ಭಾರತ- ಪಾಕಿಸ್ತಾನ ಬಾಂಧವ್ಯ ವೃದ್ಧಿ ನಮ್ಮ ಗುರಿ : ಇಮ್ರಾನ್
Recommended Video

ವಇಸ್ಲಾಮಾಬಾದ್, ಜುಲೈ 26: ಪಾಕಿಸ್ತಾನ ಚುನಾವಣೆಯಲ್ಲಿ ಸರ್ಕಾರ ರಚನೆಯ ಹೊಸ್ತಿಲಲ್ಲಿರುವ ಪಿಟಿಐ ಪಕ್ಷದ ಪರವಾಗಿ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರು ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ. ಗುರುವಾರ ಸಂಜೆ ಸುದ್ದಿಗೋಷ್ಠಿ ನಡೆಸಿದ ಇಮ್ರಾನ್ ಖಾನ್ ಅವರು, ಭಾರತದ ಜತೆ ಉತ್ತಮ ಬಾಂಧವ್ಯ ವೃದ್ಧಿಗೊಳಿಸುವುದು ನಮ್ಮ ಗುರಿ ಎಂದರು.
ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ, ಪಾಕಿಸ್ತಾನದಲ್ಲಿ ಬಡತನ ಹಾಗೂ ಆರೋಗ್ಯ ಸಮಸ್ಯೆ ಅಧಿಕವಾಗಿದ್ದು, ಇದರತ್ತ ಹೆಚ್ಚಿನ ಗಮನ ಹರಿಸಲಾಗುವುದು. ಭಾರತದ ಜೊತೆ ಚರ್ಚಿಸಿ ಕಾಶ್ಮೀರ ಸಮಸ್ಯೆ ಬಗೆಹರಿಸುವತ್ತ ನಮ್ಮ ನಿಲುವು ಇದೆ ಎಂದರು.

ಚೀನಾ ಜತೆಗಿನ ಸಂಬಂಧ ಬಗ್ಗೆ ಪ್ರಸ್ತಾಪಿಸಿದ ಇಮ್ರಾನ್ ಖಾನ್, ಚೀನಾದ ದೇಶದ ಅನೇಕ ನೀತಿಗಳನ್ನು ಅಳವಡಿಸಿಕೊಂಡು, ಭಾರತದೊಡನೆ ಚರ್ಚಿಸಬೇಕಿದೆ ಎಂದು ಹೇಳಿದರು.
ಈ ಕ್ಷಣದ ಫಲಿತಾಂಶದಂತೆ ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಅವರ ಪಿಟಿಐ (64), ಪಿಎಂಎಲ್ -ಎನ್ (27), ಪಿಪಿಪಿ (13), ಇತರೆ (13) ರಷ್ಟಿದೆ. ಸರಳ ಬಹುಮತಕ್ಕೆ 137 ಸ್ಥಾನಗಳು ಬೇಕಿದೆ.
ಇಮ್ರಾನ್ ಖಾನ್ ಸುದ್ದಿಗೋಷ್ಠಿ ಮುಖ್ಯಾಂಶಗಳು:
* ನಾನು ಅಲ್ಲಾಹ್ ನಿಗೆ ಮೊದಲಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. 22 ವರ್ಷಗಳ ಕಾಲ ಹೋರಾಟಕ್ಕೆ ಈಗ ಪ್ರತಿಫಲ ಸಿಗುತ್ತಿದೆ. ನನ್ನ ಕನಸಿನ ಪಾಕಿಸ್ತಾನ ನಿರ್ಮಿಸುವ ಅವಕಾಶ ಸಿಗುತ್ತಿದೆ.
* ನಾನು ರಾಜಕೀಯ ಪ್ರವೇಶಿಸಬೇಕೆಂಬುದು ಅಲ್ಲಾಹ್ ನ ಆದೇಶವಾಗಿತ್ತು. ನನಗೆ ಎಲ್ಲವನ್ನು ಆತ ನೀಡಿದ್ದಾನೆ. ರಾಜಕೀಯ ಪ್ರವೇಶಿಸುತ್ತಿದ್ದಂತೆ ಮೊಹಮ್ಮದ್ ಅಲಿ ಜಿನ್ನಾ ಅವರ ಕನಸಿನ ಪಾಕಿಸ್ತಾನ ನಿರ್ಮಾಣದ ಗುರಿ ಹೊತ್ತುಕೊಂಡೆ.
* ಚೀನಾದ ಮಾದರಿಯಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಬೇಕಾಗಿದೆ. ಬಡತನದ ರೇಖೆಯಲ್ಲಿದ್ದ 70 ಕೋಟಿ ಮಂದಿಯನ್ನು ಆರ್ಥಿಕ ಸುಸ್ಥಿತಿಗೆ ತಂದ ಚೀನಾ ನಮಗೆ ಮಾದರಿ.
* ಪಾಕಿಸ್ತಾನವನ್ನು ಮದೀನಾ ಮಾದರಿಯಲ್ಲಿ ಅಭಿವೃದ್ಧಿಶೀಲ ಪ್ರದೇಶವನ್ನಾಗಿಸಬೇಕಿದೆ ಪ್ರವಾದಿಗಳ ಕಾಲದ ಆಡಳಿತ ವ್ಯವಸ್ಥೆ ತರಬೇಕಿದೆ.
* ವ್ಯಾಪಾರ, ವಹಿವಾಟಿನ ಆರ್ಥಿಕ ವೆಚ್ಚವನ್ನು ತಗ್ಗಿಸಬೇಕಿದೆ. ಬಂಡವಾಳ ಹೂಡಿಕೆ ಹಿಗ್ಗಿಸಬೇಕಿದೆ.
* ಪ್ರಧಾನ ಮಂತ್ರಿಗಳ ನಿವಾಸದಲ್ಲಿ ನೆಲೆಸಲು ನಾನು ಇಚ್ಛೆ ಪಡುವುದಿಲ್ಲ. ಅದನ್ನು ಶಿಕ್ಷಣ ಸಂಸ್ಥೆಯಾಗಿ ಪರಿವರ್ತಿಸುತ್ತೇನೆ. ನಾನು ಬಾದ್ ಶಹಾ ರೀತಿಯಲ್ಲಿ ಜೀವಿಸಲಾರೆ
* ಭಾರತದ ಮಾಧ್ಯಮಗಳು ನನ್ನನ್ನು ವಿಲನ್ ಎಂಬಂತೆ ಬಿಂಬಿಸಿವೆ. ಸಾಮಾಜಿಕ ನ್ಯಾಯ, ಉತ್ತಮ ಬಾಂಧವ್ಯ,ಶಾಂತಿ ನೆಲೆಸುವುದು ನಮಗೆ ಮುಖ್ಯ.
-
US-Iran Talks: ಪಾಕ್ ನೆಲದಲ್ಲಿ 21 ಗಂಟೆಗಳ ಸಂಧಾನ ಮಾತುಕತೆ ವಿಫಲ: ಹೆಚ್ಚಿದ ಯುದ್ಧ ಭೀತಿ- ಪ್ರಮುಖಾಂಶಗಳು -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು









Click it and Unblock the Notifications