ಲಂಡನ್: ಸಿಖ್ ಯುವಕನ ಮೇಲೆ ಹಲ್ಲೆ, ವ್ಯಾಪಕ ಖಂಡನೆ
ಲಂಡನ್, ಏ.1: ಬರ್ಮಿಂಗ್ ಹ್ಯಾಮ್ ನಲ್ಲಿ ಸಿಖ್ ಯುವಕನೊಬ್ಬನಿಗೆ ಸ್ಥಳೀಯರು ಹಲ್ಲೆ ಮಾಡಿದ ಸುದ್ದಿ, ವಿಡಿಯೋ ಎಲ್ಲೆಡೆ ವ್ಯಾಪಕ ಚರ್ಚೆಗೊಳಪಟ್ಟಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಈ ಬಗ್ಗೆ ತೀವ್ರ ಖಂಡನೆ ವ್ಯಕ್ತವಾಗಿದೆ.
ಬರ್ಮಿಂಗ್ ಹ್ಯಾಮ್ ನ ಬ್ರಾಡ್ ರೋಡಿನಲ್ಲಿ ನಡೆದ ಈ ಘಟನೆ ಆಘಾತಕಾರಿಯಾಗಿದೆ. ಅಲ್ಲದೆ, ಹಲ್ಲೆ ನಡೆಯುವ ವೇಳೆಯಲ್ಲಿ ಹಾಜರಿದ್ದ ಸಾರ್ವಜನಿಕರು ಯಾರೂ ನೆರವಿಗೆ ಬಂದಿಲ್ಲ ಎಂಬುದು ಇನ್ನೂ ಆತಂಕಕಾರಿ, ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ. [ಏನಾಶ್ವರ್ಯ! ಎಲಿಜಬೆತ್ ರಾಣಿ ವಿರುದ್ಧ ನಿಂತ ಸೇವಕರು]
ಇದು ಧಾರ್ಮಿಕ ವಿಷಮ ಭಾವನೆಯಿಂದ ನಡೆದ ಕೃತ್ಯ ಎಂದು ಹೇಳಲಾಗುತ್ತಿದೆ. ಜನಾಂಗೀಯ ನಿಂದನೆ ಮಾಡಿರುವುದು ಕಂಡು ಬಂದರೆ ಕಠಿಣ ಶಿಕ್ಷೆ ವಿಧಿಸಲಾಗುವುದು. ಆರೋಪಿಗಳನ್ನು ಸೆರೆ ಹಿಡಿಯಲು ಸಾರ್ವಜನಿಕರು ನೆರವಾಗಬೇಕು. ಹಲ್ಲೆಗೊಳಗಾದ ಭಾರತೀಯ ಮೂಲದ ವ್ಯಕ್ತಿ ಘಟನೆ ಬಗ್ಗೆ ಹೆಚ್ಚಿನ ವಿವರ ನೀಡಿದರೆ ಪ್ರಕರಣದ ತನಿಖೆ ಸುಲಭವಾಗಲಿದೆ ಎಂದು ತನಿಖಾಧಿಕಾರಿ ಹೇಳಿದ್ದಾರೆ.

ಅದರೆ, ಘಟನೆ ಬಗ್ಗೆ ಸಿಖ್ ಸಮುದಾಯ ಸಿಟ್ಟಿಗೆದ್ದಿದ್ದು, ಡೈಲಿ ಸಿಖ್ ಅಪ್ಡೇಟ್ಸ್ ಎಂಬ ಫೇಸ್ ಬುಕ್ ಪುಟದಲ್ಲಿ ಘಟನೆಯನ್ನು ಖಂಡಿಸಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಅಲ್ಲದೆ, ಘಟನೆ ದಿನ ಸುಮ್ಮನೆ ನಿಂತು ನೋಡುತ್ತಿದ್ದ ಸಾರ್ವಜನಿಕರಿಗೆ ಛೀಮಾರಿ ಹಾಕಲಾಗಿದೆ. ಘಟನೆಯನ್ನು ಇಂಗ್ಲೆಂಡಿನ ಮಾಧ್ಯಮಗಳು ಪ್ರಸಾರ ಮಾಡಿದ ರೀತಿಗೂ ಖಂಡನೆ ವ್ಯಕ್ತವಾಗಿದೆ.
ಇಂಗ್ಲೆಂಡಿನ ಸಂಸತ್ತು ಇನ್ನೇನು ವಿಸರ್ಜನೆಗೊಂಡು ದೇಶ ಚುನಾವಣೆಗೆ ಸಿದ್ಧವಾಗುತ್ತಿದೆ. ಇತ್ತೀಚೆಗೆ ಸ್ಥಳೀಯ ಮುಸ್ಲಿಮರು ಇಂಗ್ಲೆಂಡಿನಲ್ಲಿ ಮತ ಹಾಕಬೇಡಿ, ಮುಸ್ಲಿಮರಾಗೇ ಉಳಿಯಿರಿ ಎಂದು ಅಭಿಯಾನ ಆರಂಭಿಸಿದ್ದಾರೆ. ಈ ನಡುವೆ ಜನಾಂಗೀತ ದ್ವೇಷ, ಹಲ್ಲೆ ಪ್ರಕರಣಗಳು ಇಂಗ್ಲೆಂಡ್ ಸರ್ಕಾರಕ್ಕೆ ದೊಡ್ಡ ತಲೆನೋವಾಗುವ ಸಾಧ್ಯತೆಯಿದೆ.
ಘಟನೆ ವಿಡಿಯೋ ಕೆಳಗೆ ಇದೆ ಇದು PG ವಿಡಿಯೋ ಪೋಷಕರೇ ಗಮನಿಸಿ..
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications