ಕಾಬೂಲ್ ದಾಳಿ: ಭಾರತೀಯ ರಾಯಭಾರಿ ಟಾರ್ಗೆಟ್?
ಕಾಬೂಲ್. ಮೇ.14: ಇಲ್ಲಿನ ಪಾರ್ಕ್ ಪ್ಯಾಲೇಸ್ ಗೆಸ್ಟ್ ಹೌಸ್ ನಲ್ಲಿ ಭಾರತೀಯ ರಾಯಭಾರಿ ಅಮರ್ ಸಿನ್ಹಾ ಇದ್ದಾರೆ ಎಂದು ಕೊಂಡು ಉಗ್ರರು ದಾಳಿ ನಡೆಸಿರುವ ಸಾಧ್ಯತೆ ಹೆಚ್ಚಿದೆ ಎಂದು ಅಫ್ಘಾನಿಸ್ತಾನದ ಅಧಿಕಾರಿಗಳು ಹೇಳಿದ್ದಾರೆ.
ಕಾಬೂಲ್ ನ ಕೊಲೊಲಾ ಪುಷ್ತಾ ಬಳಿ ಇರುವ ಗೆಸ್ಟ್ ಹೌಸ್ ಮೇಲೆ ಶಸ್ತ್ರಧಾರಿ ದುಷ್ಕರ್ಮಿಗಳು ಬುಧವಾರ ತಡರಾತ್ರಿ ನಡೆಸಿದ ದಾಳಿಯಲ್ಲಿ ಇಬ್ಬರು ಭಾರತೀಯರು, ಓರ್ವ ಅಮೆರಿಕನ್ ಸೇರಿ 5 ಮಂದಿ ಬಲಿಯಾಗಿದ್ದಾರೆ. ಯಾವುದೇ ಉಗ್ರ ಸಂಘಟನೆ ಈ ದಾಳಿಯ ಹೊಣೆ ಹೊತ್ತಿಲ್ಲ. [ಹೆರಾತ್ : ಪಾದ್ರಿ ಅಪಹರಣ ಪ್ರಕರಣ,ಒಬ್ಬ ಬಂಧನ]
In the aircraft I got news about the attack in Kabul. Am concerned about the situation & I pray for everyone's safety.
— Narendra Modi (@narendramodi) May 13, 2015 ಘಟನೆ ಬಗ್ಗೆ ಇನ್ನೂ ಹೆಚ್ಚಿನ ವಿವರ ಲಭ್ಯವಾಗಬೇಕಿದೆ. ಭಾರತೀಯ ರಾಯಭಾರಿ ಅಮರ್ ಸಿನ್ಹಾ ಅವರನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಿರುವ ಸಾಧ್ಯತೆಯಿದೆ. ಇನ್ನೂ ಭಾರತೀಯರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಅಧ್ಯಕ್ಷ ಅಶ್ರಫ್ ಘನಿ ಅವರ ಭದ್ರತಾ ಪಡೆಯ ಅಧಿಕಾರಿ ಅಹ್ಮದ್ ಜಿಯಾ ಮಸೌದ್ ಹೇಳಿದ್ದಾರೆ.[ಕಂದಹಾರ್ ಶೈಲಿ ಹೈಜಾಕ್ ಬೆದರಿಕೆ, ವಿ.ನಿಲ್ದಾಣಗಳಲ್ಲಿ ಕಟ್ಟೆಚ್ಚರ]

ಘಟನೆ ನಡೆದಾಗ ಪಾರ್ಕ್ ಪ್ಯಾಲೇಸ್ ಗೆಸ್ಟ್ ಹೌಸ್ ನಲ್ಲಿ ಸುಮಾರು 40ಕ್ಕೂ ಅಧಿಕ ಮಂದಿ ಇದ್ದರು. ಸಂಗೀತ ಕಾರ್ಯಕ್ರಮಕ್ಕಾಗಿ ಟರ್ಕಿ ಹಾಗೂ ಭಾರತೀಯ ಮೂಲದ ಅತಿಥಿಗಳನ್ನು ಆಹ್ವಾನಿಸಲಾಗಿತ್ತು. ಕೆಲ ಅಫ್ಘನ್ನರು ಇದ್ದರು. ಸುಮಾರು ಏಳು ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದ ಬಗ್ಗೆ ವರದಿಯಾಗಿದೆ. [ಅಫ್ಘಾನ್ ನಿರಾಶ್ರಿತರ ದೈನ್ಯತೆ, ಭಾರತದ ನೆರವು]
Embassy of India, Kabul - Contact persons: Shri O.N Bhaskar, Counsellor (Public Affairs) +93-705127863; Shri... http://t.co/736Q0bDm2p
— India in Afghanistan (@IndianEmbKabul) May 14, 2015 ಘಟನೆ ಬಗ್ಗೆ ವಿವರ ನೀಡಿದ ಕಾಬೂಲ್ ಪೊಲೀಸ್ ಮುಖ್ಯಸ್ಥ ಅಬ್ದುಲ್ ರಹ್ಮಾನ್ ಅವರು ಮಾತನಾಡಿ, ಈ ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ, 6 ಜನ ಗಾಯಗೊಂಡಿದ್ದಾರೆ ಹಾಗೂ 54 ಮಂದಿ ಒತ್ತೆಯಾಳುಗಳನ್ನು ರಕ್ಷಿಸಲಾಗಿದೆ ಎಂದಿದ್ದಾರೆ.
@MEAIndia @PMOIndia @narendramodi @SushmaSwaraj Unfortunately a few Indian casualties among others at the Kabul g/house attack today.
— Amar Sinha (@SenseandC_sense) May 13, 2015 ಮೂರು ದಿನಗಳ ಚೀನಾ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕಾಬೂಲ್ ದಾಳಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ರಾಯಭಾರ ಕಚೇರಿಯಿಂದ ಕೂಡಾ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದು ಟ್ವೀಟ್ ಸಂದೇಶ ಬಂದಿದೆ. (ಒನ್ ಇಂಡಿಯಾ ಸುದ್ದಿ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications