ಮಂಕಿಪಾಕ್ಸ್ಗೆ ಎಂಪಾಕ್ಸ್ ಎಂದು ನಾಮಕರಣ ಮಾಡಿದ ವಿಶ್ವ ಆರೋಗ್ಯ ಸಂಸ್ಥೆ
ನವದೆಹಲಿ, ನವೆಂಬರ್, 29: ಮಹಾಮಾರಿ ಕೊರೊನಾ ಬಳಿಕ ಮರಿಮಾರಿ ಮಂಕಿಪಾಕ್ಸ್ ಹರಡಿ ದೇಶದ ಜನರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿತ್ತು. ಈಗಾಗಲೇ ಮಹಾಮಾರಿ ಕೊರೊನಾದಿಂದ ದೇಶದ ಜನರು ಎಲ್ಲಾ ಕ್ಷೇತ್ರಗಳಲ್ಲೂ ತತ್ತರಿಸಿ ಹೋಗಿದ್ದಾರೆ. ಆದರೆ ಮತ್ತೆ ಮರಿಮಾರಿ ಮಂಕಿ ಲಗ್ಗೆ ಇಟ್ಟು, ಜನರಲ್ಲಿ ಭಯದ ವಾತಾವರಣವನ್ನು ಹುಟ್ಟುಹಾಕಿತ್ತು. ಇದೀಗ ವಿಶ್ವ ಆರೋಗ್ಯ ಸಂಸ್ಥೆ (WHO) ಅದೇ ಮಂಕಿಪಾಕ್ಸ್ ಎನ್ನುವ ಹೆಸರನ್ನು ಎಂಪಾಕ್ಸ್ ಎಂದು ನಾಮಕರಣ ಮಾಡಿದೆ.
ಜಾಗತಿಕ ತಜ್ಞರೊಂದಿಗಿನ ಸರಣಿ ಸಭೆ
ವಿಶ್ವ ಆರೋಗ್ಯ ಸಂಸ್ಥೆಯು ಜಾಗತಿಕ ತಜ್ಞರೊಂದಿಗಿನ ಸರದಿಯಲ್ಲಿ ಸಮಾಲೋಚನೆ ನಡೆಸಿದ್ದು, ನಂತರ ಸೋಮವಾರ ಮಂಕಿಪಾಕ್ಸ್ಗೆ 'ಮಂಕಿಪಾಕ್ಸ್'ಗೆ ಪರ್ಯಾಯವಾಗಿ 'ಎಂಪಾಕ್ಸ್' ಎಂಬ ಹೊಸ ಪದವನ್ನು ಘೋಷಿಸಿದೆ. ಮಾರಕ ಕಾಯಿಲೆಯ ಹೆಸರಿನ ಸುತ್ತ ಜನಾಂಗೀಯ ಮತ್ತು ಕಳಂಕಿತ ಭಾಷೆಯ ವರದಿಗಳ ಹಿನ್ನೆಲೆಯಲ್ಲಿ ಹೆಸರು ಮರುನಾಮಕರಣ ಮಾಡಲಾಗಿದೆ. ಮಂಕಿಪಾಕ್ಸ್ ಹೆಸರನ್ನು ಹಂತಹಂತವಾಗಿ ತೆಗೆದುಹಾಕುವ ಮೊದಲು ಎರಡೂ ಪದಗಳನ್ನು ಒಂದು ವರ್ಷದವರೆಗೆ ಏಕಕಾಲದಲ್ಲಿ ಬಳಸಲಾಗುತ್ತದೆ. ಗೊಂದಲದ ಬಗ್ಗೆ ತಜ್ಞರು ಎತ್ತಿರುವ ಕಳವಳಗಳನ್ನು ತಗ್ಗಿಸಲು ಇದು ಸಹಾಯ ಮಾಡುತ್ತದೆ ಎಂದು ತಿಳಿಸಿದೆ.

ಇದುವರೆಗೂ ದಾಖಲಾದ ಪ್ರಕರಣಗಳು
ಎಂಪಾಕ್ಸ್ ಒಂದು ಅಪರೂಪದ ಸಂಕ್ರಾಮಿಕ ಕಾಯಿಲೆ ಆಗಿದ್ದು, ಇದು ಮೊದಲನೇಯದಾಗಿ ಮಧ್ಯ ಮತ್ತು ಪಶ್ಚಿಮ ಆಫ್ರಿಕಾದ ಉಷ್ಣವಲಯದ ಮಳೆಕಾಡು ಪ್ರದೇಶಗಳಲ್ಲಿ ಕಂಡುಬರುತ್ತದೆ. ಆದರೆ ಈ ವರ್ಷ ಪ್ರಪಂಚದ ಇತರ ಭಾಗಗಳಲ್ಲಿ ಕಾಣಿಸಿಕೊಂಡು ಜನರಲ್ಲಿ ಭಯದ ವಾತಾವರಣವನ್ನು ಉಂಟುಮಾಡಿತ್ತು. ಇದುವರೆಗೂ ವಿಶ್ವದಲ್ಲಿ 80,000ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದು, 55 ಸಾವುಗಳು ಸಂಭವಿಸಿದೆ. 110 ದೇಶಗಳು ಈ ಸೋಂಕಿಗೆ ಒಳಗಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ. ಸಾರ್ವಜನಿಕ ಮತ್ತು ಖಾಸಗಿ ಸಭೆಗಳಲ್ಲಿ ಹಲವಾರು ನಾಯಕರು ಮತ್ತು ದೇಶಗಳು ಮಂಕಿಪಾಕ್ಸ್ ಹೆಸರಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದವು. ಅಲ್ಲದೆ ಆ ಹೆಸರಿನ ಬದಲಾವಣೆಗೆ ಪ್ರಸ್ತಾಪಿಸಲು ವಿಶ್ವ ಆರೋಗ್ಯಾ ಸಂಸ್ಥೆಯನ್ನು ಕೇಳಿದ್ದವು, ಎಂದು ವಿಶ್ವ ಸಂಸ್ಥೆ ಮರುನಾಮಕರಣದ ಬಗ್ಗೆ ಸ್ಪಷ್ಟನೆ ನೀಡಿದೆ.

ಎಂಪಾಕ್ಸ್ ಹೆಸರಿಡಲು ಪರಿಣಿತರೊಂದಿಗೆ ಚರ್ಚೆ
ಹೊಸ ಹೆಸರುಗಳಿಗೆ ಸಲಹೆಗಳನ್ನು ಸಲ್ಲಿಸಲು ಆಹ್ವಾನಿಸಲಾದ ಪರಿಣಿತರು, ಸಾರ್ವಜನಿಕರಿಂದ ವೀಕ್ಷಣೆಗಳನ್ನು ಸಂಗ್ರಹಿಸಲು ಸಮಾಲೋಚನೆಗಳನ್ನು ನಡೆಸಲಾಯಿತು. ವಿಶ್ವ ಆರೋಗ್ಯ ಸಂಸ್ಥೆಯ ಡೈರೆಕ್ಟರ್ ಜನರಲ್ ಡಾ. ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರೊಂದಿಗಿನ ಚರ್ಚೆಯ ನಂತರ ಒಂದು ವರ್ಷದ ಪರಿವರ್ತನೆಯ ಅವಧಿಯ ನಂತರ ಮಂಕಿಪಾಕ್ಸ್ ಬದಲಿಗೆ ಪಾಕ್ಸ್ ಎನ್ನುವ ಪದವಾಗಿ ಪರಿವರ್ತಿಸಲು ಶಿಫಾರಸು ಮಾಡಲಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications