ಜೂಲಿಯನ್ ಅಸಾಂಜೆಗೆ ಪೌರತ್ವ ನೀಡಿದ ಈಕ್ವೆಡಾರ್
ಲಂಡನ್, ಜನವರಿ 12: ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸಾಂಜೆಗೆ ಈಕ್ವೆಡಾರ್ ಪೌರತ್ವ ನೀಡಿದೆ. ಇದರಿಂದಾಗಿ ಕಳೆದ ಐದು ವರ್ಷಗಳಿಂದ ಈಕ್ವೆಡಾರ್ ನ ಲಂಡನ್ ರಾಯಭಾರ ಕಚೇರಿಯಲ್ಲಿ ಆಶ್ರಯ ಪಡೆಯುತ್ತಿರುವ ಅಸಾಂಜೆ ಅಧಿಕೃತವಾಗಿ ಈಕ್ವೆಡಾರ್ ಪ್ರಜೆಯಾಗಿದ್ದಾರೆ.
ಡಿಸೆಂಬರ್ ನಲ್ಲಿ ಪೌರತ್ವಕ್ಕಾಗಿ ಅಸಾಂಜೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಪುರಸ್ಕರಿಸಿರುವುದಾಗಿ ಈಕ್ವೆಡಾರ್ ವಿದೇಶಾಂಗ ಸಚಿವೆ ಮಾರಿಯಾ ಫೆರ್ನಾಂಡ ಎಸ್ಪಿನೋಸಾ ಹೇಳಿದ್ದಾರೆ.
'ನ್ಯಾಚುರಲೈಸೇಷನ್' ಎಂಬ ವಿಭಾಗದಲ್ಲಿ ಅವರಿಗೆ ಪೌರತ್ವ ನೀಲಾಗಿದೆ. ಈಕ್ವೆಡಾರ್ ನಲ್ಲಿ 'ನ್ಯಾಚುರಲೈಸೇಷನ್' ಅಂದರೆ ನಿರಾಶ್ರಿತರಿಗೆ ರಕ್ಷಣೆ ನೀಡುವ ಪೌರತ್ವ ವಿಧಾನವಾಗಿದೆ.

ಆಸ್ಟ್ರೇಲಿಯಾದಿಂದ ಈಕ್ವೆಡಾರ್
ಆಸ್ಟ್ರೇಲಿಯಾ ಮೂಲದ ಜೂಲಿಯನ್ ಅಸಾಂಜೆ 2012ರಲ್ಲಿ ಸ್ವೀಡನ್ ಗೆ ಹಸ್ತಾಂತರವಾಗುವ ಭಯದಿಂದ ಈಕ್ವೆಡಾರ್ ರಾಯಭಾರಿ ಕಚೇರಿ ಪ್ರವೇಶಿಸಿ ಆಶ್ರಯ ಪಡೆದಿದ್ದರು. ಅವರ ಮೇಲೆ ಸ್ವೀಡನ್ನಿನಲ್ಲಿ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಯುತ್ತಿತ್ತು.
ಆದರೆ ಅಸಾಂಜೆಗೆ ಸ್ವೀಡನ್ ಗಿಂತ ಹೆಚ್ಚಾಗಿ ಅಮೆರಿಕಾದ ಭಯವಿತ್ತು. ಸೇನೆ ಮತ್ತು ರಾಜತಾಂತ್ರಿಕ ದಾಖಲೆಗಳನ್ನು ವಿಕಿಲೀಕ್ಸ್ ನಲ್ಲಿ ಪ್ರಕಟಿಸಿದ್ದಕ್ಕಾಗಿ ಅಲ್ಲಿ ವಿಚಾರಣೆ ಎದುರಿಸಬೇಕಾಗಿ ಬರಬಹುದು ಎಂಬ ಭಯದಿಂದ ಈಕ್ವೆಡಾರ್ ಆಶ್ರಯ ಪಡೆದುಕೊಂಡಿದ್ದರು.
ಕಳೆದ ವರ್ಷವಷ್ಟೇ ಸ್ವೀಡನ್ ಅಸಾಂಜೆ ಮೇಲಿದ್ದ ಅತ್ಯಾಚಾರ ಪ್ರಕರಣವನ್ನು ಕೈಬಿಟ್ಟಿತ್ತು. ಆದರೆ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರನ್ನು ಬಂಧಿಸುವುದಾಗಿ ಬ್ರಿಟನ್ ಹೇಳಿದ್ದರಿಂದ ಅಸಾಂಜೆ ಇನ್ನೂ ರಾಯಭಾರ ಕಚೇರಿಯಲ್ಲೇ ಆಶ್ರಯ ಪಡೆಯುತ್ತಿದ್ದಾರೆ.
ಈಕ್ವೆಡಾರ್ ತನಗೆ ಪೌರತ್ವ ನೀಡುತ್ತಿದ್ದಂತೆ ಈಕ್ವೆಡಾರ್ ಫುಟ್ಬಾಲ್ ತಂಡದ ಜೆರ್ಸಿ ತೊಟ್ಟ ಚಿತ್ರವನ್ನು ಅಸಾಂಜೆ ಟ್ವೀಟ್ ಮಾಡಿದ್ದಾರೆ.
ಈಕ್ವೆಡಾರ್ ರಾಯಭಾರ ಕಚೇರಿಯಿಂದ ಅಸಾಂಜೆಯನ್ನು ಹೊರತರಲು ಅವರಿಗೆ ರಾಜತಾಂತ್ರಿಕ ಹುದ್ದೆ ನೀಡುವಂತೆ ಬ್ರಿಟನ್ ಗೆ ಈಕ್ವೆಡಾರ್ ಮನವಿ ಮಾಡಿಕೊಂಡಿತ್ತು. ಆದರೆ ಈಕ್ವೆಡಾರ್ ಮನವಿಯನ್ನು ಬ್ರಿಟನ್ ತಿರಸ್ಕರಿಸಿದ್ದು ರಾಯಭಾರ ಕಚೇರಿಯಿಂದ ಹೊರ ಬಂದು ಅಸಾಂಜೆ ವಿಚಾರಣೆ ಎದುರಿಸಬೇಕು ಎಂದು ತಿರುಗೇಟು ನೀಡಿದೆ.
ಹೀಗಾಗಿ ಅಸಾಂಜೆ ಜೀವ ರಕ್ಷಣೆ ಬಗ್ಗೆ ಈಕ್ವೆಡಾರ್ ಕಳವಳಗೊಂಡಿದ್ದು ಅವರಿಗೆ ಜೀವನ ಪರ್ಯಂತ ರಕ್ಷಣೆ ನೀಡುವುದಾಗಿ ಭರವಸೆ ನೀಡಿದೆ. ಜತೆಗೆ ಸಮಸ್ಯೆಯನ್ನು ಬಗೆಹರಿಸಲು ಇರುವ ಬೇರೆ ದಾರಿಗಳ ಬಗ್ಗೆಯೂ ಅದು ಚಿಂತನೆ ನಡೆಸುತ್ತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications