ನಾವು ಪಾಠ ಕಲಿತಿದ್ದೇವೆ: ಪ್ರಧಾನಿ ಮೋದಿ ಜತೆ ಮಾತುಕತೆಗೆ ಮುಂದಾದ ಪಾಕ್ ಪ್ರಧಾನಿ- ಇದು ಆರ್ಥಿಕ ಬಿಕ್ಕಟ್ಟಿನ ಪರಿಣಾಮವೇ?
ಇಸ್ಲಾಮಾಬಾದ್, ಜನವರಿ 17: ಪಾಕಿಸ್ತಾನವು ಭಾರತದೊಂದಿಗೆ ಶಾಂತಿಯಿಂದ ಬದುಕಲು ಬಯಸುತ್ತದೆ ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ.
ಕಾಶ್ಮೀರದಂತಹ ಜ್ವಲಂತ ಸಮಸ್ಯೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಗಂಭೀರ ಮತ್ತು ಪ್ರಾಮಾಣಿಕ ಮಾತುಕತೆಗೆ ಅವರು ಮುಂದಾಗಿದ್ದಾರೆ.
ದುಬೈ ಮೂಲದ ಅಲ್ ಅರೇಬಿಯಾ ಟಿವಿಗೆ ನೀಡಿದ ಸಂದರ್ಶನದಲ್ಲಿ, 'ಭಾರತದೊಂದಿಗೆ ಮೂರು ಯುದ್ಧಗಳ ನಂತರ ಪಾಕಿಸ್ತಾನ ತನ್ನ ಪಾಠವನ್ನು ಕಲಿತಿದೆ. ಈಗ ಅದು ತನ್ನ ನೆರೆಹೊರೆಯೊಂದಿಗೆ ಶಾಂತಿಯನ್ನು ಬಯಸುತ್ತದೆ' ಎಂದು ಒತ್ತಿ ಹೇಳಿದ್ದಾರೆ.

'ಭಾರತೀಯ ನಾಯಕತ್ವ ಮತ್ತು ಪ್ರಧಾನಿ ಮೋದಿಗೆ ನನ್ನ ಸಂದೇಶವೆಂದರೆ ಕಾಶ್ಮೀರದಂತಹ ನಮ್ಮ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ನಾವು ಮೇಜಿನೊಂದಿಗೆ ಕುಳಿತು ಗಂಭೀರ ಮತ್ತು ಪ್ರಾಮಾಣಿಕ ಮಾತುಕತೆ ನಡೆಸೋಣ. ಶಾಂತಿಯುತವಾಗಿ ಬದುಕುವುದು ಮತ್ತು ಪ್ರಗತಿ ಸಾಧಿಸುವುದು ನಮ್ಮ ಆದ್ಯತೆ ಆಗಬೇಕು. ಪರಸ್ಪರ ಜಗಳವಾಡುವುದರಿಂದ ಸಮಯ ಮತ್ತು ಸಂಪನ್ಮೂಲಗಳನ್ನು ವ್ಯರ್ಥ ಮಾಡುವುದು ಬೇಡ' ಎಂದು ಶೆಹಬಾಜ್ ಷರೀಫ್ ತಿಳಿಸಿದ್ದಾರೆ.
'ನಾವು ಭಾರತದೊಂದಿಗೆ ಮೂರು ಯುದ್ಧಗಳನ್ನು ಮಾಡಿದ್ದೇವೆ. ಇದು ಜನರಿಗೆ ಹೆಚ್ಚು ದುಃಖ, ಬಡತನ ಮತ್ತು ನಿರುದ್ಯೋಗವನ್ನು ತಂದಿದೆ. ನಾವು ನಮ್ಮ ಪಾಠವನ್ನು ಕಲಿತಿದ್ದೇವೆ. ನಾವು ಭಾರತದೊಂದಿಗೆ ಶಾಂತಿಯಿಂದ ಬದುಕಲು ಬಯಸುತ್ತೇವೆ. ನಮ್ಮ ನಿಜವಾದ ಸಮಸ್ಯೆಗಳನ್ನು ಪರಿಹರಿಸಲು ನಾವು ಸಮರ್ಥರಾಗಿದ್ದೇವೆ' ಎಂದು ಅವರು ಹೇಳಿದ್ದಾರೆ.

'ಭಾರತ ನಮ್ಮ ನೆರೆಯ ದೇಶ. ನಾವು ನೆರೆಹೊರೆಯವರು. ನಾವು ಆಯ್ಕೆಯಿಂದ ನೆರೆಹೊರೆಯವರಲ್ಲದಿದ್ದರೂ, ನಾವು ಶಾಶ್ವತವಾಗಿ ಇರುತ್ತೇವೆ. ಶಾಂತಿಯುತವಾಗಿ ಬದುಕುವುದು ಮತ್ತು ಪ್ರಗತಿ ಸಾಧಿಸುವುದು ನಮ್ಮ ಆದ್ಯತೆ ಆಗಬೇಕಿದೆ' ಎಂದೂ ಪಾಕ್ ಪ್ರಧಾನಿ ತಿಳಿಸಿದ್ದಾರೆ.
ಷರೀಫ್ ಅವರು ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿದ್ದಾರೆ. 'ಪಾಕಿಸ್ತಾನವು ಶಾಂತಿಯನ್ನು ಬಯಸುತ್ತದೆ ಆದರೆ ಕಾಶ್ಮೀರದಲ್ಲಿ ಏನಾಗುತ್ತಿದೆ. ಅದನ್ನು ಅವರು ನಿಲ್ಲಿಸಬೇಕು' ಎಂದು ಹೇಳಿದ್ದಾರೆ.

ಎರಡೂ ದೇಶಗಳು ಎಂಜಿನಿಯರ್ಗಳು, ವೈದ್ಯರು ಮತ್ತು ನುರಿತ ಕಾರ್ಮಿಕರನ್ನು ಹೊಂದಿವೆ ಎಂದು ಅವರು ತಿಳಿಸಿದ್ದಾರೆ. 'ನಾವು ಈ ಆಸ್ತಿಗಳನ್ನು ಸಮೃದ್ಧಿಗಾಗಿ ಬಳಸಿಕೊಳ್ಳಲು ಬಯಸುತ್ತೇವೆ. ಎರಡೂ ರಾಷ್ಟ್ರಗಳು ಬೆಳೆಯಲು ಈ ಪ್ರದೇಶದಲ್ಲಿ ಶಾಂತಿಯನ್ನು ತರಲು ಬಯಸುತ್ತೇವೆ' ಎಂದು ಷರೀಫ್ ತಿಳಿಸಿದ್ದಾರೆ.
'ಪಾಕಿಸ್ತಾನವು ಬಾಂಬ್ಗಳು ಮತ್ತು ಮದ್ದುಗುಂಡುಗಳಿಗಾಗಿ ಸಂಪನ್ಮೂಲಗಳನ್ನು ವ್ಯರ್ಥ ಮಾಡಲು ಬಯಸುವುದಿಲ್ಲ. ನಾವು ಪರಮಾಣು ಶಕ್ತಿಗಳನ್ನು ಹೊಂದಿದ್ದೇವೆ. ಶಸ್ತ್ರಸಜ್ಜಿತರಾಗಿದ್ದೇವೆ. ಒಂದು ವೇಳೆ, ಯುದ್ಧ ಪ್ರಾರಂಭವಾದರೆ ಏನಾದೀತು ಎಂಬ ಪ್ರಶ್ನೆಯನ್ನು ನಾವು ಕೇಳಿಕೊಳ್ಳಬೇಕಿದೆ' ಎಂದು ಅವರು ಹೇಳಿದ್ದಾರೆ.
ಪಾಕಿಸ್ತಾನವು ಈಗ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತದೊಂದಿಗೆ ಶಾಂತಿ ಮಾತಕತೆಯ ಬಗ್ಗೆ ಪಾಕ್ ಪ್ರಧಾನಿ ಮಾತನಾಡುತ್ತಿದ್ದಾರೆ ಎಂದು ವಿಶ್ಲೇಷಕರು ಹೇಳಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications