ಲೆಬನಾನ್ನ ಹಿಜ್ಭುಲ್ಲಾ ಘಟಕಗಳಲ್ಲಿ ವಾಕಿ-ಟಾಕಿಗಳು ಸ್ಫೋಟ; 9 ಮಂದಿ ಸಾವು, 300 ಮಂದಿಗೆ ಗಾಯ
ಲೆಬನಾನ್ನಾದ್ಯಂತ ಹಿಜ್ಬುಲ್ಲಾ ಹಿಡಿತದ ಪ್ರದೇಶಗಳಲ್ಲಿ ವಾಕಿ-ಟಾಕಿಗಳು ಸ್ಫೋಟಗೊಂಡಿದ್ದರಿಂದ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೇಜರ್ಗಳು ಸ್ಫೋಟಗೊಂಡು ಹನ್ನೆರಡು ಜನ ಸಾವನ್ನಪ್ಪಿ 3,000 ಮಂದಿ ಗಾಯಗೊಂಡ ಬಳಿಕ ಈ ಘಟನೆ ನಡೆದಿದೆ.
ಎಷ್ಟು ಸಂಖ್ಯೆಯ ವಾಕಿ-ಟಾಕಿಗಳು ಸ್ಫೋಟಗೊಂಡಿವೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಪೂರ್ವ ಲೆಬನಾನ್ನ ವಿವಿಧ ಜಾಗಗಳಲ್ಲಿ ಲ್ಯಾಂಡ್ಲೈನ್ ಫೋನ್ಗಳು ಕೂಡ ಸ್ಫೋಟಗೊಂಡಿರುವುದಾಗಿ ವರದಿಯಾಗಿದೆ. ಐದು ತಿಂಗಳ ಹಿಂದೆ ವೈರ್ಲೆಸ್ ರೇಡಿಯೊ ಸಾಧನಗಳು ಮತ್ತು ವಾಕಿ-ಟಾಕಿಗಳನ್ನು ಖರೀದಿ ಮಾಡಲಾಗಿದೆ ಎನ್ನಲಾಗಿತ್ತು, ಪೇಜರ್ಗಳನ್ನು ಕೂಡ ಇದೇ ಸಂದರ್ಭದಲ್ಲಿ ಖರೀದಿ ಮಾಡಿರುವುದಾಗಿ ಹೇಳಿದೆ.

ದಕ್ಷಿಣ ಲೆಬನಾನ್ ಮತ್ತು ಬೈರುತ್ನ ವ್ಯಾಪ್ತಿಯಲ್ಲಿ ಇಂದು ಸ್ಫೋಟಗಳು ನಡೆದಿವೆ. ಮಂಗಳವಾರ ನಡೆದ ಪೇಜರ್ ಸ್ಫೋಟಗಳಲ್ಲಿ ಸಾವನ್ನಪ್ಪಿದವರಿಗೆ ಹಿಜ್ಬುಲ್ಲಾ ಆಯೋಜಿಸಿದ್ದ ಅಂತ್ಯಕ್ರಿಯೆಯ ಬಳಿ ಕೂಡ ಸ್ಫೋಟ ಸಂಭವಿಸಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಇಸ್ರೇಲ್ ಮೇಲೆ ದಾಳಿ
ಪೇಜರ್ ಸ್ಫೋಟಗೊಂಡು ಸಾವಿರಾರು ಸದಸ್ಯರು ಗಾಯಗೊಂಡಿದ್ದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಹೆಚ್ಚಾಗಿದೆ. ಇರಾನ್ ಬೆಂಬಲಿತ ಹಿಜ್ಬುಲ್ಲಾ ಇಸ್ರೇಲಿ ಫಿರಂಗಿದಳದ ಸ್ಥಾನಗಳ ಮೇಲೆ ರಾಕೆಟ್ಗಳಿಂದ ದಾಳಿ ಮಾಡಿದೆ ಎಂದು ವರದಿಯಾಗಿದೆ.
ಇಸ್ರೇಲ್ ಮೇಲೆ ಆರೋಪ, ಹೆಜ್ಬೊಲ್ಲಾ ಆಮದು ಮಾಡಿಕೊಂಡ ಪೇಜರ್ಗಳಲ್ಲಿ ಇಸ್ರೇಲ್ನ ಬೇಹುಗಾರಿಕಾ ಸಂಸ್ಥೆ ಮೊಸಾದ್ ಸ್ಫೋಟಕಗಳನ್ನು ಸೇರಿಸಿದೆ ಎಂದು ಲೆಬನಾನಿನ ಭದ್ರತಾ ಮೂಲಗಳು ರಾಯಿಟರ್ಸ್ಗೆ ತಿಳಿಸಿದೆ ಎಂದು ವರದಿಯಾಗಿದೆ.
ಪೇಜರ್ ಸ್ಫೋಟಗೊಂಡ ಘಟನೆಯಲ್ಲಿ ಹನ್ನೆರಡು ಮಂದಿ ಸಾವನ್ನಪ್ಪಿದ್ದು, 2800 ಜನ ಗಾಯಗೊಂಡಿದ್ದಾರೆ ಎಂದು ಲೆಬನಾನಿನ ಆರೋಗ್ಯ ಸಚಿವ ಫಿರಾಸ್ ಅಬಿಯಾಡ್ ಖಚಿತಪಡಿಸಿದ್ದಾರೆ. ಮೃತಪಟ್ಟವರಲ್ಲಿ ಒಬ್ಬ ಹುಡುಗಿ ಕೂಡ ಇದ್ದಳು ಎಂದು ಹೇಳಿದ್ದಾರೆ. ಗಾಯಗೊಂಡವರಲ್ಲಿ 200 ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದರು.
ಪೇಜರ್ ಸ್ಫೋಟಗೊಂಡಿರುವ ಘಟನೆಯಲ್ಲಿ ಲೆಬನಾನ್ನಲ್ಲಿನ ತನ್ನ ರಾಯಭಾರಿ ಮೊಜ್ತಾಬಾ ಅಮಾನಿ ಕೂಡ ಗಾಯಗೊಂಡಿದ್ದಾರೆ ಎಂದು ಇರಾನ್ನ ರಾಜ್ಯ ಮಾಧ್ಯಮ ವರದಿಯಲ್ಲಿ ತಿಳಿಸಿದೆ.
ಯುಎಸ್ ಮತ್ತು ಯೂರೋಪಿಯನ್ ಯೂನಿಯನ್ ಹಿಜ್ಬುಲ್ಲಾವನ್ನು ನಿಷೇಧಿಸಿದೆ. ಲೆಬನಾನ್ನಲ್ಲಿ ಹಿಜ್ಬುಲ್ಲಾ ರಾಜಕೀಯ ಮತ್ತು ಮಿಲಿಟರಿ ಬಲದಿಂದ ಆಡಳಿತ ನಡೆಸುತ್ತಿದೆ. ಇರಾನ್ ಹಿಜ್ಬುಲ್ಲಾಗೆ ಬೆಂಬಲ ನೀಡುತ್ತಿದೆ. ಇಸ್ರೇಲ್ ಜೊತೆ ಯುದ್ಧ ಮಾಡುತ್ತಿರುವ ಹಮಾಸ್ಗೆ ಹಿಜ್ಬುಲ್ಲಾ ಬೆಂಬಲ ನೀಡಿದೆ. ಇದೇ ಕಾರಣಕ್ಕೆ ಇದೀಗ ಹಿಜ್ಬುಲ್ಲಾ ಮೇಲಿನ ದಾಳಿಗೆ ಇಸ್ರೇಲ್ ಕಾರಣ ಎಂದು ದೂಷಿಸಲಾಗುತ್ತಿದೆ.
ಇದು ಹತ್ಯಾಕಾಂಡ ಮತ್ತು ಕ್ರಿಮಿನಲ್ ಆಕ್ರಮಣ ಎಂದು ಕರೆದಿರುವ ಹಿಜ್ಬುಲ್ಲಾ ಈ ದಾಳಿಗಳಿಗೆ ಇಸ್ರೇಲ್ದೆ ಸಂಪೂರ್ಣ ಹೊಣೆಗಾರಿಕೆ ಎಂದು ಹೇಳಿದೆ. ಗಾಜಾದಲ್ಲಿ ಹಮಾಸ್ಗೆ ಬೆಂಬಲ ನೀಡುವುದನ್ನು ಮುಂದುವರೆಸುತ್ತೇವೆ, ಪೇಜರ್ ಹತ್ಯಾಕಾಂಡಕ್ಕೆ ಪ್ರತಿಕ್ರಿಯೆ ನೀಡುತ್ತೇವೆ, ಇಸ್ರೇಲ್ ಅದಕ್ಕೆ ಕಾಯಬೇಕು ಎಂದರು.
-
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ












Click it and Unblock the Notifications