ಲಂಡನ್: ಸಿಖ್ ಯುವಕನ ಮೇಲೆ ಹಲ್ಲೆ, ವ್ಯಾಪಕ ಖಂಡನೆ
ಲಂಡನ್, ಏ.1: ಬರ್ಮಿಂಗ್ ಹ್ಯಾಮ್ ನಲ್ಲಿ ಸಿಖ್ ಯುವಕನೊಬ್ಬನಿಗೆ ಸ್ಥಳೀಯರು ಹಲ್ಲೆ ಮಾಡಿದ ಸುದ್ದಿ, ವಿಡಿಯೋ ಎಲ್ಲೆಡೆ ವ್ಯಾಪಕ ಚರ್ಚೆಗೊಳಪಟ್ಟಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಈ ಬಗ್ಗೆ ತೀವ್ರ ಖಂಡನೆ ವ್ಯಕ್ತವಾಗಿದೆ.
ಬರ್ಮಿಂಗ್ ಹ್ಯಾಮ್ ನ ಬ್ರಾಡ್ ರೋಡಿನಲ್ಲಿ ನಡೆದ ಈ ಘಟನೆ ಆಘಾತಕಾರಿಯಾಗಿದೆ. ಅಲ್ಲದೆ, ಹಲ್ಲೆ ನಡೆಯುವ ವೇಳೆಯಲ್ಲಿ ಹಾಜರಿದ್ದ ಸಾರ್ವಜನಿಕರು ಯಾರೂ ನೆರವಿಗೆ ಬಂದಿಲ್ಲ ಎಂಬುದು ಇನ್ನೂ ಆತಂಕಕಾರಿ, ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ. [ಏನಾಶ್ವರ್ಯ! ಎಲಿಜಬೆತ್ ರಾಣಿ ವಿರುದ್ಧ ನಿಂತ ಸೇವಕರು]
ಇದು ಧಾರ್ಮಿಕ ವಿಷಮ ಭಾವನೆಯಿಂದ ನಡೆದ ಕೃತ್ಯ ಎಂದು ಹೇಳಲಾಗುತ್ತಿದೆ. ಜನಾಂಗೀಯ ನಿಂದನೆ ಮಾಡಿರುವುದು ಕಂಡು ಬಂದರೆ ಕಠಿಣ ಶಿಕ್ಷೆ ವಿಧಿಸಲಾಗುವುದು. ಆರೋಪಿಗಳನ್ನು ಸೆರೆ ಹಿಡಿಯಲು ಸಾರ್ವಜನಿಕರು ನೆರವಾಗಬೇಕು. ಹಲ್ಲೆಗೊಳಗಾದ ಭಾರತೀಯ ಮೂಲದ ವ್ಯಕ್ತಿ ಘಟನೆ ಬಗ್ಗೆ ಹೆಚ್ಚಿನ ವಿವರ ನೀಡಿದರೆ ಪ್ರಕರಣದ ತನಿಖೆ ಸುಲಭವಾಗಲಿದೆ ಎಂದು ತನಿಖಾಧಿಕಾರಿ ಹೇಳಿದ್ದಾರೆ.

ಅದರೆ, ಘಟನೆ ಬಗ್ಗೆ ಸಿಖ್ ಸಮುದಾಯ ಸಿಟ್ಟಿಗೆದ್ದಿದ್ದು, ಡೈಲಿ ಸಿಖ್ ಅಪ್ಡೇಟ್ಸ್ ಎಂಬ ಫೇಸ್ ಬುಕ್ ಪುಟದಲ್ಲಿ ಘಟನೆಯನ್ನು ಖಂಡಿಸಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಅಲ್ಲದೆ, ಘಟನೆ ದಿನ ಸುಮ್ಮನೆ ನಿಂತು ನೋಡುತ್ತಿದ್ದ ಸಾರ್ವಜನಿಕರಿಗೆ ಛೀಮಾರಿ ಹಾಕಲಾಗಿದೆ. ಘಟನೆಯನ್ನು ಇಂಗ್ಲೆಂಡಿನ ಮಾಧ್ಯಮಗಳು ಪ್ರಸಾರ ಮಾಡಿದ ರೀತಿಗೂ ಖಂಡನೆ ವ್ಯಕ್ತವಾಗಿದೆ.
ಇಂಗ್ಲೆಂಡಿನ ಸಂಸತ್ತು ಇನ್ನೇನು ವಿಸರ್ಜನೆಗೊಂಡು ದೇಶ ಚುನಾವಣೆಗೆ ಸಿದ್ಧವಾಗುತ್ತಿದೆ. ಇತ್ತೀಚೆಗೆ ಸ್ಥಳೀಯ ಮುಸ್ಲಿಮರು ಇಂಗ್ಲೆಂಡಿನಲ್ಲಿ ಮತ ಹಾಕಬೇಡಿ, ಮುಸ್ಲಿಮರಾಗೇ ಉಳಿಯಿರಿ ಎಂದು ಅಭಿಯಾನ ಆರಂಭಿಸಿದ್ದಾರೆ. ಈ ನಡುವೆ ಜನಾಂಗೀತ ದ್ವೇಷ, ಹಲ್ಲೆ ಪ್ರಕರಣಗಳು ಇಂಗ್ಲೆಂಡ್ ಸರ್ಕಾರಕ್ಕೆ ದೊಡ್ಡ ತಲೆನೋವಾಗುವ ಸಾಧ್ಯತೆಯಿದೆ.
ಘಟನೆ ವಿಡಿಯೋ ಕೆಳಗೆ ಇದೆ ಇದು PG ವಿಡಿಯೋ ಪೋಷಕರೇ ಗಮನಿಸಿ..
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications