ಮಹಿಳೆಯ ಮಾಜಿ ಪ್ರಿಯತಮನ ಕತ್ತರಿಸಿ ಅಡುಗೆ ಮಾಡಿದ್ದು ಸುಳ್ಳು!
ಅಬುಧಾಬಿ, ನವೆಂಬರ್ 23 : ಮಹಿಳೆಯೊಬ್ಬಳು ತನ್ನ ಮಾಜಿ ಪ್ರಿಯತಮನನ್ನೇ ಕೊಂದು ತುಂಡುತುಂಡು ಮಾಡಿ, ದೇಹದ ಭಾಗವನ್ನು ಬೇಯಿಸಿ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರಿಗೆ ಬಡಿಸಿದ್ದಾಳೆ ಎಂಬ ಸುದ್ದಿ ಶುದ್ಧ ಸುಳ್ಳು ಎಂದು ಅಬುಧಾಬಿ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತಂತೆ ಮಾಧ್ಯಮಗಳಲ್ಲಿ ನಾನಾ ರೀತಿಯ ಸುದ್ದಿಗಳು ಹರಿದಾಡುತ್ತಿದ್ದವು. ಇಂಥ ಸುದ್ದಿಯನ್ನು ಯಾರೂ ನಂಬಬಾರದು, ಮಾಧ್ಯಮದವರೂ ಇಂಥ ಸುದ್ದಿ ಹಬ್ಬಿಸಬಾರದು, ಪೊಲೀಸರು ಕೂಡ ಈ ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಾರದು. ಅಧಿಕಾರಿಗಳು ನೀಡಿದ ಹೇಳಿಕೆಯನ್ನು ಮಾತ್ರ ನಂಬಬೇಕಾಗಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
ಆ ಮಹಿಳೆ ತನ್ನ ಮಾಜಿ ಪ್ರಿಯತಮನನ್ನು ಕೊಂದಿರುವ ಬಗ್ಗೆ ಪೊಲೀಸರು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ, ಆಕೆ ಕೆಲಸಗಾರರಿಗೆ ಅಡುಗೆ ಮಾಡಿ ಬಡಿಸಿರುವ ಸಂಗತಿ ಸತ್ಯಕ್ಕೆ ದೂರವಾದುದು, ಓದುಗರನ್ನು ದಾರಿ ತಪ್ಪಿಸುವಂಥದ್ದು. ಆಕೆ ಮಾಜಿ ಪ್ರಿಯಕರನ ದೇಹವನ್ನು ಕುಕ್ ಮಾಡಿಲ್ಲ, ಆದರೆ, ಮಾಧ್ಯಮದವರೇ ಸುಳ್ಳು ಸುದ್ದಿಯನ್ನು 'ಕುಕ್' (ಸುಳ್ಳು ಸುದ್ದಿ ಸೃಷ್ಟಿ) ಮಾಡಿದ್ದಾರೆ ಎಂದು ಅಬುಧಾಬಿ ಪೊಲೀಸರು ತಿಳಿಸಿದ್ದಾರೆ.

ಇಂಥ ಸುಳ್ಳು ಸುದ್ದಿಗಳಿಂದ ತನಿಖೆಯ ಮೇಲೆ ದುಷ್ಪರಿಣಾಮ ಬೀರುತ್ತದೆ. ಅಲ್ಲದೆ, ಇಂಥ ಸುದ್ದಿಗಳು ಜನರ ನಂಬಿಕೆಯ ಮೇಲೆ ಕೂಡ ಅಡ್ಡ ಪರಿಣಾಮ ಬೀರುತ್ತದೆ. ಇಂತಹ ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸುವುದರಿಂದ ದೇಶದ ಭದ್ರತೆಯ ಮೇಲೆ ಕೂಡ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಅವರು ತಿಳಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications