ಬಾಲಿಯ ಅಗಂಗ್ ಪರ್ವತದಲ್ಲಿ ಜ್ವಾಲಾಮುಖಿ, ಸಾವಿರಾರು ಮಂದಿ ಸ್ಥಳಾಂತರ
Recommended Video

ಇಂಡೋನೇಷ್ಯಾದ ದ್ವೀಪ ಬಾಲಿಗೆ ಪ್ರವಾಸ ಹೋಗುವ ಇರಾದೆಯಲ್ಲಿದ್ದರೆ ಈಗಲೇ ಎಚ್ಚೆತ್ತುಕೊಳ್ಳಿ. ಅಲ್ಲಿನ ಅಗಂಗ್ ಪರ್ವತದಲ್ಲಿ ಜ್ವಾಲಾಮುಖಿ ಹೆಚ್ಚಾಗಿದ್ದು, ಬೂದಿಯುಗುಳುತ್ತಿದೆ. ಪರಿಸ್ಥಿತಿ ತೀರಾ ಗಂಭೀರವಾಗಿರುವುದರಿಂದ ಅಲ್ಲಿನ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ಸಾವಿರಾರು ಪ್ರವಾಸಿಗರನ್ನು ಅಲ್ಲಿಂದ ಸ್ಥಳಾಂತರ ಮಾಡಲಾಗುತ್ತಿದೆ.
ಬಾಲಿ ದ್ವೀಪ ಅಂತರರಾಷ್ಟ್ರೀಯ ಮಟ್ಟದಲ್ಲಿ ಬಹಳ ಹೆಸರುವಾಸಿ. ಇಲ್ಲಿಗೆ ಪ್ರತಿ ವರ್ಷ ಲಕ್ಷಾಂತರ ಮಂದಿ ಭೇಟಿ ನೀಡುತ್ತಾರೆ. ಕಳೆದ ಸೆಪ್ಟೆಂಬರ್ ನಿಂದ ಅಗಂಗ್ ಪರ್ವತದಲ್ಲಿ ಜ್ವಾಲಾಮುಖಿ ಪ್ರಮಾಣ ಹೆಚ್ಚಾಗಿದೆ. ನವೆಂಬರ್ 21ರಿಂದ ಪರ್ವತದಿಂದ ಹೊಗೆ ಹಾಗೂ ಬೂದಿ ಕಾಣಿಸಿಕೊಳ್ಳುವುದು ತುಂಬ ಹೆಚ್ಚಾಗಿದೆ.

ಆಕಾಶದೆತ್ತರಕ್ಕೆ ಹೊಗೆ ಕಾಣಿಸಿಕೊಂಡಿದ್ದು, ಇಂಡೋನೇಷ್ಯಾ ಸರಕಾರ ಎಚ್ಚರಿಕೆಯನ್ನು ನೀಡಿದೆ. 1963ರಲ್ಲಿ ಪರ್ವತದಲ್ಲಿ ಜ್ವಾಲಾಮುಖಿ ಕಾಣಿಸಿಕೊಂಡು, ದ್ವೀಪದಲ್ಲಿ 1600 ಮಂದಿ ಮೃತಪಟ್ಟಿದ್ದರು. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಪರ್ವತದ ಸಮೀಪ ವಾಸವಿರುವವರನ್ನು ಸಮರೋಪಾದಿಯಲ್ಲಿ ಸ್ಥಳಾಂತರ ಮಾಡಲಾಗುತ್ತಿದೆ.
A volcano in Bali, Indonesia, is erupting and spewing ash, forcing the closure of the island's main airport and the evacuation of thousands of residents https://t.co/qUe7lJmsR7 pic.twitter.com/aTLOka4FVf
— CNN (@CNN) 27 November 2017
ಈ ದ್ವೀಪದಲ್ಲಿ ಹಿಂದೂಗಳ ಸಂಖ್ಯೆ ಹೆಚ್ಚಿದ್ದು, ಪರ್ವತದಲ್ಲಿ ಕಾಣಿಸಿಕೊಂಡಿರುವ ಜ್ವಾಲಾಮುಖಿಯ ಪ್ರಮಾಣ ಕಡಿಮೆ ಆಗಲಿ ಎಂದು ಸ್ಥಳೀಯರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications