ಲೆಬನಾನ್ನ ಹಿಜ್ಭುಲ್ಲಾ ಘಟಕಗಳಲ್ಲಿ ವಾಕಿ-ಟಾಕಿಗಳು ಸ್ಫೋಟ; 9 ಮಂದಿ ಸಾವು, 300 ಮಂದಿಗೆ ಗಾಯ
ಲೆಬನಾನ್ನಾದ್ಯಂತ ಹಿಜ್ಬುಲ್ಲಾ ಹಿಡಿತದ ಪ್ರದೇಶಗಳಲ್ಲಿ ವಾಕಿ-ಟಾಕಿಗಳು ಸ್ಫೋಟಗೊಂಡಿದ್ದರಿಂದ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೇಜರ್ಗಳು ಸ್ಫೋಟಗೊಂಡು ಹನ್ನೆರಡು ಜನ ಸಾವನ್ನಪ್ಪಿ 3,000 ಮಂದಿ ಗಾಯಗೊಂಡ ಬಳಿಕ ಈ ಘಟನೆ ನಡೆದಿದೆ.
ಎಷ್ಟು ಸಂಖ್ಯೆಯ ವಾಕಿ-ಟಾಕಿಗಳು ಸ್ಫೋಟಗೊಂಡಿವೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಪೂರ್ವ ಲೆಬನಾನ್ನ ವಿವಿಧ ಜಾಗಗಳಲ್ಲಿ ಲ್ಯಾಂಡ್ಲೈನ್ ಫೋನ್ಗಳು ಕೂಡ ಸ್ಫೋಟಗೊಂಡಿರುವುದಾಗಿ ವರದಿಯಾಗಿದೆ. ಐದು ತಿಂಗಳ ಹಿಂದೆ ವೈರ್ಲೆಸ್ ರೇಡಿಯೊ ಸಾಧನಗಳು ಮತ್ತು ವಾಕಿ-ಟಾಕಿಗಳನ್ನು ಖರೀದಿ ಮಾಡಲಾಗಿದೆ ಎನ್ನಲಾಗಿತ್ತು, ಪೇಜರ್ಗಳನ್ನು ಕೂಡ ಇದೇ ಸಂದರ್ಭದಲ್ಲಿ ಖರೀದಿ ಮಾಡಿರುವುದಾಗಿ ಹೇಳಿದೆ.

ದಕ್ಷಿಣ ಲೆಬನಾನ್ ಮತ್ತು ಬೈರುತ್ನ ವ್ಯಾಪ್ತಿಯಲ್ಲಿ ಇಂದು ಸ್ಫೋಟಗಳು ನಡೆದಿವೆ. ಮಂಗಳವಾರ ನಡೆದ ಪೇಜರ್ ಸ್ಫೋಟಗಳಲ್ಲಿ ಸಾವನ್ನಪ್ಪಿದವರಿಗೆ ಹಿಜ್ಬುಲ್ಲಾ ಆಯೋಜಿಸಿದ್ದ ಅಂತ್ಯಕ್ರಿಯೆಯ ಬಳಿ ಕೂಡ ಸ್ಫೋಟ ಸಂಭವಿಸಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಇಸ್ರೇಲ್ ಮೇಲೆ ದಾಳಿ
ಪೇಜರ್ ಸ್ಫೋಟಗೊಂಡು ಸಾವಿರಾರು ಸದಸ್ಯರು ಗಾಯಗೊಂಡಿದ್ದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಹೆಚ್ಚಾಗಿದೆ. ಇರಾನ್ ಬೆಂಬಲಿತ ಹಿಜ್ಬುಲ್ಲಾ ಇಸ್ರೇಲಿ ಫಿರಂಗಿದಳದ ಸ್ಥಾನಗಳ ಮೇಲೆ ರಾಕೆಟ್ಗಳಿಂದ ದಾಳಿ ಮಾಡಿದೆ ಎಂದು ವರದಿಯಾಗಿದೆ.
ಇಸ್ರೇಲ್ ಮೇಲೆ ಆರೋಪ, ಹೆಜ್ಬೊಲ್ಲಾ ಆಮದು ಮಾಡಿಕೊಂಡ ಪೇಜರ್ಗಳಲ್ಲಿ ಇಸ್ರೇಲ್ನ ಬೇಹುಗಾರಿಕಾ ಸಂಸ್ಥೆ ಮೊಸಾದ್ ಸ್ಫೋಟಕಗಳನ್ನು ಸೇರಿಸಿದೆ ಎಂದು ಲೆಬನಾನಿನ ಭದ್ರತಾ ಮೂಲಗಳು ರಾಯಿಟರ್ಸ್ಗೆ ತಿಳಿಸಿದೆ ಎಂದು ವರದಿಯಾಗಿದೆ.
ಪೇಜರ್ ಸ್ಫೋಟಗೊಂಡ ಘಟನೆಯಲ್ಲಿ ಹನ್ನೆರಡು ಮಂದಿ ಸಾವನ್ನಪ್ಪಿದ್ದು, 2800 ಜನ ಗಾಯಗೊಂಡಿದ್ದಾರೆ ಎಂದು ಲೆಬನಾನಿನ ಆರೋಗ್ಯ ಸಚಿವ ಫಿರಾಸ್ ಅಬಿಯಾಡ್ ಖಚಿತಪಡಿಸಿದ್ದಾರೆ. ಮೃತಪಟ್ಟವರಲ್ಲಿ ಒಬ್ಬ ಹುಡುಗಿ ಕೂಡ ಇದ್ದಳು ಎಂದು ಹೇಳಿದ್ದಾರೆ. ಗಾಯಗೊಂಡವರಲ್ಲಿ 200 ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದರು.
ಪೇಜರ್ ಸ್ಫೋಟಗೊಂಡಿರುವ ಘಟನೆಯಲ್ಲಿ ಲೆಬನಾನ್ನಲ್ಲಿನ ತನ್ನ ರಾಯಭಾರಿ ಮೊಜ್ತಾಬಾ ಅಮಾನಿ ಕೂಡ ಗಾಯಗೊಂಡಿದ್ದಾರೆ ಎಂದು ಇರಾನ್ನ ರಾಜ್ಯ ಮಾಧ್ಯಮ ವರದಿಯಲ್ಲಿ ತಿಳಿಸಿದೆ.
ಯುಎಸ್ ಮತ್ತು ಯೂರೋಪಿಯನ್ ಯೂನಿಯನ್ ಹಿಜ್ಬುಲ್ಲಾವನ್ನು ನಿಷೇಧಿಸಿದೆ. ಲೆಬನಾನ್ನಲ್ಲಿ ಹಿಜ್ಬುಲ್ಲಾ ರಾಜಕೀಯ ಮತ್ತು ಮಿಲಿಟರಿ ಬಲದಿಂದ ಆಡಳಿತ ನಡೆಸುತ್ತಿದೆ. ಇರಾನ್ ಹಿಜ್ಬುಲ್ಲಾಗೆ ಬೆಂಬಲ ನೀಡುತ್ತಿದೆ. ಇಸ್ರೇಲ್ ಜೊತೆ ಯುದ್ಧ ಮಾಡುತ್ತಿರುವ ಹಮಾಸ್ಗೆ ಹಿಜ್ಬುಲ್ಲಾ ಬೆಂಬಲ ನೀಡಿದೆ. ಇದೇ ಕಾರಣಕ್ಕೆ ಇದೀಗ ಹಿಜ್ಬುಲ್ಲಾ ಮೇಲಿನ ದಾಳಿಗೆ ಇಸ್ರೇಲ್ ಕಾರಣ ಎಂದು ದೂಷಿಸಲಾಗುತ್ತಿದೆ.
ಇದು ಹತ್ಯಾಕಾಂಡ ಮತ್ತು ಕ್ರಿಮಿನಲ್ ಆಕ್ರಮಣ ಎಂದು ಕರೆದಿರುವ ಹಿಜ್ಬುಲ್ಲಾ ಈ ದಾಳಿಗಳಿಗೆ ಇಸ್ರೇಲ್ದೆ ಸಂಪೂರ್ಣ ಹೊಣೆಗಾರಿಕೆ ಎಂದು ಹೇಳಿದೆ. ಗಾಜಾದಲ್ಲಿ ಹಮಾಸ್ಗೆ ಬೆಂಬಲ ನೀಡುವುದನ್ನು ಮುಂದುವರೆಸುತ್ತೇವೆ, ಪೇಜರ್ ಹತ್ಯಾಕಾಂಡಕ್ಕೆ ಪ್ರತಿಕ್ರಿಯೆ ನೀಡುತ್ತೇವೆ, ಇಸ್ರೇಲ್ ಅದಕ್ಕೆ ಕಾಯಬೇಕು ಎಂದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications