ಆ.14ರಂದೇ ಪಾಕಿಸ್ತಾನದ ಸ್ವತಂತ್ರ ದಿನಾಚರಣೆ ಏಕೆ?
ಬೆಂಗಳೂರು, ಆ.14: ಬ್ರಿಟಿಷ್ ಸರ್ವಾಧಿಕಾರದಿಂದ ಮುಕ್ತಗೊಂಡು ಆಗಸ್ಟ್ 15, 1947 ರಂದು ಭಾರತ ಹಾಗೂ ಪಾಕಿಸ್ತಾನ ಸ್ವಾತಂತ್ರ್ಯ ಪಡೆದುಕೊಂಡವು. ಆದರೆ, ಭಾರತ ಹಾಗೂ ಪಾಕಿಸ್ತಾನದ ಸ್ವಾತಂತ್ರ್ಯೋತ್ಸವ ಆಚರಣೆ ದಿನದಲ್ಲಿ ಮಾತ್ರ ವ್ಯತ್ಯಾಸ ಎದ್ದು ಕಾಣಬಹುದಾಗಿದೆ. ಭಾರತಕ್ಕಿಂತ ಒಂದು ದಿನ ಮೊದಲು ಪಾಕಿಸ್ತಾನ ಸ್ವತಂತ್ರ ದಿನವನ್ನು ಆಚರಿಸುತ್ತದೆ, ಏಕೆ ಹೀಗೆ?
ಕಾರಣ 1: ಪಾಕಿಸ್ತಾನ ತನ್ನ ಮೊದಲ ಸ್ವಾತಂತ್ರ್ಯೋತ್ಸವವನ್ನು ಆಗಸ್ಟ್ 15ರಂದೇ ಆಚರಿಸಿಕೊಂಡಿತ್ತು. ಅದರೆ, ನಂತರದ ವರ್ಷಗಳಲ್ಲಿ ಆಗಸ್ಟ್ 14ಕ್ಕೆ ಬದಲಾಯಿಸಲಾಯಿತು. ಬ್ರಿಟಿಷ್ ವೈಸ್ ರಾಯ್ ಲಾರ್ಡ್ ಮೌಂಟ್ ಬಾಟನ್ ಅವರು ತಮ್ಮ ಅನುಕೂಲಕ್ಕಾಗಿ ದಿನಾಂಕವನ್ನು ಹಿಂದು ಮುಂದು ಮಾಡಿದರು.
1945ರ ಮಹಾ ವಿಶ್ವಯುದ್ಧದಲ್ಲಿ ಜಪಾನ್ ಶರಣಾಗತಿ ಹಾಗೂ ಮೈತ್ರಿಕೂಟದ ವಿಜಯೋತ್ಸವದ ಸಂಸ್ಮರಣೆಯನ್ನು ಆಚರಿಸಲು ತೆರಳಬೇಕಿದ್ದ ಮೌಂಟ್ ಬಾಟನ್ ಅವರು ಆಗಸ್ಟ್ 14 ರಂದು ಪಾಕಿಸ್ತಾನಕ್ಕೆ ಸ್ವತಂತ್ರ ಘೋಷಿಸಿ, ಆಗಸ್ಟ್ 15 ರಂದು ಭಾರತಕ್ಕೆ ಸ್ವತಂತ್ರ ನೀಡಿದರು.

ಕಾರಣ 2: 1948ರಲ್ಲಿ ಪಾಕಿಸ್ತಾನದಲ್ಲಿ ಸ್ವತಂತ್ರ ದಿನಾಚರಣೆ ಸಂದರ್ಭಕ್ಕೆ ಸರಿಯಾಗಿ ರಂಜಾನ್ ಆಚರಣೆಯೂ ಇತ್ತು. ಹೀಗಾಗಿ ರಂಜಾನ್ ಮಾಸದ 27ನೇ ದಿನಕ್ಕೆ ಅನುಗುಣವಾಗಿ ನಿಗದಿತ ದಿನಕ್ಕಿಂತ ಒಂದು ದಿನ ಮುಂಚಿತವಾಗಿ ಆಗಸ್ಟ್ 14ರಂದೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
1947ರ ಭಾರತೀಯ ಸ್ವತಂತ್ರ ದಿನಾಚರಣೆ ಕಾಯ್ದೆ ಪ್ರಕಾರ '"As from the fifteenth day of August, nineteen hundred and forty-seven, two independent Dominions shall be set up in India, to be known respectively as India and Pakistan." ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಆದರೆ, ಪಾಕಿಸ್ತಾನ ತನ್ನ ಅನುಕೂಲಕ್ಕಾಗಿ ಒಂದು ದಿನ ಮುಂಚಿತವಾಗಿ ಹಬ್ಬ ಆಚರಿಸುತ್ತಾ ಬಂದಿದೆ.
ಪಾಕಿಸ್ತಾನದ ಸ್ಥಾಪಕ ಮಹಮ್ಮದ್ ಆಲಿ ಜಿನ್ನಾ ಅವರು ಆಗಸ್ಟ್ 15ರನ್ನು ಪಾಕಿಸ್ತಾನ ಹುಟ್ಟುಹಬ್ಬ ಆಚರಣೆಗೆ ಕರೆ ನೀಡಿದ್ದರು. 1948ರ ಜುಲೈನಲ್ಲಿ ಪಾಕಿಸ್ತಾನ ಅಂಚೆ ಕಚೇರಿ ಪ್ರಕಟಿಸಿದ ಗೌರವ ಸೂಚಕ ಅಂಚೆ ಚೀಟಿಗಳಲ್ಲೂ ಆಗಸ್ಟ್ 15, ಪಾಕಿಸ್ತಾನದ ಸ್ವತಂತ್ರ ದಿನಾಚರಣೆ ಎಂದೇ ನಮೂದಿಸಲಾಗಿತ್ತು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications