ಭಾರತ ಪ್ರಮುಖ ಬದಲಾವಣೆಯ ಹಾದಿಯಲ್ಲಿದೆ: ನೀತಿ ಆಯೋಗದ ಉಪಾಧ್ಯಕ್ಷ
ಲಂಡನ್, ಜೂನ್ 20: ಭಾರತ ದೇಶ ಪ್ರಮುಖ ಬದಲಾವಣೆಯ ಹಾದಿಯಲ್ಲಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹೇಳಿದರು.
ಲಂಡನ್ ನಲ್ಲಿ ನಡೆಯುತ್ತಿರುವ ಯುಕೆ-ಇಂಡಿಯಾ ಲೀಡರ್ ಶಿಪ್ ಕಾನ್ಕ್ಲೇವ್ ನಲ್ಲಿ ಮಾತನಾಡಿದ ಅವರು, "ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ನಾವು ಸರಕಾರ ನಡೆಸುವ ರೀತಿ ಮತ್ತು ಉದ್ಯಮದ ಮಾದರಿಯನ್ನು ಬದಲಾಯಿಸಿದ್ದೇವೆ. ನಮ್ಮ ಸರಕಾರ ಬದಲಾವಣೆಗಳನ್ನು ತಂದಿದ್ದು, ಉದ್ಯಮ ನಡೆಸಲು ಬೇಕಾದ ವಾತಾವರಣ ಬದಲಾಗುತ್ತಿದೆ. ನಾವು ಕಂಡುಕೊಂಡ ನಮ್ಮ ದೌರ್ಬಲ್ಯದ ಬಗ್ಗೆ ಹೆಚ್ಚು ಆಸಕ್ತರಾಗಿದ್ದೇವೆ. ಕೃಷಿ ಇದಕ್ಕೊಂದು ಉದಾಹರಣೆ," ಎಂದರು.
"ಕಳೆದ 4 ವರ್ಷಗಳಲ್ಲಿ ತೆಗೆದುಕೊಂಡಿರುವ ಸುಧಾರಣೆಗಳು ಭಾರತದವನ್ನು ಅಭಿವೃದ್ಧಿಯಲ್ಲಿ ಪಥದಲ್ಲಿಟ್ಟಿದೆ. ನಾವು ಭಾರೀ ಬದಲಾವಣೆಯ ಹಾದಿಯಲ್ಲಿದ್ದೇವೆ," ಎಂದು ಅವರು ಹೇಳಿದರು.

ಇದೇ ವೇಳೆ ರಾಜೀವ್ ಕುಮಾರ್, "ನಾನು ಪ್ರಧಾನಿಯವರ ಪರವಾಗಿ, ನಿಮ್ಮ (ಉದ್ಯಮಿಗಳು) ವಿಷಯಗಳ ಬಗ್ಗೆ ಗಮನ ಹರಿಸುತ್ತೇವೆ ಎಂಬ ಭರವಸೆ ನೀಡುತ್ತೇನೆ," ಎಂದು ತಿಳಿಸಿದರು.
Energy challenge being tackled at 2 levels by Niti Ayog: Overall availability of energy and access of energy to the ordinary person That’s the 2 levels Availability and access. @RajivKumar1 Vice Charman @NitiAayog speaks at The UK-India Conclave 2018 #UKIndiaWeek2018 pic.twitter.com/HCJvF6TAZf
— India Inc. (@IndiaIncorp) June 20, 2018
"ವಿದೇಶಿ ಹೂಡಿಕೆದಾರರು ನಾವು ಎಲ್ಲಿ ತಪ್ಪಾಗಿ ನಡೆಯುತ್ತಿದ್ದೇವೆ ಎಂಬುದನ್ನು ನಮಗೆ ತಿಳಿಸಬೇಕು. ಬಂಡವಾಳ ಹೂಡಿಕೆಯನ್ನು ಸುಧಾರಿಸಲು ಸರ್ಕಾರ ಬದ್ಧವಾಗಿದೆ. ಹೂಡಿಕೆಗೆ ಅನುಕೂಲ ಮಾಡಿಕೊಡುವುದು ಸರಕಾರದ ಕೆಲಸ ಎಂಬುದನ್ನು ಪ್ರಧಾನಿ ತೋರಿಸಿಕೊಟ್ಟಿದ್ದಾರೆ," ಎಂದವರು ಇದೇ ಸಂದರ್ಭದಲ್ಲಿ ವಿವರಿಸಿದರು.
ಭಾರತೀಯ ಆರ್ಥಿಕತೆಯ ಪಥ ಮತ್ತು ಮೋದಿ ಸರಕಾರದ ನೀತಿಗಳು ವಿಚಾರದ ಕುರಿತು ಮಾತನಾಡಿದ ಅವರು,ಹೂಡಿಕೆ ಪರಿಸ್ಥಿತಿ ಕಷ್ಟವಿದೆ.ಆದರೆ ಪರಿಸ್ಥಿತಿ ಬದಲಾಯಿಸುತ್ತಿದೆ," ಎಂದು ಆಶಾಭಾವನೆ ವ್ಯಕ್ತಪಡಿಸಿದರು.
Five year plans, rarely used for anything. We have moved away from that and focus on producing action plans’ @RajivKumar1 vicechair @NITIAayog in conversation with @edielush at the UKIndia Conclave 2018 #UKIndiaWeek2018 pic.twitter.com/jLhWvzj31F
— India Inc. (@IndiaIncorp) June 20, 2018
ನೀತಿ ಆಯೋಗದ ಕೆಲಸಗಳ ಬಗ್ಗೆ ಮಾತನಾಡಿದ ಅವರು, "ಹಿಂದಿನ ಯೋಜನಾ ಆಯೋಗದ ಐದು ವರ್ಷಗಳ ಯೋಜನಾ ಕಾರ್ಯತಂತ್ರವನ್ನು ನಾವು ಬಿಟ್ಟಿದ್ದೇವೆ. ನೀತಿ ಆಯೋಗ ಕೇವಲ ಯೋಜನೆಗಳನ್ನು ಸಂಗ್ರಹಿಸುವುದು ಮಾತ್ರವಲ್ಲ, ಆ ವಿಚಾರಗಳನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ. ಉದಾಹರಣೆಗೆ, ಕೃಷಿ-ಸಂಸ್ಕರಣೆ. ನಾವು ರೈತರಿಗೆ ನೇರ ಮಾರುಕಟ್ಟೆಗೆ ಸಂಪರ್ಕ ಕಲ್ಪಿಸಬೇಕಾಗಿದೆ. ಆದ್ದರಿಂದ, ನಾವು ಕೃಷಿ-ಜಾನುವಾರು ಮಾರುಕಟ್ಟೆ ಕಾಯ್ದೆಯ ಕರಡನ್ನು ರಚಿಸಿದ್ದೇವೆ," ಎಂದವರು ಮಾಹಿತಿ ನೀಡಿದರು.
ದೆಹಲಿಯ ವಾಯು ಮಾಲಿನ್ಯದ ಬಗ್ಗೆ ಮಾತನಾಡಿದ ಅವರು, ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವುದು ನಮ್ಮ ಆದ್ಯತೆಯ ಕೆಲಸವಾಗಿದೆ. ಈ ಸಮಸ್ಯೆ ಬಗ್ಗೆ ಗಮನ ಹರಿಸಲು ಈಗಾಗಲೇ ಎರಡು ಟಾಸ್ಕ್ ಫೋರ್ಸ್ ಗಳನ್ನು ರಚಿಸಲಾಗಿದೆ. ಚಳಿಗಾಲದಲ್ಲಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಉತ್ತಮವಾಗುವುದನ್ನು ನೀವು ಕಾಣಬಹುದು ಎಂದು ಅವರು ಹೇಳಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications