿಂದ ಸಿಡಿಯುವ ಗುಂಡಿನ ಸುರಿಮಳೆಗೆ ಅದೆಷ್ಟೋ ಜೀವಗಳು ನೆಲದ ನಂಟನ್ನೇ ಕಳೆದುಕೊಂಡು ಉಸಿರು ಚೆಲ್ಲಿವೆ.

ಕಣ್ಣೀರು ಹಾಕುತ್ತಾ ಹೆಜ್ಜೆ ಹಾಕಿದ ಪುಟ್ಟ ಬಾಲಕ:
ರಷ್ಯಾ ನಡೆಸಿದ ಯುದ್ಧದಿಂದ ಉಕ್ರೇನ್ ನೆಲದಲ್ಲಿ ನರಕ ಸದೃಶ್ಯ ಸ್ಥಿತಿ ನಿರ್ಮಾಣವಾಗಿದೆ. ತಂದೆ-ತಾಯಿ ಮತ್ತು ಕುಟುಂಬ ಸದಸ್ಯರನ್ನು ಕಾಣದ ಪುಟ್ಟ ಬಾಲಕನೊಬ್ಬ ನಡುರಸ್ತೆಯಲ್ಲಿ ಕಣ್ಣೀರು ಹಾಕುತ್ತಾ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಇದರ ಮಧ್ಯೆ ರಷ್ಯಾ ಸೇನೆಯು ತನ್ನ ದಾಳಿಯನ್ನು ಮುಂದುವರಿಸಿದ್ದು, ಪೂರ್ವ ಉಕ್ರೇನ್ನ ಸೆವೆರೊಡೊನೆಸ್ಟ್ಕ್ನ ಪಟ್ಟಣದಲ್ಲಿ ರಷ್ಯಾದ ಮಿಲಿಟರಿ ದಾಳಿಯಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications